ಸಿಎಂ ಬಿಎಸ್‌ವೈ ರಾಜೀನಾಮೆ ಕೊಡುವಂತೆ ಒತ್ತಡ ಹಾಕಿ: ಶಾಸಕರಿಗೆ ಶ್ರೀಗಳು ಸೂಚನೆ

Published : Jan 29, 2021, 03:42 PM ISTUpdated : Jan 29, 2021, 03:44 PM IST
ಸಿಎಂ ಬಿಎಸ್‌ವೈ ರಾಜೀನಾಮೆ ಕೊಡುವಂತೆ ಒತ್ತಡ ಹಾಕಿ: ಶಾಸಕರಿಗೆ ಶ್ರೀಗಳು ಸೂಚನೆ

ಸಾರಾಂಶ

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ  ಹೋರಾಟ ನಡೆಯುತ್ತಿದೆ. ಇದರ ಮಧ್ಯೆ  ಜಯಮೃತ್ಯುಂಜಯ ಶ್ರೀಗಳು ತಮ್ಮ ಸಮಾಜದ ಶಾಸಕರುಗಳಿಗೆ ಕಿವಿ ಮಾತೊಂದನ್ನು ಹೇಳಿದ್ದಾರೆ.

ದಾವಣಗೆರೆ, (ಜ.29): ಪಂಚಮಸಾಲಿ ಸಮಾಜದ ಶಾಸಕರುಗಳು ನೀವು ರಾಜೀನಾಮೆ ಕೊಡಬೇಡಿ, ಮುಖ್ಯಮಂತ್ರಿಗಳೇ ರಾಜೀನಾಮೆ ನೀಡುವಂತೆ ಒತ್ತಡಹಾಕಿ ಎಂದು ಜಯಮೃತ್ಯುಂಜಯ ಶ್ರೀಗಳು ಹೇಳಿದ್ದಾರೆ.

ಹರಿಹರದಲ್ಲಿ ನಡೆದ ಪಂಚಮಸಾಲಿ ಸಮುದಾಯದ ಪಾದಯಾತ್ರೆ ಸಮಾವೇಶದ ಬಹಿರಂಗ ಸಭೆಯಲ್ಲಿ ಮಾತನಾಡಿದ ಜಯಮೃತ್ಯುಂಜಯ ಶ್ರೀಗಳು, ನೀವು ರಾಜೀನಾಮೆ ಕೊಟ್ಟರೆ ಪ್ರಯೋಜನವಿಲ್ಲ. ನೀವು ನಮ್ಮ ಸಮಾಜದಿಂದ ಗೆದ್ದಿದ್ದೀರ, ರಾಜೀನಾಮೆ ಕೊಡಬೇಡಿ, ನಮ್ಮ ಬೇಡಿಕೆಯನ್ನ ಈಡೇರಿಸದ ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ತಾವೇ ರಾಜೀನಾಮೆ ಕೊಡಬೇಕು ಎಂದು ಹೇಳಿದರು.

ಮೀಸಲಾತಿಗಾಗಿ ರಾಜ್ಯದಲ್ಲೊಂದು ಬೃಹತ್ ಪಾದಯಾತ್ರೆ: ಪಂಚಲಕ್ಷ ನಡೆ ವಿಧಾನಸೌಧದ ಕಡೆ

ಪಂಚಮಸಾಲಿಯವರೇ ಸಿಎಂ ಆದ್ರೂ 2ಎ ಹೋರಾಟ ನಿಲ್ಲೋದಿಲ್ಲ. ಬಿಎಸ್​ವೈ ನಮ್ಮ ಬೇಡಿಕೆ ಈಡೇರಿಸಿಲ್ಲ, ಏನಾದರೂ ಕೇಂದ್ರದವರು ಬಿಎಸ್​ವೈ ರಾಜೀನಾಮೆ ಪಡೆದರೆ, ಉತ್ತರ ಕರ್ನಾಟಕದವರೇ ಸಿಎಂ ಆಗಬೇಕು. ಅದರಲ್ಲೂ ಲಿಂಗಾಯತರಿಗೆ ನೀಡುವಂತೆ ಹೇಳುತ್ತೇನೆ. ನಮ್ಮ ಸಮಾಜದಲ್ಲಿ 15 ಶಾಸಕರು ಸಿಎಂ ಆಗುವ ಅರ್ಹತೆ ಹೊಂದಿದ್ದಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್