ಮಂಡ್ಯ: ಜನರ ಅಹವಾಲು ಸ್ವೀಕರಿಸುತ್ತಲೇ ಊಟ ಮಾಡಿದ ಹೆಚ್ಡಿಕೆ!

Published : Jul 05, 2024, 05:37 PM IST
ಮಂಡ್ಯ: ಜನರ ಅಹವಾಲು ಸ್ವೀಕರಿಸುತ್ತಲೇ ಊಟ ಮಾಡಿದ ಹೆಚ್ಡಿಕೆ!

ಸಾರಾಂಶ

ಲೋಕಸಭಾ ಚುನಾವಣೆಯಲ್ಲಿ ಭರ್ಜರಿಯಾಗಿದ್ದ ಗೆಲುವು ಸಾಧಿಸಿ ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಕೇಂದ್ರ ಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಮಂಡ್ಯ ಜಿಲ್ಲೆಯಲ್ಲಿ ಜನತಾ ದರ್ಶನ ನಡೆಸಿದರು. 

ಮಂಡ್ಯ (ಜು.5): ಲೋಕಸಭಾ ಚುನಾವಣೆಯಲ್ಲಿ ಭರ್ಜರಿಯಾಗಿದ್ದ ಗೆಲುವು ಸಾಧಿಸಿ ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಕೇಂದ್ರ ಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಮಂಡ್ಯ ಜಿಲ್ಲೆಯಲ್ಲಿ ಜನತಾ ದರ್ಶನ ನಡೆಸಿದರು. 

 ಜನತಾ ದರ್ಶನದಲ್ಲಿ ಕಿಕ್ಕಿರಿದು ತುಂಬಿದ್ದ ಜನರಿಂದ ನೂಕುನುಗ್ಗಲು ನಡೆಯಿತು. ಜನರನ್ನ ನಿಯಂತ್ರಿಸಲು ಪೊಲೀಸರು ಹಾಗೂ ಜೆಡಿಎಸ್ ಮುಖಂಡರ ಹರಸಾಹಸಪಡುವಂತಾಯಿತು. ಹೆಚ್‌ಡಿ ಕುಮಾರಸ್ವಾಮಿ(HD Kumaraswamy) ಬಳಿ ಸಮಸ್ಯೆ ಹೇಳಿಕೊಳ್ಳಲು ಆಗಮಿಸಿದ್ದ ನೂರಾರು ಜನರು. ವೇದಿಕೆ ಮೇಲೆ ಹಾಗೂ ಕೆಳಗೆ ಗುಂಪುಗುಂಪಾಗಿ ನಿಂತು ನೂಕುನುಗ್ಗಲು ಕಾರ್ಯಕ್ರಮಕ್ಕೆ ಬಂದವರ ಪೈಕಿ ಕುಮಾರಣ್ಣನ ನೋಡಲು ಬಂದವರು ಅಧಿಕವಾಗಿದ್ದರು. ಮನವಿ ಸಲ್ಲಿಸಿಕೆಗೆ ಆಗಮಿಸಿರುವವರ ಜೊತೆಗೆ ಕುಮಾರಸ್ವಾಮಿಯವರನ್ನ ನೋಡಲು ಬಂದಿರುವ ಜೆಡಿಎಸ್ ಕಾರ್ಯಕರ್ತರು. ಇಷ್ಟೆಲ್ಲ ನೂಕುನುಗ್ಗಲು ಗಲಾಟೆ ನಡುವೆಯೂ ತಾಳ್ಮೆ ಕಳೆದುಕೊಳ್ಳದೇ ಜನರ ಸಮಸ್ಯೆ ಆಲಿಸಿದರು.

ಮುಡಾ ಹಗರಣ: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿಯೋ ನೈತಿಕತೆ ಇಲ್ಲ - ರವಿಕೃಷ್ಣಾ ರೆಡ್ಡಿ

ಬೆಳಗ್ಗೆ 11.45ಕ್ಕೆ ಪ್ರಾರಂಭವಾದ ಜನತಾ ದರ್ಶನ(Mandya Janata darshana) ಮಧ್ಯಾಹ್ನ 3 ಗಂಟೆಯಾದರೂ ಊಟಕ್ಕೆ ತೆರಳದೇ, ಬ್ರೇಕ್ ತೆಗೆದುಕೊಳ್ಳದೇ ಜನರ ಸಮಸ್ಯೆ ಆಲಿಸಿದರು. ಸರ್ಕಾರದ ಸೂಚನೆ ಹಿನ್ನಲೆ ಕೇಂದ್ರ ಸಚಿವರ ಜನತಾ ದರ್ಶನಕ್ಕೆ ಅಧಿಕಾರಿಗಳು ಗೈರಾಗಿದ್ದರು. ಅಧಿಕಾರಿಗಳು ಬಾರದಿದ್ದರೂ ಜನರ ಸಮಸ್ಯೆ ಆಲಿಸಿ ಸ್ಥಳದಲ್ಲೇ ಪರಿಹಾರ ಒದಗಿಸಿದ ಕೇಂದ್ರ ಸಚಿವರು.

ಸಿಬಿಐ ತನಿಖೆಗೆ ಬಿಜೆಪಿ ಪಟ್ಟು..ಸಿದ್ದರಾಮಯ್ಯ ಹೇಳಿದ 60 ಕೋಟಿಯ ರಹಸ್ಯವೇನು ?

ಊಟ ಮಾಡುತ್ತಲೇ ಅಹವಾಲು ಸ್ವೀಕರಿಸಿದ ಎಚ್‌ಡಿಕೆ!

ಬೆಳಗ್ಗಿನಿಂದ ಬಿಡುವಿಲ್ಲದೇ ಜನರ ಸಮಸ್ಯೆ ಆಲಿಸಿದ ಕೇಂದ್ರ ಸಚಿವ ಕುಮಾರಸ್ವಾಮಿಯವರು ಮಧ್ಯಾಹ್ನ 3 ಗಂಟೆ ಬಳಿಕವೂ ಜನರು ಕಡಿಮೆಯಾಗಲಿಲ್ಲ. ಹೀಗಾಗಿ ಜನರು ಅಹವಾಲು ಸ್ವೀಕರಿಸುತ್ತಲೇ ಊಟ ಮಾಡಿದರು. ಬೆಳಗ್ಗೆಯಿಂದಲೂ ಸತತವಾಗಿ ಜನರ ಸಮಸ್ಯೆ ಆಲಿಸಿದರು. ಜನತಾ ದರ್ಶನಕ್ಕೆ ಬಂದವರ ಪೈಕಿ ಶಾಲಾ, ಕಾಲೇಜು ಶುಲ್ಕ ಕಟ್ಟಲಾಗದೇ ಹೆಚ್ಡಿಕೆ ಸಹಾಯ ಕೇಳಿ ಬಂದಿದ್ದ ಕೆಲವರು.ಮತ್ತೆ ಕೆಲ ವಿದ್ಯಾರ್ಥಿನಿಯರಿಂದ ಹಾಸ್ಟೆಲ್ ಗಾಗಿ ಬಂದಿದ್ದರು. ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಮನವಿ ಪತ್ರ ಹಿಡಿದು ಬಂದ ನೂರಾರು ಜನರ ಎಲ್ಲಾ ಕುಂದುಕೊರತೆಗಳನ್ನ ಸಮಚಿತ್ತದಿಂದ ಆಲಿಸಿದ ಎಚ್‌ಡಿ ಕುಮಾರಸ್ವಾಮಿ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ
Karnataka News Live: ವೈದ್ಯರ ವರದಿ ಬಳಿಕ ಜೈಲಿನಲ್ಲಿ ನಟ ದರ್ಶನ್‌ಗೆ ಫಿಸಿಯೋಥೆರಪಿ ಚಿಕಿತ್ಸೆ ಸ್ಥಗಿತ