ಬೈ ಎಲೆಕ್ಷನ್ ರಿಸಲ್ಟ್: 5ರಲ್ಲಿ 4 ಕ್ಷೇತ್ರಗಳಲ್ಲಿ ಗೆಲುವಿನತ್ತ ದಾಪುಗಾಲು ಇಟ್ಟ ಮೈತ್ರಿ

Published : Nov 06, 2018, 10:13 AM IST
ಬೈ ಎಲೆಕ್ಷನ್ ರಿಸಲ್ಟ್: 5ರಲ್ಲಿ 4 ಕ್ಷೇತ್ರಗಳಲ್ಲಿ ಗೆಲುವಿನತ್ತ ದಾಪುಗಾಲು ಇಟ್ಟ ಮೈತ್ರಿ

ಸಾರಾಂಶ

ಉಪಸಮರದ ಆರಂಭದ ಫಲಿತಾಂಶವನ್ನ ನೋಡಿದರೆ ಒಟ್ಟು 5 ಕ್ಷೇತ್ರಗಳ ಪೈಕಿ 4 ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಗೆಲುವಿನತ್ತ ದಾಪುಗಾಲು ಇಟ್ಟಿದ್ದಾರೆ. 

ಬೆಂಗಳೂರು, [ನ.06]: ಮೂರು ಲೋಕಸಭೆ ಮತ್ತು ಎರಡು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ  ಇನ್ನೇನು ಕೆಲವೇ ಕ್ಷಗಳಲ್ಲಿ ಇಂದು [ಮಂಗಳವಾರ] ಹೊರಬೀಳಲಿದೆ.

 ಲೋಕಸಭೆ ಕ್ಷೇತ್ರಗಳಾದ ಬಳ್ಳಾರಿ, ಶಿವಮೊಗ್ಗ, ಮಂಡ್ಯ ಮತ್ತು ವಿಧಾನ ಸಭೆ ಕ್ಷೇತ್ರಗಳಾದ ಜಮಖಂಡಿ, ರಾಮನಗರ ಕ್ಷೇತ್ರಕ್ಕೆ ನಡೆದ ಚುನಾವಣೆಯ ಫಲಿತಾಂಶದ ಮೇಲೆ ಇಡೀ ರಾಜ್ಯ ಕುತೂಹಲದಿಂದ ನೋಡುತ್ತಿದೆ.

ಆದ್ರೆ, ಆರಂಭದ ಫಲಿತಾಂಶವನ್ನ ನೋಡಿದರೆ ಒಟ್ಟು 5 ಕ್ಷೇತ್ರಗಳ ಪೈಕಿ 4 ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಗೆಲುವಿನತ್ತ ದಾಪುಗಾಲು ಇಟ್ಟಿದ್ದಾರೆ. ಇನ್ನು ಬಿಜೆಪಿ ಕೇವಲ ಒಂದು ಕ್ಷೇತ್ರದಲ್ಲಿ ಗೆಲುವಿನತ್ತ ದಾಪುಗಾಲು ಇಟ್ಟಿದೆ.

ರಾಮನಗರದಲ್ಲಿ ಮೈತ್ರಿ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಭಾರೀ ಮುನ್ನಡೆ ಸಾಧಿಸಿದ್ದು, ಗೆಲ್ಲುವುದು ಬಹುತೇಕ ಖಚಿತವಾಗಿದೆ. ಇನ್ನು ಬಳ್ಳಾರಿಯಲ್ಲಿ ಕಾಂಗ್ರೆಸ್ ನ ವಿ ಎಸ್ ಉಗ್ರಪ್ಪ ರೆಡ್ಡಿ ಕೋಟೆ ಛಿದ್ರಗೊಳಿಸುವತ್ತ ಹೆಜ್ಜೆ ಹಾಕಿದ್ದಾರೆ.

ಸಧ್ಯದ ಮಾಹಿತಿ ಪ್ರಕಾರ ಉಗ್ರಪ್ಪ ಸುಮಾರು ಒಂದು ಲಕ್ಷ ಮತಗಳಿಂದ ಮುನ್ನಡೆ ಸಾಧಿಸಿದ್ದು, ಗೆಲುನಿತ್ತ ಹೆಜ್ಜೆ ಹಾಕಿದ್ದಾರೆ. ಇನ್ನು ಜಮಖಂಡಿಯಲ್ಲಿ ಅನುಕಂಪದ ಅಲೆ ಕೈ ಹಿಡಿದಿದ್ದು, ಕಾಂಗ್ರೆಸ್ ಅಭ್ಯರ್ಥಿ ಆನಂದ್ ನ್ಯಾಮೆಗೌಡ ಮುನ್ನಡೆ ಸಾಧಿಸಿದ್ದಾರೆ.

ಇನ್ನು ಸಕ್ಕರೆ ನಾಡು ಮಂಡ್ಯದಲ್ಲಿ  ಮೈತ್ರಿ ಅಭ್ಯರ್ಥಿ ಶಿವರಾಮೇಗೌಡ ಅವರು  ಡಾ. ಸಿದ್ದರಾಮಯ್ಯ  ವಿರುದ್ಧ ಭಾರಿ ಅಂತರದಲ್ಲಿ ಮುನ್ನಡೆ ಸಾಧಿಸಿದ್ದು, ಗೆಲುವಿನ ಸನ್ನಿಹದಲ್ಲಿದ್ದಾರೆ.

ಈ ನಾಲ್ಕು ಕ್ಷೇತ್ರಗಳಲ್ಲಿ ದೋಸ್ತಿಗೆ ಬಹುತೇಕ ಗೆಲುವಾಗಲಿದ್ದು, ಬಿಜೆಪಿ ಶಿವಮೊಗ್ಗದಲ್ಲಿ ಮಾತ್ರ ಗೆಲುವಿನ ಕನಸು ಕಂಡಿದೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?