'ರಾಮಮಂದಿರಕ್ಕೆ 2500 ಕೋಟಿ ಸಂಗ್ರಹ, ಅದೇ ಒಂದು ಊರಿನಲ್ಲಿ ಕಟ್ಟೋಕೆ ನಮ್ಮಂಥವರ ಬಳಿ ಬರ್ತೀರಾ'

Published : Mar 14, 2021, 06:40 PM IST
'ರಾಮಮಂದಿರಕ್ಕೆ  2500 ಕೋಟಿ ಸಂಗ್ರಹ, ಅದೇ ಒಂದು ಊರಿನಲ್ಲಿ ಕಟ್ಟೋಕೆ ನಮ್ಮಂಥವರ ಬಳಿ ಬರ್ತೀರಾ'

ಸಾರಾಂಶ

 ರಾಮಂದಿರ ದೇಣಿಗೆ ವಿಚಾರದಲ್ಲಿ ವಿವಾದಕ್ಕೀಡಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಮತ್ತೆ ಅಯೋಧ್ಯೆ ರಾಮಮಂದಿರದ ಬಗ್ಗೆ ಮಾತನಾಡಿದ್ದಾರೆ.

ಮಂಡ್ಯ, (ಮಾ.14): ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಬರೋಬ್ಬರಿ 2,500 ಕೋಟಿ ದೇಣಿಗೆ ಸಂಗ್ರಹ ಆಗಿದೆ. ಈ ಬಗ್ಗೆ ರಾಮಮಂದಿರ ಟ್ರಸ್ಟ್ ಮಾಹಿತಿ ಕೊಟ್ಟಿದೆ.

ಇನ್ನೂ ಈ ಬಗ್ಗೆ ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್‌ಡಿಕೆ, ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟೋಕೆ 2,500 ಕೋಟಿ ರೂ. ದೇಣಿಗೆ ಸಂಗ್ರಹ ಆಗಿದೆ. ಅದೇ ಒಂದು ಊರಿನಲ್ಲಿ ದೇವಸ್ಥಾನ ಕಟ್ಟೋಕೆ ನಮ್ಮಂಥವರ ಬಳಿ ದೇಣಿಗೆಗೆ ಬರುತ್ತೀರಾ ಎಂದು ಹೇಳಿದರು.

ರಾಮನ ಹೆಸರಲ್ಲಿ ಪುಂಡ-ಪೋಕರಿಗಳಿಂದ ಹಣ ಸಂಗ್ರಹ: ಮತ್ತೆ ಸಿಡಿದ ಕುಮಾರಸ್ವಾಮಿ

ಈ ಹಿಂದೆ ಕುಮಾರಸ್ವಾಮಿ ಅವರು, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಮಾಡುತ್ತಿರುವ ಸಂದರ್ಭದಲ್ಲಿ ಮನೆಗಳ ಗುರುತು ಮಾಡಲಾಗುತ್ತಿದೆ ಎಂದು ಹೇಳಿಕೆ ನೀಡಿ ವಿವಾದ ಹುಟ್ಟುಹಾಕಿದ್ದರು. ಇದಕ್ಕೆ ಪರ-ವಿರೋಧದ ಚರ್ಚೆಗಳು ಆಗಿದ್ದವು. ಅಲ್ಲದೇ ಎಚ್‌.ಡಿ ಕುಮಾರಸ್ವಾಮಿ ಈ ಹೇಳಿಕೆಗೆ ವಿಶ್ವ ಹಿಂದೂ ಪರಿಷತ್ ಆಕ್ಷೇಪ ವ್ಯಕ್ತಪಡಿಸಿತ್ತು.

ರಾಮನ ಹೆಸರಲ್ಲಿ ಪುಂಡ-ಪೋಕರಿಗಳಿಂದ ಹಣ ಸಂಗ್ರಹ ಮಾಡುತ್ತಿದ್ದಾರೆ ಅವರಿಗೆ ಅನುಮತಿ ಕೊಟ್ಟವರು ಯಾರು ಎಂದು ಪ್ರಶ್ನಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
ದ್ವೇಷ ಭಾಷಣ ತಡೆಗೆ ಕಾನೂನು ಯತ್ನ: ಕಾಂಗ್ರೆಸ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ