ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರೋದು ಪಕ್ಕಾ ಎಂದ ಶಾಮನೂರು ಶಿವಶಂಕರಪ್ಪ!

Published : Apr 16, 2023, 11:08 AM IST
ಜಗದೀಶ್ ಶೆಟ್ಟರ್ ಕಾಂಗ್ರೆಸ್  ಸೇರೋದು ಪಕ್ಕಾ ಎಂದ ಶಾಮನೂರು ಶಿವಶಂಕರಪ್ಪ!

ಸಾರಾಂಶ

ಜಗದೀಶ್ ಶೆಟ್ಟರ್ ನಮ್ಮ ಬೀಗರು. ನಾನು ಇನ್ನು  ಅವರ ಜತೆಗೆ ಮಾತಾಡಿಲ್ಲ. ಅವರು ಕಾಂಗ್ರೆಸ್  ಸೇರೋದು ಪಕ್ಕಾ ಎಂದು ದಾವಣಗೆರೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿಕೆ ನೀಡಿದ್ದಾರೆ.

ದಾವಣಗೆರೆ (ಏ.16): ಜಗದೀಶ್ ಶೆಟ್ಟರ್ ನಮ್ಮ ಬೀಗರು. ನಾನು ಇನ್ನು  ಅವರ ಜತೆಗೆ ಮಾತಾಡಿಲ್ಲ. ಅವರು ಕಾಂಗ್ರೆಸ್ ಬರಬಹುದು ಎಂದು ದಾವಣಗೆರೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿ  ಕೇಂದ್ರ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ಗುಡ್‌ಬೈ ಹೇಳಲು ತೀರ್ಮಾನಿದ್ದು,  ಶಾಮನೂರು ಶಿವಶಂಕರಪ್ಪ  ಅವರು ನೀಡಿರುವ ಈ ಹೇಳಿಕೆ ಮಹತ್ವ ಪಡೆದಿದೆ. ಬಿಜೆಪಿ ಇಂತಹ‌ ಕೆಲಸ ಮಾಡಿ ಎಲ್ಲವನ್ನು ಕಳೆದುಕೊಳ್ಳುತ್ತಾರೆ. ಬಿಜೆಪಿ ರಾಜ್ಯದಲ್ಲಿ 60 ಸೀಟು ಕೂಡ ಗೆಲ್ಲಲ್ಲ. ಕಾಂಗ್ರೆಸ್ ಗೆ ಬಂದ್ರೆ ಟಿಕೆಟ್ ಕೊಡಲೇಬೇಕಾಗುತ್ತದೆ. ಟಿಕೆಟ್  ಕೊಟ್ಟರೇಬೆ ಅವರು ಕಾಂಗ್ರೆಸ್ ಸೇರೋದು. ಕಾಂಗ್ರೆಸ್ ಗೆ ಅವರು ಬರೋದು ಪಕ್ಕಾ. ನಮ್ಮ ಮಗ ಅವರ ಜತೆಗೆ ಮಾತನಾಡುತ್ತಾನೆ. 

ಕಟ್ಟಿದ ಮನೆಯಿಂದ ಹೊರಹೋಗಲು ದುಃಖವಾಗ್ತಿದೆ: ಜಗದೀಶ ಶೆಟ್ಟರ್ ಭಾವುಕ ಮಾತು

ನಮ್ಮ ಕಾಂಗ್ರೆಸ್ ಹಿರಿಯ ನಾಯಕರು ಈಗಾಗಲೇ ಮಾತನಾಡಿದ್ದಾರೆ. ಲಿಂಗಾಯತ ನಾಯಕರು ಒಬ್ಬೊಬ್ಬರಾಗಿ ಕಾಂಗ್ರೆಸ್ ಗೆ ಬರುತ್ತಿದ್ದಾರೆ. ಮುಂದೆ ಏನಾಗೊತ್ತೋ ಕಾದು ನೋಡೋಣ ಎಂದು ಶಾಮನೂರು ಶಿವಶಂಕರಪ್ಪ ಹೇಳಿಕೆ ನೀಡಿದ್ದಾರೆ.

ಬಿಜೆಪಿಯಲ್ಲಿ ರಾಜೀನಾಮೆ ಪರ್ವ, ಶಾಸಕ ಸ್ಥಾನಕ್ಕೆ ನೆಹರು ಓಲೇಕಾರ್​ ರಾಜೀನಾಮೆ..!

ಏಪ್ರಿಲ್‌ 13 ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ.  ಏಪ್ರಿಲ್‌ 20 ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕವಾಗಿದ್ದು, ಏಪ್ರಿಲ್‌ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಹಾಗೆ, ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಏಪ್ರಿಲ್‌ 24 ಆಗಿದೆ.  ಮೇ 10 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ
CM-DCM ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ ಪುತ್ರ ಶಾಕಿಂಗ್ ಹೇಳಿಕೆ