
ಬೆಂಗಳೂರು, [ಫೆ.07]: ನಮ್ಮ ಪಕ್ಷದಲ್ಲಿ ಎಲ್ಲವೂ ಸರಿ ಇದೆ. ನಿಮ್ಮಲ್ಲಿಯೇ ಸರಿ ಇಲ್ಲ ಎಂದು ಕಾಂಗ್ರೆಸ್ ಕಡೆ ಬೊಟ್ಟು ಮಾಡಿ ತೋರಿಸುತ್ತಿದ್ದ ಜೆಡಿಎಸ್ ಬುಡಕ್ಕೆ ಇದೀಗ ಬೆಂಕಿಬಿದ್ದಿದೆ.
ಕಾಂಗ್ರೆಸ್ ನ ಕೆಲ ಅತೃಪ್ತ ಶಾಸಕರು ಬಿಜೆಪಿಯ ಸಂಪರ್ಕದಲ್ಲಿದ್ದುಕೊಂಡು ಮೈತ್ರಿ ಸರ್ಕಾರವನ್ನು ಅಲುಗಾಡಿಸುತ್ತಿದ್ದಾರೆ. ಇದೀಗ ಜೆಡಿಎಸ್ ಶಾಸಕರೊಬ್ಬರು ಬಜೆಟ್ ಅಧಿವೇಶನಕ್ಕೆ ಕೈಕೊಟ್ಟು ಅತೃಪ್ತ ಬಣಕ್ಕೆ ಜಿಗಿದಿದ್ದಾರೆ.
ಅಧಿವೇಶನಕ್ಕೆ ಆಬ್ಸೆಂಟ್: ಕೈ ಎತ್ತಿದ JDS ಶಾಸಕ
ಇದ್ರಿಂದ ಎಚ್ಚೆತ್ತುಕೊಂಡ ಜೆಡಿಎಸ್ ನಾಯಕರು ಕೆಟ್ಟ ಮೇಲೆ ಬುದ್ಧಿಬಂತು ಎನ್ನುವಂತೆ ಇದೀಗ ತನ್ನೆಲ್ಲ ಶಾಸಕರಿಗೆ ವಿಪ್ ಜಾರಿ ಮಾಡಿದೆ.
ನಾಳೆ [ಶುಕ್ರವಾರ] ರಾಜ್ಯ ಸಮ್ಮೀಶ್ರ ಸರ್ಕಾರದ ಬಜೆಟ್ ಮಂಡನೆ ಹಿನ್ನಲೆಯಲ್ಲಿ ಅಧಿವೇಶನಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಜೆಡಿಎಸ್ ನ ಎಲ್ಲ ಶಾಸಕರಿಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿಪ್ ಜಾರಿಗೊಳಿಸಿದ್ದಾರೆ.
ದೋಸ್ತಿ ಸರ್ಕಾರ ಉಳಿಸಲು 5 ಸಚಿವರ ರಾಜೀನಾಮೆ ?
ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯ ಶಾಸಕ ನಾರಾಯಣಸ್ವಾಮಿ ಅವರು ನಿನ್ನೆಯಿಂದ ಸದನಕ್ಕೆ ಹಾಜರಾಗದೆ ಮುಂಬೈಗೆ ತೆರಳಿ ಕಾಂಗ್ರೆಸ್ ಅತೃಪ್ತ ಗುಂಪಿಗೆ ಸೇರಿರುವುದು ಪಕ್ಕಾ ಎನ್ನಲಾಗಿದೆ.
ಈಗಾಗಲೇ ಅವರನ್ನು ಸಂಪರ್ಕಿಸಲು ಯತ್ನಿಸುತ್ತಿರುವ ಜೆಡಿಎಸ್ ನಾಯಕರು ಅವರ ಮೊಬೈಲ್ ನಾಟ್ ರಿಚೇಬಲ್ ಆಗಿರುವುದು ನಾಯಕರಿಗೆ ಕಸಿವಿಸಿ ಉಂಟು ಮಾಡಿದೆ. ಅಲ್ಲದೆ, ಇನ್ನುಳಿದ ಶಾಸಕರನ್ನು ಹದ್ದುಬಸ್ತಿನಲ್ಲಿಡಲು ಬಜೆಟ್ ಅಧಿವೇಶನಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ವಿಪ್ ಜಾರಿ ಮಾಡಲಾಗಿದೆ.
ಇಷ್ಟು ದಿನ ನಮ್ಮ ಜೆಡಿಎಸ್ ಶಾಸಕರು ಎಲ್ಲಿಗೂ ಹೋಗಲ್ಲ ಎಂದು ಬಿಗುತ್ತಿದ್ದ ಸಿಎಂ ಕುಮಾರಸ್ವಾಮಿ ಯಾಮಾರಿದ ಮೇಲೆ ಎಚ್ಚೆತ್ತುಕೊಂಡಿರುವುದು ಒಂದು ರೀತಿಯಲ್ಲಿ ಮುಜುಗರಕ್ಕೆ ಸಿಲುಕಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.