
ಚಿಕ್ಕಮಗಳೂರು, (ಮೇ.06): ಜಿಲ್ಲೆಯ ಕಡೂರಿನ ಮಾಜಿ ಶಾಸಕ ವೈ.ಎಸ್.ವಿ. ದತ್ತ ಇದೀಗ ಮೇಷ್ಟ್ರಾಗಿ ಮಕ್ಕಳಿಗೆ ಪಾಠ ಮಾಡುತ್ತಿದ್ದಾರೆ.
"
ಎಸ್.ಎಸ್.ಎಲ್.ಸಿ. ಮಕ್ಕಳಿಗೆ ಫೇಸ್ ಬುಕ್ ಲೈವ್ನಲ್ಲಿ ಪ್ರತಿ ದಿನ ಸಂಜೆ 7.30 ರಿಂದ 8.30ರವೆಗೆ ಪಾಠ ಮಾಡುತ್ತಿದ್ದು, ಒಂದು ವಾರ ಗಣಿತ, ಮತ್ತೊಂದು ವಾರ ಭೌತಶಾಸ್ತ್ರ ಪಾಠ ಮಾಡಲು ಮುಂದಾಗಿದ್ದಾರೆ.
ಸೋಲಿಸಿದ್ರೂ ಕ್ಷೇತ್ರದ ಜನರ ನೆರವಿಗೆ ನಿಂತ ದತ್ತಣ್ಣನ ದೊಡ್ಡತನಕ್ಕೆ ಚಿತ್ರಗಳೇ ಸಾಕ್ಷಿ
ಲಾಕ್ಡೌನ್ನಿಂದ ಈಗಾಗಲೇ ಎಸ್.ಎಸ್.ಎಲ್.ಸಿ ಮುಂದೂಡಲಾಗಿದ್ದು, ಜೂನ್ನಲ್ಲಿ ಪರೀಕ್ಷೆ ನಡೆಸಲು ಚಿಂತನೆಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ದತ್ತ ಅವರು, ಫೇಸ್ಬುಕ್ ಮೂಲಕ ರಾಜ್ಯದ 10ನೇ ಕ್ಲಾಸ್ ಮಕ್ಕಳಿಗೆ ಗಣಿತ ಪಾಠ ಮಾಡುತ್ತಿದ್ದಾರೆ.
ಮತ್ತೆ ಮೇಷ್ಟ್ರಾದ ದತ್ತ
ಹೌದು..ಜೆಡಿಎಸ್ ಮುಖಂಡ ಹಾಗೂ ಮಾಜಿ ಶಾಸಕ ವೈ.ಎಸ್.ವಿ. ದತ್ತ ಮೂಲತಃ ಶಿಕ್ಷಕರು. ನಂತರ ಶಿಕ್ಷಕ ವೃತ್ತಿಯಿಂದ ರಾಜಕಾರಣಕ್ಕೆ ಬಂದಿದ್ದರು. ಇದೀಗ ಈಗ ಕೊರೋನಾ ಆತಂಕದಿಂದ ದೇಶವೇ ಲಾಕ್ಡೌನ್ ಆದ ಮೇಲೆ 10ನೇ ತರಗತಿಯ ಪರೀಕ್ಷೆ ಕೂಡ ಮುಂದೂಡಲಾಗಿದೆ.
ಜೂನ್ ತಿಂಗಳಿನಲ್ಲಿ ಪರೀಕ್ಷೆ ನಡೆಯುವ ಸಾಧ್ಯತೆ ಇರುವ ಕಾರಣ ಮಕ್ಕಳಿಗೆ ಪುನರ್ ಮನನ ತರಗತಿ ಅಗತ್ಯವೆಂದು ವರ್ಷಗಳ ಬಳಿಕ ಮತ್ತೆ ಶಿಕ್ಷಕ ವೃತ್ತಿಗೆ ಕಾಲಿಟ್ಟಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.