ಜೆಡಿಎಸ್‌ ಮುಖಂಡ ಇಂದು ಕಾಂಗ್ರೆಸ್‌ಗೆ: ಕುಮಾರಸ್ವಾಮಿಗೂ ನನಗೂ ಸಂಬಂಧವಿಲ್ಲ ಎಂದ ದಳ ನಾಯಕ

Published : Sep 15, 2023, 11:56 AM IST
ಜೆಡಿಎಸ್‌ ಮುಖಂಡ ಇಂದು ಕಾಂಗ್ರೆಸ್‌ಗೆ: ಕುಮಾರಸ್ವಾಮಿಗೂ ನನಗೂ ಸಂಬಂಧವಿಲ್ಲ ಎಂದ ದಳ ನಾಯಕ

ಸಾರಾಂಶ

ಜೆಡಿಎಸ್‌ನ ಪ್ರಮುಖ ನಾಯಕರು ಅವರ ಪಕ್ಷದಲ್ಲಿ ಪ್ರಾಮಾಣಿಕ ಕಾರ್ಯಕರ್ತರಂತೆ ಕೆಲಸ ಮಾಡಿದ್ದಾರೆ. ಅವರು ಈಗ ಪಕ್ಷದ ಬಗ್ಗೆ ಬೇಸರಗೊಂಡು ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದಾರೆ. ಪದ್ಮನಾಭನಗರ ಕ್ಷೇತ್ರವಷ್ಟೇ ಅಲ್ಲದೆ ಬೆಂಗಳೂರಿನ ಬೇರೆ ಕ್ಷೇತ್ರಗಳ ಬಿಜೆಪಿ-ಜೆಡಿಎಸ್‌ನ ನಾಯಕರು ಕಾಂಗ್ರೆಸ್‌ ಸೇರಲು ಆಸಕ್ತಿ ಹೊಂದಿದ್ದಾರೆ. ಶುಕ್ರವಾರ ಹಲವು ಮಂದಿ ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದಾರೆ: ಡಿ.ಕೆ. ಸುರೇಶ್‌.

ಬೆಂಗಳೂರು(ಸೆ.15):  ಬೆಂಗಳೂರಿನಲ್ಲಿ ಪಕ್ಷದ ಬಲವರ್ಧನೆಗಾಗಿ ಹಾಗೂ ಕಾಂಗ್ರೆಸ್‌ನ ತತ್ವ ಸಿದ್ಧಾಂತವನ್ನು ಒಪ್ಪಿಕೊಂಡ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು ಎಂದು ಸಂಸದ ಡಿ.ಕೆ. ಸುರೇಶ್‌ ತಿಳಿಸಿದರು.

ಶುಕ್ರವಾರ ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿರುವ ಜೆಡಿಎಸ್‌ ಮುಖಂಡರ ಪ್ರಸಾದ್ ಬಾಬು (ಕಬಡ್ಡಿ ಬಾಬು) ಅವರನ್ನು ಗುರುವಾರ ಭೇಟಿಯಾಗಿ ಪಕ್ಷ ಸೇರ್ಪಡೆ ಕುರಿತಂತೆ ಚರ್ಚೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಸುರೇಶ್‌, ಜೆಡಿಎಸ್‌ನ ಪ್ರಮುಖ ನಾಯಕರು ಅವರ ಪಕ್ಷದಲ್ಲಿ ಪ್ರಾಮಾಣಿಕ ಕಾರ್ಯಕರ್ತರಂತೆ ಕೆಲಸ ಮಾಡಿದ್ದಾರೆ. ಅವರು ಈಗ ಪಕ್ಷದ ಬಗ್ಗೆ ಬೇಸರಗೊಂಡು ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದಾರೆ. ಪದ್ಮನಾಭನಗರ ಕ್ಷೇತ್ರವಷ್ಟೇ ಅಲ್ಲದೆ ಬೆಂಗಳೂರಿನ ಬೇರೆ ಕ್ಷೇತ್ರಗಳ ಬಿಜೆಪಿ-ಜೆಡಿಎಸ್‌ನ ನಾಯಕರು ಕಾಂಗ್ರೆಸ್‌ ಸೇರಲು ಆಸಕ್ತಿ ಹೊಂದಿದ್ದಾರೆ. ಶುಕ್ರವಾರ ಹಲವು ಮಂದಿ ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದಾರೆ. ಬೆಂಗಳೂರಿನಲ್ಲಿ ಕಾಂಗ್ರೆಸ್‌ ಬಲಪಡಿಸಲು ಎಲ್ಲ ರೀತಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಬಿಜೆಪಿ ಜತೆ ಮೈತ್ರಿ ಆಗದಿದ್ದರೆ ಜೆಡಿಎಸ್‌ಗೆ ಉಳಿಗಾಲವಿಲ್ಲ: ಮಾಜಿ ಸಂಸದ ಶಿವರಾಮೇಗೌಡ

ಪ್ರಸಾದ್‌ ಬಾಬು ಮಾತನಾಡಿ, ಕಾಂಗ್ರೆಸ್‌ನ ಐದು ಗ್ಯಾರಂಟಿ ಯೋಜನೆಗಳಿಗೆ ಜನಮನ್ನಣೆ ದೊರೆತಿದೆ. ಕಾಂಗ್ರೆಸ್‌ನ ತತ್ವ ಸಿದ್ಧಾಂತ ಒಪ್ಪಿ ಪಕ್ಷ ಸೇರಲು ತೀರ್ಮಾನಿಸಿದ್ದೇನೆ. ನನಗಾಗಿ ಯಾವುದೇ ಬೇಡಿಕೆಯನ್ನು ಕಾಂಗ್ರೆಸ್‌ ಮುಂದಿಟ್ಟಿಲ್ಲ. ಆದರೆ, ನನ್ನ ಮಗ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾನೆ. ಹೀಗಾಗಿ ಕಾಂಗ್ರೆಸ್‌ನಿಂದ ಟಿಕೆಟ್‌ ಕೊಡುವೆ ವಿಶ್ವಾಸವಿದೆ. ಈ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರೊಂದಿಗೂ ಚರ್ಚಿಸಿದ್ದೇನೆ ಎಂದು ತಿಳಿಸಿದರು.

ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರಿಗೂ ನನಗೂ ಬೇರೆ ರೀತಿಯ ಸಂಬಂಧವಿಲ್ಲ. ಆದರೆ ಜೆಡಿಎಸ್‌ ಪಕ್ಷ ಬಿಟ್ಟರೂ ಅವರೊಂದಿಗೆ ಅದೇ ವಿಶ್ವಾಸವನ್ನು ಮುಂದುವರಿಸಿಕೊಂಡು ಹೋಗುತ್ತೇನೆ. ಯಾರಾದರೂ ಅವರ ಬಗ್ಗೆ ನನ್ನ ಬಳಿ ಕೇಳಿದರೆ ಅವರು ನಮ್ಮ ನಾಯಕರು ಎಂದಷ್ಟೇ ಹೇಳುತ್ತೇನೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಂಸದ ಭೀಮ್ ಆರ್ಮಿ ಸಹ ಸಂಸ್ಥಾಪಕ ಚಂದ್ರಶೇಖರ್ ಅಜಾದ್ ವಿರುದ್ಧ ಮಾಜಿ ಗರ್ಲ್‌ಫ್ರೆಂಡ್ ಬಾಂಬ್
ಜನರೊಂದಿಗೆ ಸಂಪರ್ಕ ಸಾಧಿಸಿ, ಸೋಶಿಯಲ್ ಮೀಡಿಯಾ ಬಳಸಿ: ಸಂಸದರಿಗೆ ಮೋದಿ ಕರೆ