ಜನಾರ್ದನ ರೆಡ್ಡಿ ಮಾವ ಚುನಾವಣಾ ಸ್ಪರ್ಧೆ : ಎಲ್ಲಿಂದ..?

Published : Feb 26, 2019, 10:51 AM IST
ಜನಾರ್ದನ ರೆಡ್ಡಿ ಮಾವ ಚುನಾವಣಾ ಸ್ಪರ್ಧೆ : ಎಲ್ಲಿಂದ..?

ಸಾರಾಂಶ

ಮಾಜಿ ಸಚಿವ ಜನಾರ್ದನ ರೆಡ್ಡಿ ಮಾವ ಇದೀಗ ರಾಜಕೀಯಕ್ಕೆ ಪ್ರವೇಶ ಮಾಡಲು ಸಜ್ಜಾಗಿದ್ದಾರೆ. ಬೇರೆ ಪಕ್ಷವೊಂದರಿಂದ ರಾಜಕೀಯಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ. 

ಬಳ್ಳಾರಿ :  ಮಾಜಿ ಸಚಿವ ಜನಾರ್ದನ ರೆಡ್ಡಿ ಇದೀಗ ಆಂಧ್ರಪ್ರದೇಶದ ಚುನಾವಣೆಯತ್ತ ದೃಷ್ಟಿನೆಟ್ಟಿದ್ದಾರೆ ಎನ್ನಲಾಗುತ್ತಿದ್ದು, ತಮ್ಮ ಮಾವ ಪರಮೇಶ್ವರ ರೆಡ್ಡಿ (ಪತ್ನಿ ತಂದೆ) ಅವರನ್ನು ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಗೆ ಸ್ಪರ್ಧೆಗಿಳಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ, ದಿವಂಗತ ವೈ.ಎಸ್‌. ರಾಜಶೇಖರ ರೆಡ್ಡಿ ಜತೆ ಜನಾರ್ದನ ರೆಡ್ಡಿಗೆ ಆತ್ಮೀಯ ಒಡನಾಟವಿತ್ತು. ವೈಎಸ್ಸಾರ್‌ ವಿಮಾನ ಅಪಘಾತದಲ್ಲಿ ಮೃತಪಟ್ಟಬಳಿಕ, ಅವರ ಪುತ್ರ ವೈ.ಎಸ್‌.ಜಗನ್‌ ಜತೆ ಈ ಒಡನಾಟ ಮುಂದುವರೆದಿತ್ತು. 

ಈ ಹಿನ್ನೆಲೆಯಲ್ಲಿ ವೈಸ್ಸಾರ್‌ ಪಕ್ಷದಿಂದ ಅವರ ಮಾವನನ್ನು ಕಣಕ್ಕಳಿಸುವುದು ಬಹುತೇಕ ಖಚಿತವಾಗಿದೆ. ಮುಂಬರುವ ಲೋಕಸಭಾ ಚುನಾವಣೆಯ ಅಧಿಸೂಚನೆ ಹೊರಬೀಳುವ ವೇಳೆ, ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆ ಘೋಷಣೆಯಾಗಲಿದ್ದು, ಮಾವನ ಮುಖಾಂತರ ಆಂಧ್ರ ರಾಜಕೀಯಕ್ಕೆ ಎಂಟ್ರಿ ಕೊಡಲು ಜನಾರ್ದನ ರೆಡ್ಡಿ ಸಿದ್ಧರಾಗುತ್ತಿದ್ದಾರೆ ಎನ್ನಲಾಗಿದೆ.

ರೆಡ್ಡಿ ಮಾವ ಹಾಗೂ ಅತ್ತೆ ಬಳ್ಳಾರಿಯ ಇನ್ನಾರೆಡ್ಡಿ ಕಾಲೋನಿಯಲ್ಲಿ ವಾಸವಾಗಿದ್ದು, ಮೂಲತಃ ಆಂಧ್ರಪ್ರದೇಶದ ಕರ್ನೂಲ್‌ ಜಿಲ್ಲೆಯ ನಂದ್ಯಾಲದವರು. ಜನಾರ್ದನ ರೆಡ್ಡಿ ಗಣಿ ಹಾಗೂ ರಾಜಕೀಯದಲ್ಲಿ ಮುನ್ನಲೆಗೆ ಬಂದ ಬಳಿಕ ಬಳ್ಳಾರಿಗೆ ಬಂದು ನೆಲೆಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸದನದಲ್ಲಿ ಶಾ ಒತ್ತಡದಲ್ಲಿದ್ರು, ಕೈ ಕಂಪಿಸುತ್ತಿತ್ತು : ರಾಹುಲ್‌
ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ