CJP Protest: ಶಿಕ್ಷಣ ಮಂತ್ರಿ ರಾಜೀನಾಮೆ ಪಡೆಯಲಾದ ಮೋದಿ ದುರ್ಬಲ ಪ್ರಧಾನಿ, ದುಷ್ಟರ ರಕ್ಷಕ -ಸಿದ್ದರಾಮಯ್ಯ ಕಿಡಿ

Kannadaprabha News   | Kannada Prabha
Published : Jul 21, 2026, 08:10 AM IST
Jantar mantar cjp protesting former cm siddaramiah slams pm modi

ಸಾರಾಂಶ

ನೀಟ್‌ ಪರೀಕ್ಷೆ ಹಗರಣದ ಕುರಿತು ಪ್ರಧಾನಿ ಮೋದಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ. ಭ್ರಷ್ಟ ಶಿಕ್ಷಣ ಮಂತ್ರಿಯ ವಿರುದ್ಧ ಕ್ರಮ ಕೈಗೊಳ್ಳದ ಮೋದಿ ದುರ್ಬಲ ಪ್ರಧಾನಿ ಎಂದು ಸಾಬೀತುಪಡಿಸಿದ್ದಾರೆ ಎಂದಿರುವ ಅವರು, ವಿದ್ಯಾರ್ಥಿಗಳು ಮತ್ತು ಪೋಷಕರ ಕಣ್ಣೀರಿನ ಶಾಪದಿಂದಲೇ ಸರ್ಕಾರ ಪತನಗೊಳ್ಳಲಿದೆ..

ಬೆಂಗಳೂರು: ನೀಟ್‌ ಪರೀಕ್ಷೆ ಹಗರಣ(NEET Scam)ದ ವಿರುದ್ಧ ದೇಶಾದ್ಯಂತ ಯುವಜನರು ಸಿಡಿದೆದ್ದು ಬೀದಿಗಿಳಿದಿದ್ದಾರೆ. ಆದರೆ ಒಬ್ಬ ಅಸಮರ್ಥ ಮತ್ತು ಭ್ರಷ್ಟ ಶಿಕ್ಷಣ ಮಂತ್ರಿ ವಿರುದ್ಧ ಕ್ರಮಕೈಗೊಳ್ಳಲು ಸಾಧ್ಯವಾಗದ ಪ್ರಧಾನಿ ಮೋದಿ ಅವರು ತಾವೊಬ್ಬ ದುರ್ಬಲ ಮತ್ತು ದುಷ್ಟರಕ್ಷಕ ಪ್ರಧಾನಿ ಎನ್ನುವುದನ್ನು ಸಾಬೀತುಪಡಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದುರ್ಬಲ, ದುಷ್ಟರಕ್ಷಕ ಪ್ರಧಾನಿ

ಈ ಬಗ್ಗೆ ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಅವರು, ದೇಶಾದ್ಯಂತ ಕೇಂದ್ರ ಸರ್ಕಾರದ ಶಿಕ್ಷಣ ಮತ್ತು ಯುವಜನ ವಿರೋಧಿ ನೀತಿ ವಿರುದ್ಧ ಯುವಜನ ಸಿಡಿದೆದ್ದು ಬೀದಿಗಳಿದಿದ್ದಾರೆ. ಅಸಮರ್ಥ ಮತ್ತು ಭ್ರಷ್ಟ ಶಿಕ್ಷಣ ಮಂತ್ರಿ ವಿರುದ್ಧ ಕ್ರಮಕೈಗೊಳ್ಳಲು ಸಾಧ್ಯವಾಗದ ಮೋದಿ ಅವರು ತಾವೊಬ್ಬ ದುರ್ಬಲ, ದುಷ್ಟರಕ್ಷಕ ಪ್ರಧಾನಿ ಎನ್ನುವುದನ್ನು ಸಾಬೀತುಪಡಿಸಿದ್ದಾರೆ. ನೊಂದ ಅಮಾಯಕ ವಿದ್ಯಾರ್ಥಿಗಳು ಮತ್ತು ಅವರ ಪೋಷಕರ ಕಣ್ಣೀರಿನ ಶಾಪದಿಂದಲೇ ಮೋದಿ ಸರ್ಕಾರ ಪತನಗೊಳ್ಳಲಿದೆ ಎಂದು ಟೀಕಿಸಿದ್ದಾರೆ.

ಲಾಠಿ ಮೂಲಕ ಪ್ರತಿಭಟನೆ ದಮನಕ್ಕೆ ಯತ್ನ

ದಿಲ್ಲಿಯಲ್ಲಿ ವಿದ್ಯಾರ್ಥಿಗಳ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಈ ಪ್ರತಿರೋಧದಿಂದ ನಡುಗಿಹೋಗಿರುವ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಹತಾಶೆಯಿಂದ ಲಾಠಿ-ದೊಣ್ಣೆಗಳ ಮೂಲಕ ಪ್ರತಿಭಟನೆ ದಮನಿಸಲು ಹೊರಟಿದೆ. ಇದನ್ನು ನೋಡಿದರೆ ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಘೋಷಣೆಯಾದಂತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಹನ್ನೆರಡು ವರ್ಷಗಳ ಮೋದಿ ಅವರ ಸರ್ಕಾರದಿಂದ ಅತ್ಯಂತ ಹೆಚ್ಚು ಅನ್ಯಾಯಕ್ಕೊಳಗಾದವರು ಈ ದೇಶದ ವಿದ್ಯಾರ್ಥಿಗಳು ಮತ್ತು ಯುವಜನರು. ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿರುವ ಮೋದಿ ಅವರ ಸರ್ಕಾರದ ಆಡಳಿತದ ಅವಧಿಯಲ್ಲಿ ನಿರುದ್ಯೋಗದ ಪ್ರಮಾಣ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದೆ. ಸಾಮಾನ್ಯ ಪರೀಕ್ಷೆಗಳನ್ನೂ ನ್ಯಾಯಯುತವಾಗಿ ನಡೆಸಲು ಸಾಧ್ಯವಾಗದಷ್ಟು ಆಡಳಿತ ಕುಲಗೆಟ್ಟು ಹೋಗಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Jantar Mantar: ಪ್ರಧಾನ್‌ರಿಂದ ಪ್ರಧಾನಿವರೆಗೆ ಹಬ್ಬಿತು ಹೋರಾಟ ದೆಹಲಿಯಲ್ಲಿ ಜಿರಳೆ ಕ್ರಾಂತಿ!
ಸಂಪುಟ ವಿಸ್ತರಣೆ ಚರ್ಚೆಗಾಗಿ ಇಂದು ಡಿಕೆ, ಬಿಕೆ, ಸಿದ್ದು ದಿಲ್ಲಿಗೆ | ಎಲ್ಲ ಓಕೆ ಆದರೆ ಶುಕ್ರವಾರ/ಶನಿವಾರ ಶಪಥಗ್ರಹಣ?