Karnataka Election Result 2023: ಸೋತರೂ ಜಗದೀಶ್‌ ಶೆಟ್ಟರ್‌ಗೆ ಸಚಿವಗಿರಿ?

Published : May 16, 2023, 06:32 AM ISTUpdated : May 16, 2023, 07:46 AM IST
Karnataka Election Result 2023: ಸೋತರೂ ಜಗದೀಶ್‌ ಶೆಟ್ಟರ್‌ಗೆ ಸಚಿವಗಿರಿ?

ಸಾರಾಂಶ

ಎಂಎಲ್‌ಸಿ ಮಾಡಿ ಸಚಿವ ಸ್ಥಾನ ನೀಡುವ ಬಗ್ಗೆ ಕಾಂಗ್ರೆಸ್‌ ವರಿಷ್ಠರ ಒಲವು, ಸೋತರೆಂದು ಸ್ಥಾನ ನೀಡದಿದ್ದರೆ ಎಂಪಿ ಚುನಾವಣೆಯಲ್ಲಿ ಪಕ್ಷಕ್ಕೆ ಹೊಡೆತ ಸಂಭವ. 

ಹುಬ್ಬಳ್ಳಿ(ಮೇ.16):  ತಾವು ಸೋತರೂ ಪಕ್ಷಕ್ಕೆ ಲಾಭ ಮಾಡಿಕೊಟ್ಟರುವ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರನ್ನು ಕಾಂಗ್ರೆಸ್‌ ಸರ್ಕಾರದಲ್ಲಿ ಸಚಿವರನ್ನಾಗಿ ಮಾಡಿ, ಉತ್ತಮ ಸ್ಥಾನಮಾನ ಕಲ್ಪಿಸಲು ‘ಕೈ’ ಪಡೆ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

30 ವರ್ಷಗಳಿಂದ ಉತ್ತರ ಕರ್ನಾಟಕ ಭಾಗದಲ್ಲಿ ಶೆಟ್ಟರ್‌ ಬಿಜೆಪಿ ಕಟ್ಟಿದವರಲ್ಲಿ ಒಬ್ಬರು. ಕೊನೇ ಘಳಿಗೆಯಲ್ಲಿ ಪಕ್ಷ ಗೌರವದಿಂದ ನಡೆದುಕೊಳ್ಳಲಿಲ್ಲ ಎಂದು ಆರೋಪಿಸಿ ಕಾಂಗ್ರೆಸ್‌ಗೆ ಜಿಗಿದಿದ್ದರು. ಆದರೆ, ಸೆಂಟ್ರಲ್‌ ಕ್ಷೇತ್ರದಲ್ಲಿ ಸೋತರೂ ಅವರು ಕಾಂಗ್ರೆಸ್‌ ಸೇರಿದ್ದರ ಲಾಭ ಪಕ್ಷಕ್ಕಾಗಿದೆ. ಸುತ್ತಮುತ್ತಲಿನ ನಾಲ್ಕಾರು ಜಿಲ್ಲೆಗಳಲ್ಲಿ ಕಾಂಗ್ರೆಸ್‌ಗೆ ಹೆಚ್ಚಿನ ಸ್ಥಾನ ಬರಲು ಇವರ ಆಗಮನವೂ ಕಾರಣವಾಗಿದೆ. ಕಾಂಗ್ರೆಸ್ಸಿನೊಂದಿಗೆ ಇರದ ಲಿಂಗಾಯತ ಸಮುದಾಯ ಈ ಸಲ ಪಕ್ಷಕ್ಕೆ ಬೆಂಬಲ ನೀಡಿದೆ ಎಂದರೆ ಅದಕ್ಕೆ ಶೆಟ್ಟರ್‌ ಕೂಡ ಕಾರಣ ಎನ್ನುವುದನ್ನು ಕಾಂಗ್ರೆಸ್‌ ಮನಗಂಡಿದೆ.

ಜೋಶಿ 4 ಬಾರಿ ಸಂಸದ, ಮಂತ್ರಿಯಾಗಿದ್ದಾರೆ ರಾಜಕಾರಣ ಬಿಡಲಿ: ಜಗದೀಶ್‌ ಶೆಟ್ಟರ್‌ ಪ್ರಶ್ನೆ

ಆದಕಾರಣ ಶೆಟ್ಟರ್‌ ಸೋತಿದ್ದಾರೆ ಎಂದು ಯಾವುದೇ ಸ್ಥಾನಮಾನ ನೀಡದಿದ್ದರೆ ಮುಂದೆ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಹೊಡೆತ ಬೀಳಬಹುದು. ಸದ್ಯ ಅವರನ್ನು ಎಂಎಲ್ಸಿ ಮಾಡಿ ಸರ್ಕಾರದಲ್ಲಿ ಉನ್ನತ ಹುದ್ದೆ ನೀಡಿದರೆ ಪಕ್ಷಕ್ಕೂ ಅನುಕೂಲವಾಗುತ್ತದೆ ಎಂಬ ಅಭಿಪ್ರಾಯಕ್ಕೆ ಪಕ್ಷದ ಮುಖಂಡರು ಬಂದಿದ್ದಾರೆನ್ನಲಾಗಿದೆ. ಇದರಿಂದ ಈ ಭಾಗದಲ್ಲಿ ಕಾಂಗ್ರೆಸ್ಸಿಗೆ ಬಲ ಬರಲಿದೆ ಎಂಬ ಅಭಿಪ್ರಾಯ ಕಾಂಗ್ರೆಸ್ಸಿಗರದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ
ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ