ಹಾಸನದಲ್ಲಿ ಇಂದು ಕಾಂಗ್ರೆಸ್ ಶಕ್ತಿ ಪ್ರದರ್ಶನ: ಜೆಡಿಎಸ್‌ ಭದ್ರಕೋಟೇಲಿ ಬಲ ಪ್ರದರ್ಶನಕ್ಕೆ ಕೈ ತಯಾರಿ!

Published : Dec 05, 2024, 06:45 AM IST
ಹಾಸನದಲ್ಲಿ ಇಂದು ಕಾಂಗ್ರೆಸ್ ಶಕ್ತಿ ಪ್ರದರ್ಶನ: ಜೆಡಿಎಸ್‌ ಭದ್ರಕೋಟೇಲಿ ಬಲ ಪ್ರದರ್ಶನಕ್ಕೆ ಕೈ ತಯಾರಿ!

ಸಾರಾಂಶ

ಸಮಾವೇಶದ ಹಿನ್ನೆಲೆಯಲ್ಲಿ ಇಡೀ ಹಾಸನ ನಗರ ಕಾಂಗ್ರೆಸ್‌ ಮಯವಾಗಿದೆ. ನಗರದೆಲ್ಲೆಡೆ 'ಕೈ' ನಾಯಕರು, ಪಕ್ಷದ ಪ್ಲೆಕ್ಸ್ ಹಾಗೂ ಬ್ಯಾನರ್‌ಗಳು ರಾರಾಜಿಸುತ್ತಿವೆ. ಜನಕಲ್ಯಾಣ ಸ್ವಾಭಿಮಾನಿಸಮಾವೇಶ ಎಂಬ ಹೆಸರಿನಲ್ಲೇ ಬಹುತೇಕ ಪ್ಲೆಕ್ ಬ್ಯಾನರ್‌ಗಳನ್ನು ಪ್ರಿಂಟ್ ಮಾಡಲಾಗಿದೆ. ಪ್ಲೆಕ್ ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಭಾವಚಿತ್ರಗಳು ಎದ್ದು ಕಾಣುತ್ತಿವೆ. 

ಹಾಸನ(ಡಿ.05): ಹಲವು ಹಗ್ಗ-ಜಗ್ಗಾಟಗಳ ನಡುವೆಯೇ ನಗರದ ಹೊರವಲಯದ ಕೃಷ್ಣ ನಗರದಲ್ಲಿ ಗುರುವಾರ ಕಾಂಗ್ರೆಸ್‌ನ ಬೃಹತ್ 'ಜನಕಲ್ಯಾಣ ಸ್ವಾಭಿಮಾನಿ ಸಮಾವೇಶ' ನಡೆಯಲಿದ್ದು, ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್, ಸಚಿವರು, ಕಾಂಗ್ರೆಸ್ ನಾಯಕರು ಪಾಲ್ಗೊಳ್ಳಲಿದ್ದಾರೆ. 

ಜೆಡಿಎಸ್‌ನ ಭದ್ರಕೋಟೆಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ನಾಯಕರು ಸಜ್ಜಾಗಿದ್ದು, ಸಮಾವೇಶಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅವರು ಹಾಸನದಲ್ಲೇ ವಾಸ್ತವ್ಯ ಹೂಡಿ, ಖುದ್ದಾಗಿ ನಿಂತು ಸಮಾವೇಶದ ಸಿದ್ಧತೆಗಳ ಮೇಲ್ವಿಚಾರಣೆ ನಡೆಸಿದ್ದಾರೆ. ಅರಸೀಕೆರೆ ರಸ್ತೆಯ ಎಸ್.ಎಂ.ಕೃಷ್ಣ ಬಡಾವಣೆಯ ಕ್ರೀಡಾಂಗಣದಲ್ಲಿ ನಡೆಯಲಿರುವ ಸಮಾವೇಶಕ್ಕಾಗಿ ಬೃಹತ್ ವೇದಿಕೆ ಸಿದ್ದಗೊಂಡಿದೆ. 

ಒಂದೇ ಒಂದು ಪತ್ರ, ಆಟ ಮುಗಿಸಿದ ಕೈ ಚಾಣಾಕ್ಷ: ಸಿದ್ದು ಬಣಕ್ಕೆ ಡಿಕೆಶಿ ಚೆಕ್‌ಮೇಟ್ ಇಟ್ಟದ್ದು ಹೇಗೆ?

ಸಮಾವೇಶದ ಹಿನ್ನೆಲೆಯಲ್ಲಿ ಇಡೀ ಹಾಸನ ನಗರ ಕಾಂಗ್ರೆಸ್‌ ಮಯವಾಗಿದೆ. ನಗರದೆಲ್ಲೆಡೆ 'ಕೈ' ನಾಯಕರು, ಪಕ್ಷದ ಪ್ಲೆಕ್ಸ್ ಹಾಗೂ ಬ್ಯಾನರ್‌ಗಳು ರಾರಾಜಿಸುತ್ತಿವೆ. ಜನಕಲ್ಯಾಣ ಸ್ವಾಭಿಮಾನಿಸಮಾವೇಶ ಎಂಬ ಹೆಸರಿನಲ್ಲೇ ಬಹುತೇಕ ಪ್ಲೆಕ್ ಬ್ಯಾನರ್‌ಗಳನ್ನು ಪ್ರಿಂಟ್ ಮಾಡಲಾಗಿದೆ. ಪ್ಲೆಕ್ ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಭಾವಚಿತ್ರಗಳು ಎದ್ದು ಕಾಣುತ್ತಿವೆ. 

ಸಮಾವೇಶಕ್ಕೆ ಶುಭ ಕೋರಿ 'ಕೈ' ನಾಯಕರಿಂದ ನಾನಾ ರೀತಿಯ ಪ್ಲೆಕ್ಸ್‌ ಗಳನ್ನು ಹಾಕಲಾಗಿದೆ. ಬಿ.ಎಂ. ರಸ್ತೆಯುದಕ್ಕೂ ಫ್ರೆಕ್, ಬ್ಯಾನರ್, ಪಕ್ಷದ ಬಾವುಟಗಳು ರಾರಾಜಿಸುತ್ತಿವೆ. ಸಮಾವೇಶದ ಹೆಸರಿನ ಗೊಂದಲದ ಹಿನ್ನೆಲೆಯಲ್ಲಿ ನಾನಾ ಹೆಸರಿನ ಪ್ಲೆಕ್ಸ್‌ ಗಳನ್ನು ಅಳವಡಿಕೆ ಮಾಡಲಾಗಿದೆ. ಸಮಾವೇಶಕ್ಕೆ 2 ಲಕ್ಷ ಜನರ ನಿರೀಕ್ಷೆ ಇಟ್ಟುಕೊಂಡು ತಯಾರಿ ನಡೆಸಲಾಗಿದೆ. ಸಮಾವೇಶಕ್ಕೆ ನಾನಾ ಕಡೆಯಿಂದ ಜನರನ್ನು ಕರೆ ತರಲು ಸುಮಾರು 1,500 ಬಸ್‌ಗಳ ವ್ಯವಸ್ಥೆ ಕಲಿಸಲಾಗಿದೆ. ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. 

ಸಮಾವೇಶದ ಹೆಸರೇ ಬದಲು: 

ಆರಂಭದಲ್ಲಿ ಇದು ಸಿಎಂ ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನದ ವೇದಿಕೆಯಾಗಿ 'ಸ್ವಾಭಿಮಾನಿ ಸಮಾವೇಶ'ವಾಗಿತ್ತು. 'ಸಿದ್ದರಾಮಯ್ಯ ಅವರ ಅಭಿಮಾನಿಗಳು ಈ ಸಮಾವೇಶ ಮಾಡುತ್ತಿದ್ದಾರೆ. ಇದರಲ್ಲಿ ಪಕ್ಷ ಅಥವಾ ಸರ್ಕಾರದ ಯಾವ ಪಾತ್ರವೂ ಇಲ್ಲ' ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ, ಸಚಿವ ಮಹದೇವಪ್ಪ ಹೇಳಿದ್ದರು. 

ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ: ಬಿಜೆಪಿ-ಜೆಡಿಎಸ್ ವಿರುದ್ಧ ಡಿಸಿಎಂ ವಾಗ್ದಾಳಿ

ಹಾಗೆಯೇ ಈ ಸಮಾವೇಶಕ್ಕೆ ಐದಾರು ಜಿಲ್ಲೆಗಳಿಂದ ಕಾರ್ಯಕರ್ತರು ಆಗಮಿಸಲಿರುವುದಾಗಿ ತಿಳಿಸಿದರು. ಆದರೆ, ನಂತರದಲ್ಲಿ ಪರಿಸ್ಥಿತಿ ಬದಲಾಯಿತು. 'ಇದು ವ್ಯಕ್ತಿ ಆಧಾರಿತ ಕಾರ್ಯಕ್ರಮವಾಗಲಿದೆ, ಹಾಗಾಗಿ ಈ ಸಮಾವೇಶ ಪಕ್ಷದ ಬ್ಯಾನರ್ ಅಡಿಯಲ್ಲೇ ನಡೆಯಬೇಕು' ಎಂದು ಎಐಸಿಸಿ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಡೀ ಕಾರ್ಯಕ್ರಮವನ್ನು ತಮ್ಮ ಹಿಡಿತಕ್ಕೆ ತೆಗೆದುಕೊಂಡರು. ಹಾಸನಕ್ಕೆ ಬಂದು ಸ್ಥಳ ಪರಿಶೀಲನೆ ನಡೆಸಿ, ಇದು ಸಿದರಾಮಯ್ಯ ಅವರ ಅಭಿಮಾನಿಗಳಿಂದ ನಡೆಯುವ ಸ್ವಾಭಿಮಾನಿ ಸಮಾವೇಶ ಅಲ್ಲ, ಕಾಂಗ್ರೆಸ್‌ನಿಂದ ನಡೆಯುವ ಜನಕಲ್ಯಾಣ ಸ್ವಾಭಿಮಾನಿ ಸಮಾವೇಶ ಎಂದು ಮರು ನಾಮಕರಣ ಮಾಡಿದರು.

ಕಾಂಗ್ರೆಸ್‌ನಿಂದ ಜನಕಲ್ಯಾಣ ಸ್ವಾಭಿಮಾನಿ ಸಮಾವೇಶ | ಸಿಎಂ ಸಿದ್ದು, ಡಿಸಿಎಂ ಡಿಕೆಶಿ ಸೇರಿ ಹಲವು ಸಚಿವರು ಭಾಗಿ ಜೆಡಿಎಸ್‌ ಭದ್ರಕೋಟೇಲಿ ಬಲ ಪ್ರದರ್ಶನಕ್ಕೆ ಕಾಂಗ್ರೆಸ್ ನಾಯಕರ ತಯಾರಿ | 2 ಲಕ್ಷ ಜನರು ಸೇರುವ ನಿರೀಕ್ಷೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!
ವಿಧಾನಸಭೆಯಲ್ಲಿ 'ಉತ್ತರ ಕರ್ನಾಟಕ' ವಿವಾದ: ಶಿವಲಿಂಗೇಗೌಡರ ಮಾತುಗಳಿಗೆ ಗರಂ ಆದ ಯತ್ನಾಳ್, ಗ್ಯಾರಂಟಿ, ಗುಂಡಿ ವಿಚಾರಕ್ಕೆ ಜಟಾಪಟಿ!