ಸಿಎಂಗೆ ಸ್ವಾಮೀಜಿ ಡೆಡ್‌ಲೈನ್: ಯಡಿಯೂರಪ್ಪನವರಿಗೆ ಎದುರಾಯ್ತು ಮತ್ತೊಂದು ಸಂಕಷ್ಟ..!

Published : Dec 08, 2020, 07:08 PM IST
ಸಿಎಂಗೆ ಸ್ವಾಮೀಜಿ ಡೆಡ್‌ಲೈನ್: ಯಡಿಯೂರಪ್ಪನವರಿಗೆ ಎದುರಾಯ್ತು ಮತ್ತೊಂದು ಸಂಕಷ್ಟ..!

ಸಾರಾಂಶ

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸ್ವಾಮೀಜಿ ಡೆಡ್‌ ಲೈನ್ ಕೊಟ್ಟಿದ್ದಾರೆ. ಇದರಿಂದ ಬಿಸ್‌ವೈಗೆ ಮತ್ತೊಂದು ಸಂಕಷ್ಟ ಶುರುವಾಗಿದೆ.

ದಾವಣಗೆರೆ, (ಡಿ.08): ಯಡಿಯೂರಪ್ಪನವರು ಸಿಎಂ ಆದಾಗಿನಿಂದ ಅವರಿಗೆ ಒಂದಲ್ಲ ಒಂದು ಸಂಕಷ್ಟ ಎದುರಾಗುತ್ತಲೇ ಇವೆ. ಮಳೆ, ಪ್ರವಾಹ ಬಳಿಕ ಕೊರೋನಾ ಬಂತು. ಈಗ ಸಂಪುಟ ವಿಸ್ತರಣೆ ತಲೆ ಮೇಲೆ ಕೂತಿದೆ. ಇದರ ಬೆನ್ನಲ್ಲೇ ಮತ್ತೊಂದು ಸಂಕಷ್ಟ ಎದುರಾಗಿದೆ.

ಹೌದು...ಮರಾಠ ಪ್ರಾಧಿಕಾರ ರಚನೆ ಮಾಡಿ ಬಳಿಕ ವೀರಶೈವ ಲಿಂಗಾಯತ ನಿಗಮ ಸ್ಥಾಪಿಸಿ ಬೀಸೋ ದೊಣ್ಣೆಯಿಂದ ಪಾರಾಗಿದ್ದರು. ಆದ್ರೆ, ಇದೀಗ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಬೇಡಿಕೆ ಇಟ್ಟಿರುವ ಜಯಮೃತ್ಯುಂಜಯ ಸ್ವಾಮೀಜಿ, ಸಿಎಂ ಬಿಎಸ್‌ವೈಗೆ ಡೆಡ್‌ ಲೈನ್ ಕೊಟ್ಟಿದ್ದಾರೆ.

ಸಿಎಂ ಬಿ.ಎಸ್. ಯಡಿಯೂರಪ್ಪನವರಿಗೆ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಲು ಡಿಸೆಂಬರ್​ 23 ರವರೆಗೆ ಡೆಡ್ ಲೈನ್ ಕೊಟ್ಟಿದ್ದಾರೆ.

ಅಸಮಾಧಾನ ಸ್ಫೋಟ: ಇಬ್ಬರು ಶಾಸಕರ ರಾಜೀನಾಮೆ ಪ್ರಸ್ತಾಪದಿಂದ ಸಿಎಂ ಕಕ್ಕಾಬಿಕ್ಕಿ

ದಾವಣಗೆರೆಯ ಖಾಸಗಿ ಹೋಟೆಲ್​ನಲ್ಲಿ ಪಂಚಮಸಾಲಿ ಸಭೆ ನಡೆಸಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಜಯಮೃತ್ಯುಂಜಯ ಸ್ವಾಮೀಜಿ,  ಬಿ.ಎಸ್. ಯಡಿಯೂರಪ್ಪ ಸಿಎಂ ಆಗಲು ಪಂಚಮಸಾಲಿ ಸಮಾಜದ ಕೊಡುಗೆ ಹೆಚ್ಚಿದೆ. ನಾನು ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ಉಪವಾಸ ಕೂತಿದ್ದೆ. ಅವಾಗ ನೀವೇ ಕರೆ ಮಾಡಿ ನಮ್ಮ ಬೇಡಿಕೆ ಈಡೇರಿಸುತ್ತೇವೆ ಉಪವಾಸ ಕೈಬಿಡಿ ಎಂದಿದ್ರಿ. ಆ ರೀತಿ ಕೊಟ್ಟ ಮಾತಿನಂತೆ ನಡೆದುಕೊಳ್ಳಿ ಎಂದು ಹೇಳಿದರು.

ಡಿಸೆಂಬರ್ 23ರ ಒಳಗೆ ನೀವು ನಮಗೆ 2ಎ ಮೀಸಲಾತಿ ನೀಡಬೇಕು. ಇಲ್ಲವಾದರೆ 23 ರಿಂದ ವಿಧಾನ ಸೌಧ ಮುತ್ತಿಗೆ ಹಾಕಲು ಪಾದಯಾತ್ರೆ ಮಾಡಲಾಗುತ್ತೆ ಎಂದು ಎಚ್ಚರಿಕೆ ಕೊಟ್ಟರು.

ಮೊದಲೇ ಸಂಪುಟ ವಿಸ್ತರಣೆ ಹೈಕಮಾಂಡ್ ಅನುಮತಿ ನೀಡದಿರುವುದರಿಂದ ಒತ್ತಡದಲ್ಲಿರುವ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪಗೆ ಇದೀಗ  ಈ ಡೆಡ್‌ಲೈನ್‌ ಸಂಕಷ್ಟ ಶುರುವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ ಸಿದ್ದರಾಮಯ್ಯರಿಂದ ರಾಜ್ಯದ ದಲಿತರ ಸರ್ವನಾಶ: ಮಾಜಿ ಸಂಸದ ಪ್ರತಾಪ್ ಸಿಂಹ
ಸಿಎಂ ಸಿದ್ದರಾಮಯ್ಯಗೆ ಪ್ರಧಾನಿ ಮೋದಿ ಜನಪ್ರಿಯತೆ ಸಹಿಸಲು ಸಂಕಷ್ಟ: ಬಿ.ವೈ.ವಿಜಯೇಂದ್ರ