ಹಿಂದಿ ಹೇರಿಕೆ ವಿರುದ್ಧ ಗುಡುಗಿದ ಎಚ್‌ಡಿಕೆ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ

Published : Sep 13, 2021, 08:29 PM IST
ಹಿಂದಿ ಹೇರಿಕೆ ವಿರುದ್ಧ ಗುಡುಗಿದ ಎಚ್‌ಡಿಕೆ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ

ಸಾರಾಂಶ

* ಹಿಂದಿ ಹೇರಿಕೆ ವಿರುದ್ಧ ಗುಡುಗಿದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ * ಕೇಂದ್ರ ಸರ್ಕಾರಕ್ಕೆ  ಕುಮಾರಸ್ವಾಮಿ ಎಚ್ಚರಿಕೆ * ಅನ್ಯ ಭಾಷೆಗಳನ್ನು ಬೀದಿಪಾಲು ಮಾಡುವುದನ್ನು ಸಹಿಸಲಾಗದ ಎಂದ ಎಚ್‌ಡಿಕೆ

ಬೆಂಗಳೂರು, (ಸೆ.13): ಹಿಂದಿಯನ್ನು ಹಿಂದಿಯೇತರ ಭಾಷಿಕ ಸಮುದಾಯಗಳ ಮೇಲೆ ಹೇರುವ ಒಕ್ಕೂಟ ಸರ್ಕಾರದ ದುರುದ್ದೇಶಗಳನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆ ಸೆಪ್ಟೆಂಬರ್ 14ರಂದು ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ #StopHindiImposition ಮತ್ತು #ಹಿಂದಿಹೇರಿಕೆನಿಲ್ಲಿಸಿ ಎಂಬ ಟ್ವಿಟರ್ ಅಭಿಯಾನ ನಡೆಸಲು ಮುಂದಾಗಿದೆ.

ಇನ್ನು ಈ ವಿಚಾರವಾಗಿ ಮಾಜಿ ಸಿಎಂ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರು  ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಸೆ.14ಕ್ಕೆ ಕರವೇ ಧರಣಿ : ಕೇಂದ್ರ ಸರ್ಕಾರದ ಹಿಂದಿ ಹೇರಿಕೆಗೆ ವಿರೋಧ

 ಸರಣಿ ಟ್ವೀಟ್ ಗಳ ಮೂಲಕ ಹಿಂದಿ ಹೇರಿಕೆ ವಿರುದ್ಧ ಆಕ್ರೋಶ ಹೊರಹಾಕಿರುವ ಎಚ್‌ಡಿಕೆ , ಭಾರತ ಒಕ್ಕೂಟ ರಾಷ್ಟ್ರ. ಬಹುಸಂಸ್ಕೃತಿ, ಬಹುಭಾಷೆ, ಬಹುಜನರ ಆಗರ. ಅನೇಕ ಭಾಷೆಗಳ ತೊಟ್ಟಿಲು. ಆದರೆ ಒಂದೇ ಭಾಷೆಯನ್ನು ವೈಭವೀಕರಿಸುವ, ಹೇರುವ ಹುಂಬ ಪ್ರಯತ್ನವೇಕೆ ? ಎಂದು ಪ್ರಶ್ನಿಸಿದ್ದಾರೆ.

ಹಿಂದಿ ಹೇರಿಕೆಯನ್ನು ಕನ್ನಡಿಗರು ಒಪ್ಪುವುದಿಲ್ಲ. ಹಿಂದಿ ದಿವಸ ಆಚರಣೆಯನ್ನೂ ಸಹಿಸುವುದಿಲ್ಲ.‌ ಒಕ್ಕೂಟದ ಎಲ್ಲಾ ಭಾಷೆಗಳಂತೆ ಹಿಂದಿಯೂ ಒಂದು ಭಾಷೆಯಷ್ಟೇ. ಕೇಂದ್ರ ಸರಕಾರ ಹಿಂದಿಗೆ ʼಇಂದ್ರ ವೈಭೋಗʼ ನೀಡಿ ಅನ್ಯ ಭಾಷೆಗಳನ್ನು ಬೀದಿಪಾಲು ಮಾಡುವುದನ್ನು ಸಹಿಸಲಾಗದು ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ಹಿಂದಿ ಹೇರುವವರಿಗೆ ತಿಳಿದಿರಲಿ. ನಮ್ಮ ಕನ್ನಡ ಅಭಿಜಾತ ಭಾಷೆ. ನಮ್ಮ ಕನ್ನಡ ಸಾವಿರಾರು ವರ್ಷಗಳ ಘನ ಚರಿತ್ರೆಯುಳ್ಳ ಭಾಷೆ. ನಮ್ಮ ಕನ್ನಡ 6.4 ಕೋಟಿ ಜನರ ಹೃದಯಮಿಡಿತ. ನಮ್ಮ ಪಾಲಿನ ಮಾತೃ ಸ್ವರೂಪಿಣಿ ಎಂದಿದ್ದಾರೆ.

ನಮ್ಮ ನೆಲದಲ್ಲಿ ನಮ್ಮ ಕನ್ನಡ ಭಾಷೆಯೇ ಮೊದಲು. ಹಿಂದಿ ದಿವಸ ಆಚರಣೆ ಅಸಮರ್ಪಕ ಮತ್ತು ಅನಗತ್ಯ. ಹಿಂದಿ ಹೇರಿಕೆಯಿಂದ ಬಹುಭಾಷೆಯ ಭಾರತದ ನೆಮ್ಮದಿ ಕದಡುವುದು ಬೇಡ ಎಂದು ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜೀವಾವಧಿ ಶಿಕ್ಷೆ ಪ್ರಸ್ತಾಪ, 10 ಕೋಟಿ ದಂಡ! Anti-Paper Leak ಮಸೂದೆಯಲ್ಲಿ 6 ಪ್ರಮುಖ ಬದಲಾವಣೆ!
Karnataka News Live: Gold Medal - ನಮ್ಮ ಬೀದರ್‌ಗೆ ಕೂಗಳತೆ ದೂರದ ಊರಿನ ಹೆಣ್ಣುಮಗಳು ಈಗ ದೇಶದ ಹೆಮ್ಮೆ; 21ರ ಹರೆಯದಲ್ಲೇ 'ಚಿನ್ನ' ಗೆದ್ದು ಮನು ಭಾಕರ್‌ರನ್ನೇ ಹಿಂದಿಕ್ಕಿದ ಗೋಲ್ಡನ್‌ ಗರ್ಲ್!