ಮೋದಿ ಮಾತು ಕೇಳಿದ್ದರೆ ಎಚ್‌ಡಿಕೆ 5 ವರ್ಷ ಸಿಎಂ ಆಗಿರ್ತಿದ್ರು: ರೇವಣ್ಣ

Published : Jun 30, 2022, 04:30 AM IST
ಮೋದಿ ಮಾತು ಕೇಳಿದ್ದರೆ ಎಚ್‌ಡಿಕೆ 5 ವರ್ಷ ಸಿಎಂ ಆಗಿರ್ತಿದ್ರು: ರೇವಣ್ಣ

ಸಾರಾಂಶ

*  ಬಿಜೆಪಿಯವರು ಗುಬ್ಬಿ ವಾಸುಗೆ ಹಣ ನೀಡಿ ರಾಜ್ಯಸಭೆಯ ಚುನಾವಣೆಯಲ್ಲಿ ಮತ ಖರೀದಿ ಮಾಡಿದ್ದಾರೆ *  ಮಹಾರಾಷ್ಟ್ರ ರೀತಿ ಸರ್ಕಾರ ಕೆಡವುವುದಾದರೆ ಚುನಾವಣೆ ನಡೆಸುವುದು ಬೇಡ *  ಮೈಸೂರು ಮಹಾರಾಜರ ರೀತಿ ಎಲ್ಲಾ ನಾಮ ನಿರ್ದೇಶನ ಮಾಡಲಿ  

ಹಾಸನ(ಜೂ.30):  ಕಾಂಗ್ರೆಸ್‌ ಜತೆ ಸರ್ಕಾರ ರಚನೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರೇ ಎಚ್‌.ಡಿ.ಕುಮಾರಸ್ವಾಮಿಯವರನ್ನು ಕರೆದು, ಕಾಂಗ್ರೆಸ್‌ ಜೊತೆ ಹೊಗಬೇಡ, 5 ವರ್ಷ ನೀನೇ ಮುಖ್ಯಮಂತ್ರಿಯಾಗು ಎಂದಿದ್ದರು. ಅವರ ಮಾತು ಕೇಳಿದ್ದರೆ ಕುಮಾರಸ್ವಾಮಿ 5 ವರ್ಷ ಮುಖ್ಯಮಂತ್ರಿಯಾಗಿರುತ್ತಿದ್ದರು. ಆದರೆ ನಾವು ಕೋಮುವಾದಿಗಳ ಜೊತೆ ಹೋಗಬಾರದು ಎಂದು ಕಾಂಗ್ರೆಸ್‌ ಜೊತೆ ಸರ್ಕಾರ ಮಾಡಿದೆವು ಎಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ ಹೇಳಿದರು. 

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದವರು ಗುಬ್ಬಿ ವಾಸುಗೆ ಹಣ ನೀಡಿ ರಾಜ್ಯಸಭೆಯ ಚುನಾವಣೆಯಲ್ಲಿ ಮತ ಖರೀದಿ ಮಾಡಿದ್ದಾರೆ. ಮಹಾರಾಷ್ಟ್ರ ರೀತಿ ಸರ್ಕಾರ ಕೆಡವುವುದಾದರೆ ಚುನಾವಣೆ ನಡೆಸುವುದು ಬೇಡ ಅಂತ ತಿಳಿಸಿದ್ದಾರೆ. 

ಮೋದಿ ಭೇಟಿ ಖರ್ಚಿನಲ್ಲಿ ಒಂದು ಗ್ರಾಮ ಉದ್ಧಾರವಾಗ್ತಿತ್ತು: ಕುಮಾರಸ್ವಾಮಿ

ಮೈಸೂರು ಮಹಾರಾಜರ ರೀತಿ ಎಲ್ಲಾ ನಾಮ ನಿರ್ದೇಶನ ಮಾಡಲಿ. ರಾಜ್ಯ ಸರ್ಕಾರದ ಅ​ಧಿಕಾರ ರಾಜ್ಯಪಾಲರಿಗೆ ಕೊಡಲಿ. ಗೆದ್ದ ಶಾಸಕರನ್ನು ಬಾಂಬೆ ಹೋಟೆಲ್‌, ಗೋವಾಗಳಿಗೆ ಕರೆದುಕೊಂಡು ಹೋಗುವುದು ತಪ್ಪುತ್ತದೆ. ಚುನಾವಣೆಗೆ ಆಸ್ತಿ ಮಾರಿ ನಿಲ್ಲುವುದು ತಪ್ಪಲಿದೆ ಎಂದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ