ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ, ರೆಬೆಲ್ ಶಾಸಕರನ್ನ ಪಕ್ಷದಿಂದ ಉಚ್ಛಾಟಿಸಿದ ಜೆಡಿಎಸ್

Published : Jun 22, 2022, 06:57 PM ISTUpdated : Jun 22, 2022, 07:07 PM IST
ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ, ರೆಬೆಲ್ ಶಾಸಕರನ್ನ ಪಕ್ಷದಿಂದ  ಉಚ್ಛಾಟಿಸಿದ ಜೆಡಿಎಸ್

ಸಾರಾಂಶ

* ರೆಬೆಲ್ ಶಾಸಕರನ್ನ ಪಕ್ಷದಿಂದ  ಉಚ್ಛಾಟಿಸಿದ ಜೆಡಿಎಸ್ * ಉಚ್ಛಾಟಣೆ ಮಾಡಿ ಆದೇಶ ಹೊರಡಿಸಿದ ಜೆಡಿಎಸ್ * ಇಂದು ನಡೆದ ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ

ಬೆಂಗಳೂರು, (ಜೂನ್.22): ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ಏಳೆಂಟು ತಿಂಗಳು ಬಾಕಿ ಇದೆ. ಅದಕ್ಕೂ ಮೊದಲು ಜೆಡಿಎಸ್‌ನಲ್ಲಿ ಮಹತ್ವದ ಬೆಳವಣಿಗೆಯಾಗಿದೆ.

ಹೌದು...ಇಬ್ಬರು ರೆಬೆಲ್ ಶಾಸಕರನ್ನು ಜೆಡಿಎಸ್‌ನಿಂದ ಉಚ್ಛಾಟಿಸಲಾಗಿದೆ. ಗುಬ್ಬಿ ಶಾಸಕರಾದ ಶ್ರೀನಿವಾಸ್ ಹಾಗೂ ಕೋಲಾರ ಶಾಸಕ ಶ್ರೀನಿವಾಸ ಗೌಡ ಅವರನ್ನ ಜೆಡಿಎಸ್‌ನಿಂದ  ಉಚ್ಚಾಟನೆ ಮಾಡಲಾಗಿದೆ. ಈ ಬಗ್ಗೆ ಇಂದು(ಬುಧವಾರ) ನಡೆದ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ದಳಪತಿಗಳ ವಿರುದ್ಧ ಜೆಡಿಎಸ್‌ ಶಾಸಕರ ದಂಗಲ್, ಎಚ್‌ಡಿಕೆ ವಿರುದ್ಧ ಹೊಸ ಬಾಂಬ್

ಬೆಳಗ್ಗೆ ಅಷ್ಟೇ ಗುಬ್ಬಿ ಶ್ರೀನಿವಾಸ್ ಅವರು ಡಿಸೆಂಬರ್‌ನಲ್ಲಿ ರಾಜೀನಾಮೆ ನೀಡುತ್ತೇನೆ ಎಂದು ಘೋಷಿಸಿದ್ದರು. ನಾನು ಸಚಿವ ಆಗಿದ್ದು ನನ್ನ ಜೀವನದಲ್ಲಿ ಅದೊಂದು ಕೆಟ್ಟ ಕನಸು. ಅದನ್ನು ಮರೆಯಲು ಪ್ರಯತ್ನ ಮಾಡುತ್ತಿದ್ದೇನೆ . ನನ್ನ ಜೀವನದಲ್ಲಿ ಕೆಟ್ಟ ಕನಸು ಮರೆಯುವುದಕ್ಕೆ ಪ್ರಯತ್ನ ಪಡುತ್ತಿದ್ದೇನೆ. ಇಂತವರ ಸಂಪುಟದಲ್ಲಿ ಇದ್ದೇ ಎಂಬುದೇ ದೊಡ್ಡ ಅಪಮಾನ ಎಂದುಕೊಳ್ಳುತ್ತೇನೆ. ಅದನ್ನು ಜ್ಞಾಪಿಸಿಕೊಳ್ಳಲು ಇಷ್ಟ ಪಡಲ್ಲ ಎಂದು ಜೆಡಿಎಸ್​ ಶಾಸಕ ಎಸ್​.ಆರ್​ ಶ್ರೀನಿವಾಸ್​ ಜೆಡಿಎಸ್​ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.

ಇನ್ನು ಡಿಸೆಂಬರ್​ವರೆಗೂ ಕಾಯುತ್ತೇನೆ, ಡಿಸೆಂಬರ್​ನಲ್ಲಿ ಪಕ್ಷದ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ರಾಜೀನಾಮೆ ಕೊಟ್ಟು ಬಳಿಕ ಕಾರ್ಯಕರ್ತರ ಬಳಿ ಹೋಗಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ. ನನ್ನ ಬಗ್ಗೆ ಮಾತನಾಡುವ ನೈತಿಕತೆ ಅವರಿಗೆ ಇದ್ಯಾ. ಸ್ವಲ್ಪ ಅವರಿಗೆ ಮನಸಾಕ್ಷಿ ಇದ್ದರೆ ನನ್ನವೋಟ್‌ ಕೇಳಬಾರದು. ನನ್ನ ಬಳಿ ವಿಚಲಿರಾಗುವ ಕಾರ್ಯಕರ್ತರು ಇಲ್ಲ. ನಾನು ಸ್ವತಂತ್ರವಾಗಿ ಸ್ಪರ್ಧಿಸಿದಾಗ ಯಾವ ಕಾರ್ಯಕರ್ತರು ಇದ್ದರೂ ಅವರು ಇಂದು ಕೂಡ ನನ್ನ ಜೊತೆಗಿದ್ದಾರೆ. ಕಾರ್ಯಕರ್ತರು ನನ್ನ ಬಿಟ್ಟು ಹೋಗಲ್ಲ ಎನ್ನುವ ನಂಬಿಕೆ ಇದೆ ಎನ್ನುವ ಭರವಸೆ ವ್ಯಕ್ತಪಡಿಸಿದರು.

 
ಗುಬ್ಬಿ  ಶ್ರೀನಿವಾಸ್ ಹಾಗೂ ಕೋಲಾರ ಶಾಸಕ ಶ್ರೀನಿವಾಸ ಗೌಡ ಅವರು ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ್ದರು. ಅಲ್ಲದೇ ಜೆಡಿಎಸ್ ವರಿಷ್ಠ ವಿರುದ್ಧವೇ ತೊಡೆತಟ್ಟಿದ್ದರು. ಅಲ್ಲದೇ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದರು.

ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತಹಾಕಿದ್ದೇನೆ ಎಂದು ಬಹಿರಂಗವಾಗಿಯೇ ಕೋಲಾರ ಕ್ಷೇತ್ರದ ಜೆಡಿಎಸ್ ಶಾಸಕ ಕೆ ಶ್ರೀನಿವಾಸ ಗೌಡ ಹೇಳಿದ್ದರು. ನಾನು ಈ ಹಿಂದೆ ಕಾಂಗ್ರೆಸ್ ನಲ್ಲಿದ್ದಾಗ ಸಚಿವನಾಗಿದ್ದೆ. ಕುಮಾರಸ್ವಾಮಿ ಸಿಟ್ಟಾದ್ರೆ ಆಗಲಿ ಬಿಡಿ, ರಾಜಕೀಯದಲ್ಲಿ ಇವೆಲ್ಲಾ ಕಾಮನ್, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದೇನೆ ಎಂದಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!