'ಸಿಎಂ ಬಿಎಸ್‌ ಯಡಿಯೂರಪ್ಪ ಸರ್ಕಾರಕ್ಕೆ ಅರ್ಚಕರ ಶಾಪ ತಟ್ಟಿದೆ'

Published : May 11, 2020, 06:11 PM IST
'ಸಿಎಂ ಬಿಎಸ್‌ ಯಡಿಯೂರಪ್ಪ ಸರ್ಕಾರಕ್ಕೆ ಅರ್ಚಕರ ಶಾಪ ತಟ್ಟಿದೆ'

ಸಾರಾಂಶ

ಕೊರೋನಾ ವೈರಸ್‌ನಿಂದ ಸಂಕಷ್ಟದಲ್ಲಿರುವವರಿಗೆ ಪ್ಯಾಕೇಜ್ ಘೋಷಣೆ ಮಾಡಿದೆ. ಆದ್ರೆ, ಅರ್ಚರ ಯಾವುದೇ ಪರಿಹಾರ ನೀಡಿಲ್ಲ. ಅವರಿಂದಲೇ ಸರ್ಕಾರಕ್ಕೆ ಶಾಪ ತಟ್ಟದೆಯಂತೆ. ಹೀಗಂತಾ ಯಾರು? ಯಾರಿಗೆ ಹೇಳಿದರು ಎನ್ನುವುದು ಈ ಕೆಳಗಿನಂತಿದೆ. 

ಹಾಸನ, (ಮೇ.11): ಸರ್ಕಾರಕ್ಕೆ ಅರ್ಚಕರ ಶಾಪ ತಟ್ಟಿದೆ. ಅರ್ಚಕರ ಶಾಪದಿಂದಲೇ ಈ ಸರ್ಕಾರಕ್ಕೆ ಒಂದಲ್ಲ ಒಂದು ಕಂಟಕಗಳು ಎದುರಾಗುತ್ತಿವೆ ಎಂದು ಜೆಡಿಎಸ್ ಮುಖಂಡ ಎಚ್ ಡಿ ರೇವಣ್ಣ ಹೇಳಿದ್ದಾರೆ.

ಇಂದು (ಸೋಮವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ 2ನೇ ಪ್ಯಾಕೇಜ್ ನಲ್ಲಿಯಾದರೂ ಹೊಟೇಲ್ ಕೆಲಸಗಾರರು, ಲಾರಿ ಕ್ಲೀನರ್‌ಗಳು, ಅರ್ಚಕರಿಗೂ ಸಹಾಯಧನ ಘೋಷಿಸಬೇಕು. ಬಹುಶಃ ಈ ಸರ್ಕಾರಕ್ಕೆ ಅರ್ಚಕರ ಶಾಪ ತಟ್ಟಿರಬಹುದು. ಅವರ ಶಾಪ ದಿಂದಲೇ ಈ ಸರ್ಕಾರಕ್ಕೆ ಒಂದೊಂದು ಕಂಟಕ ಕಾಡುತ್ತಿದೆ. ಇನ್ನು ಮುಂದಾದರೂ ಅರ್ಚಕರ ಬಗ್ಗೆ ನಿಗಾ ವಹಿಸಲಿ ಎಂದರು.

ರೇಪ್ ಕತೆ ಹಿಂದೆ ಹುಡ್ಗಿಯ ಕರಾಮತ್ತು, ಒಗ್ಗಟ್ಟಿಗಾಗಿ ಕಾಂಗ್ರೆಸ್ ಕಸರತ್ತು; ಮೇ.11ರ ಟಾಪ್ 10 ಸುದ್ದಿ!

 ಕೊರೋನಾ ವಿಶೇಷ ಪ್ಯಾಕೇಜ್‌ನಂತೆ ಸರ್ಕಾರ ಚುನಾವಣೆಯಲ್ಲಿ ಮತದಾನ ಮಾಡಿರುವ ಸ್ತ್ರೀಶಕ್ತಿ ಸಂಘಗಳ ಸಾಲವನ್ನೂ ಮನ್ನಾ ಮಾಡಬೇಕೆಂದು ಸರ್ಕಾರವನ್ನು ಆಗ್ರಹಿಸಿದರು.

ರಾಜ್ಯದ ಜನರಿಗೆ ಪ್ಯಾಕೇಜ್ ಘೋಷಣೆ ಮಾಡಲು ಯಡಿಯೂರಪ್ಪ 45 ದಿನ ತೆಗೆದುಕೊಂಡಿದ್ದಾರೆ. ಅದೂ ಸಹ ವಿರೋಧ ಪಕ್ಷಗಳ ಒತ್ತಾಯಕ್ಕೆ 1610 ಕೋಟಿ ಪ್ಯಾಕೇಜ್ ಘೋಷಿಸಿದ್ದಾರೆ. ಅದನ್ನು ಪಡೆಯುವಷ್ಟರಲ್ಲಿ ಜನರು ಪಡೆದುಕೊಳ್ಳುವ ಹೊತ್ತಿಗೆ ಹೆಣ ಬಿದ್ದು ಹೋದಂತಾಗುತ್ತದೆ ಎಂದು ತಿವಿದರು.

ರಾಜ್ಯದಲ್ಲಿ ಬಹಳಷ್ಟು ಸಮುದಾಯದ ಜನರು ಸಂಕಷ್ಟದಲ್ಲಿದ್ದಾರೆ. ಎಲ್ಲಾ ಸಮುದಾಯಕ್ಕೂ ಪ್ಯಾಕೇಜ್ ನೀಡಬೇಕು. ಚುನಾವಣೆಯಲ್ಲಿ ಮತದಾನ ಮಾಡಿದ ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ ಮಾಡಬೇಕೆಂದು ಆಗ್ರಹಿಸಿದರು.

ಹಾಸನವನ್ನು‌ ರಾಜ್ಯ ಸರ್ಕಾರ ಕಡೆಗಣಿಸುತ್ತಿದೆ. ಬಿಜೆಪಿಗರು ವಿಪಕ್ಷಗಳ ಮೇಲೆ ಬೇಕಿದ್ದಲ್ಲಿ ದ್ವೇಷ ಮಾಡಲಿ. ಆದರೆ ರೈತರ ಮೇಲೆ ಬೇಡ. ಸರ್ಕಾರ ದ್ವೇಷದ ರಾಜಕಾರಣ ಮಾಡಬಾರದು. ದ್ವೇಷದ ರಾಜಕಾರಣ ಬಿಜೆಪಿಗರಿಗೆ ತಿರುಗುಬಾಣವಾಗಲಿದೆ ಎಂದು ರೇವಣ್ಣ ಎಚ್ಚರಿಸಿದರು. 

ಕೊನೆಗೆ ಕೊರೋನಾ ಮುಗಿದ ಬಳಿಕ ಈ ಸರ್ಕಾರದ 12 ತಿಂಗಳಲ್ಲಿ ಏನೇನಾಗಿದೆ ಎಂಬುದನ್ನು ಎಳೆ ಎಳೆಯಾಗಿ ಬಿಚ್ಚಿಡುವುದಾಗಿ ರೇವಣ್ಣ ಬಾಂಬ್ ಸಿಡಿಸಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ