
ಕೋಲಾರ,(ಫೆ.10): ಹೇಗಾದ್ರೂ ಮಾಡಿ ಮೈತ್ರಿಯನ್ನು ಉರುಳಿಸಿ ಅಧಿಕಾರಕ್ಕೇರಲೇಬೇಕೆಂದು ಬಿಜೆಪಿ ಮಾಡುತ್ತಿರುವ ಸರ್ಕಸ್ ಒಂದೊಂದಾಗಿಯೇ ಬಯಲಿಗೆ ಬರುತ್ತಿವೆ.
ಬಿಜೆಪಿ ಆಪರೇಷನ್ ಕಮಲ ಮಾಡುತ್ತಿದೆ ಎಂದು ಮೈತ್ರಿ ನಾಯಕರು ಆರೋಪ ಮಾಡುತ್ತಲೇ ಬರುತ್ತಿದ್ದಾರೆ. ಆದರೆ ಕಮಲ ಪಾಳಯದ ನಾಯಕರು ನಾವು ಯಾವ ಆಪರೇಷನ್ ಕಮಲವನ್ನೂ ಮಾಡುತ್ತಿಲ್ಲ, ನಮಗೆ ಅದರ ಅವಶ್ಯಕತೆ ಇಲ್ಲ ಎಂದು ಹೇಳುತ್ತಲೇ ಇದ್ದಾರೆ.
ದೇವರ ಹೆಸರಲ್ಲಿ ಯಡಿಯೂರಪ್ಪ ದೇವದುರ್ಗ ಭೇಟಿ ರಹಸ್ಯ ಬಯಲು
ಇದರ ಬೆನ್ನಲ್ಲೇ ಗುರುಮಿಠಕಲ್ ಶಾಸಕನ ಪುತ್ರನಿಗೆ ನೀಡಿರುವ ಆಮಿಷ ಆಡಿಯೋವನ್ನು ಸಿಎಂ ಕುಮಾರಸ್ವಾಮಿ ಅವರು ಸಿ.ಡಿ ಬಿಡುಗಡೆ ಮಾಡಿದ್ದು, ಅದನ್ನು ಸ್ವತಃ ಯಡಿಯೂರಪ್ಪನವರೇ ಒಪ್ಪಿಕೊಂಡಿರುವುದು ಇನ್ನುಳಿದ ಬಿಜೆಪಿ ನಾಯಕರಿಗೆ ಇರಿಸುಮುರಿಸು ಉಂಟಾಗಿದೆ. ಇದೀಗ ಕೋಲಾರ ಜೆಡಿಎಸ್ ಶಾಸಕ ಹೊಸ ಬಾಂಬ್ ಸಿಡಿಸಿದ್ದಾರೆ.
ಬಿಜೆಪಿಯ ಅಶ್ವತ್ಥ್ ನಾರಾಯಣ, ವಿಶ್ವನಾಥ್ ಹಾಗು ಯೋಗೀಶ್ವರ್ ನನಗೆ 30 ಕೋಟಿ ಆಮಿಷವೊಡ್ಡಿ,5 ಕೋಟಿ ಅಡ್ವಾನ್ಸ್ ಕೂಡ ಕೊಟ್ಟಿದ್ದರು ಎಂದು ಹೇಳಿದ್ದಾರೆ. "ನನಗೆ ಬಿಜೆಪಿಯಿಂದ 25 ಕೋಟಿ ರೂ. ಆಫರ್ ಬಂದಿದ್ದು ನಿಜ. 5 ಕೋಟಿ ಅಡ್ವಾನ್ಸ್ ದುಡ್ಡನ್ನು ನನ್ನ ಮನೆಗೆ ತಂದು ಕೊಟ್ಟಿದ್ದರು. ಜೆಡಿಎಸ್ಗೆ ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದರು.
ಆದರೆ 2 ತಿಂಗಳ ಬಳಿಕ ನಾನು ಆ ಹಣವನ್ನು ವಾಪಸ್ ಮಾಡಿದೆ" ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಈ ಮೂಲಕ ಬಿಜೆಪಿಯ ಮತ್ತೊಂದು ಬಂಡವಾಳ ಬಯಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.