ನಾನೂ ಸಿಎಂ ಹುದ್ದೆ ಆಕಾಂಕ್ಷಿ ಎಂದ ಪರಿಷತ್ ಸದಸ್ಯ..!

Published : Oct 26, 2020, 06:07 PM ISTUpdated : Oct 26, 2020, 06:15 PM IST
ನಾನೂ ಸಿಎಂ ಹುದ್ದೆ ಆಕಾಂಕ್ಷಿ ಎಂದ ಪರಿಷತ್ ಸದಸ್ಯ..!

ಸಾರಾಂಶ

ಸದ್ಯ ಕಾಂಗ್ರೆಸ್, ಬಿಜೆಪಿಯಲ್ಲಿ ಮುಂದಿನ ಸಿಎಂ ಯಾರು ಎನ್ನುವ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ ವಿಧಾನಪರಿಷತ್ ಸದಸ್ಯ ನಾನು ಕೂಡ ಸಿಎಂ ಹುದ್ದೆ ಆಕಾಂಕ್ಷಿ ಎಂದಿದ್ದಾರೆ.

ಗದಗ, (ಅ.26): ಎಲ್ಲರೂ ಮುಖ್ಯಮಂತ್ರಿ ಹುದ್ದೆಯ ಕನಸು ಕಾಣುವವರೇ. ಎಲ್ಲಾ ರಾಜಕೀಯ ಪಕ್ಷಗಳು ಕೂಡ ಗೊಂದಲಗಳ ಗೂಡು. ಒಬ್ಬೊಬ್ಬರದ್ದು ಒಂದೊಂದು ರೀತಿಯ ಕನಸುಗಳು. ತಿರುಕನು ಕೂಡ ಕನಸಲ್ಲಿ ರಾಜನಾಗಿ ಮೆರೆಯುತ್ತಾನೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ತಿಳಿಸಿದ್ದಾರೆ.

ಗದಗನಲ್ಲಿ ಇಂದು (ಸೋಮವಾರ) ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಹುದ್ದೆ ವಿಚಾರವಾಗಿ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಹೊರಟ್ಟಿ, ನಾನು ಸೇರಿದಂತೆ ಎಲ್ಲರೂ ಸಿಎಂ ಹುದ್ದೆ ಆಕಾಂಕ್ಷಿಗಳೇ. ಸಿಎಂ ಹುದ್ದೆ ಬಗ್ಗೆ ಎಲ್ಲರೂ ಕನಸು ಕಾಣುವವರೇ. ಮುಖ್ಯಮಂತ್ರಿಯಾದಂತೆ ಕನಸು ಕಾಣುವುದು ತಪ್ಪಲ್ಲ, ತಿರುಕ ಕೂಡ ಕನಸಿನಲ್ಲಿ ತಾನು ರಾಜನಾಗಿದ್ದೇನೆ ಎಂದು ತಿಳಿಯುತ್ತಾನೆ. ಹಾಗೇ ಸಿಎಂ ಖುರ್ಚಿ ಕನಸು ಕಾಣುವವರು ಕಾಣಲಿ ಬಿಡಿ ಎಂದು ಹೇಳಿದರು.

'ಸಿದ್ದರಾಮಯ್ಯ-ಡಿಕೆಶಿ ನಡುವೆ ಪೈಪೋಟಿ : ಶುರುವಾಗಿದೆ ಸಿಎಂ ಕುರ್ಚಿಗೆ ಕೈ ಸಂಘರ್ಷ' 

ರಾಜಕೀಯ ಪಕ್ಷಗಳಲ್ಲಿ ಸಾಕಷ್ಟು ಗೊಂದಲಗಳಿವೆ. ರಾಜಕೀಯ ನಾಯಕರ ಹೇಳಿಕೆಗಳನ್ನು ಗಮನಿಸುತ್ತಾ ಹೋದರೆ ರಾಜಕಾರಣ ಮಾಡುವುದೇ ಬೇಡ ಎನಿಸಿಬಿಡುತ್ತದೆ. ಹಾಗಂತ ರಾಜಕಾರಣ ಬಿಡಲು ಆಗುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಎನ್ನುವ ಹಗ್ಗಜಗ್ಗಾಟ ಈಗಾಗಲೇ ಶುರುವಾಗಿದೆ. ಇನ್ನು ಬಿಜೆಪಿಯಲ್ಲಿ ಬಿಎಸ್ ಯಡಿಯೂರಪ್ಪ ಇದೇ ಲಾಸ್ಟ್ ಎನ್ನುವ ಮಾತುಗಳು ಕೇಳಿಬರುತ್ತಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕರ್ನಾಟಕ ಸಂಸದರ ಬಗ್ಗೆ ಪ್ರಧಾನಿ ಮೋದಿ ಅಸಮಾಧಾನ, ತೀವ್ರ ಕ್ಲಾಸ್, ಆ 45 ನಿಮಿಷ ಸಭೆಯಲ್ಲಿ ಹೇಳಿದ್ದೇನು?
ಸಿಎಂ ಪುತ್ರ ಯತೀಂದ್ರ ಹೇಳಿಕೆ ವಿವಾದ; ಬೆಳಗಾವಿಯಲ್ಲಿ ಡಿಕೆಶಿ ಅಲರ್ಟ್, ಆಪ್ತರ ಲಂಚ್ ಮೀಟಿಂಗ್!