ವಿರೋಧಿ ಚಟುವಟಿಕೆ : ಕೇರಳದಲ್ಲಿ ಜೆಡಿಎಸ್‌ ವಿಸರ್ಜನೆ

Kannadaprabha News   | Asianet News
Published : Oct 13, 2020, 07:07 AM IST
ವಿರೋಧಿ ಚಟುವಟಿಕೆ : ಕೇರಳದಲ್ಲಿ ಜೆಡಿಎಸ್‌ ವಿಸರ್ಜನೆ

ಸಾರಾಂಶ

ವಿರೋಧಿ ಚಟುವಟಿಕೆಗಳನ್ನು ನಡೆಸಿದ ಹಿನ್ನೆಲೆಯಲ್ಲಿ ಕೇರಲದಲ್ಲಿ ಜೆಡಿಎಸ್ ಪಕ್ಷ ವಿಸರ್ಜನೆ ಮಾಡಲಾಗಿದೆ. 

ಬೆಂಗಳೂರು (ಅ.13): ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಕೇರಳ ಜೆಡಿಎಸ್‌ ಶಾಸಕ ಸಿ.ಕೆ.ನಾನು ನೇತೃತ್ವದ ರಾಜ್ಯ ಘಟಕವನ್ನು ವಿಸರ್ಜಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಆದೇಶಿಸಿದ್ದಾರೆ. 

ಪಕ್ಷದ ಸಂಘಟನಾತ್ಮಕ ಮೇಲುಸ್ತುವಾರಿ ವಹಿಸಲು ತಾತ್ಕಾಲಿಕವಾಗಿ ಹಂಗಾಮಿ ಅಧ್ಯಕ್ಷರನ್ನಾಗಿ ಮ್ಯಾಥ್ಯೂ ಟಿ.ಥಾಮಸ್‌ ಅವರನ್ನು ನೇಮಕ ಮಾಡಿದ್ದಾರೆ. 

ಬೈ ಎಲೆಕ್ಷನ್‌ನಲ್ಲಿ ಜಾತಿ ವಾರ್: ಹಳೆ ಜೋಡೆತ್ತುಗಳ ನಡುವೆ ಶುರುವಾಯ್ತು ಕಾದಾಟ ..

ಸಂಘಟನೆ ವಿಚಾರದಲ್ಲಿ ವಿಫಲವಾಗಿರುವ ಮತ್ತು ಪಕ್ಷ ಅಸ್ಥಿರಗೊಳಿಸುವ ಪ್ರಯತ್ನ ನಡೆಸಿದ್ದರು ಎಂಬ ಆರೋಪದ ಮೇಲೆ ಜೆಡಿಎಸ್‌ ರಾಷ್ಟ್ರೀಯ ಕಾರ್ಯಾಧ್ಯಕ್ಷ ಬಿ.ಎಂ.ಫಾರೂಕ್‌ ವಿವರಣೆ ಕೇಳಿ ನೋಟಿಸ್‌ ನೀಡಿದ್ದರು. 

ಆದರೆ, ನಾನು ಅವರು ನೋಟಿಸ್‌ಗೆ ಯಾವುದೇ ಉತ್ತರ ನೀಡದ ಕಾರಣಕ್ಕಾಗಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜೋಸೆ ತೆಟ್ಟಾಯಿಲ್‌, ಜಮೀಲಾ ಪ್ರಕಾಶಂ ಅವರನ್ನು ಉಪಾಧ್ಯಕ್ಷರನ್ನಾಗಿ, ಬೆನ್ನಿ ಮೂಂಜೇಲಿ, ವಿ.ಮುರುಗದಾಸ್‌, ಬಿಜೈ ಜೋಸೆಫ್‌ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ಮಹಮದ್‌ ಶಾ ಅವರನ್ನು ಖಜಾಂಚಿಯಾಗಿ ನೇಮಕ ಮಾಡಲಾಗಿದೆ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಸತಿ ಯೋಜನೆಗಳಿಗೆ ಸಹಾಯಧನ ಹೆಚ್ಚಳಕ್ಕೆ ಚಿಂತನೆ: ಸಚಿವ ಜಮೀರ್‌ ಅಹಮದ್‌
ವಿದೇಶದಲ್ಲಿ ಇರುವವರಿಗೂ ಗ್ಯಾರಂಟಿ ಲಾಭ ಬಗ್ಗೆ ಸಿಎಲ್ಪೀಲಿ ಪ್ರಸ್ತಾಪ: ಸಚಿವ ಮಧು ಬಂಗಾರಪ್ಪ