ಜನ್ಮದಿನದಂದು ಒಂದು ದೃಢ ನಿರ್ಧಾರಕ್ಕೆ ಬಂದ ಮಧು ಬಂಗಾರಪ್ಪ

Published : Mar 02, 2021, 02:31 PM ISTUpdated : Mar 02, 2021, 02:38 PM IST
ಜನ್ಮದಿನದಂದು ಒಂದು ದೃಢ ನಿರ್ಧಾರಕ್ಕೆ ಬಂದ ಮಧು ಬಂಗಾರಪ್ಪ

ಸಾರಾಂಶ

ಒಂದೂವರೆ ವರ್ಷದಿಂದ ರಾಜಕೀಯ ಚಟುವಟಿಕೆಯಿಂದ ದೂರ ಉಳಿದಿರುವ ಜೆಡಿಎಸ್ ನಾಯಕ ಮಧು ಬಂಗಾರಪ್ಪ ತಮ್ಮ ಜನ್ಮದಿನದಂದು ತಮ್ಮ ರಾಜಕೀಯ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಶಿವಮೊಗ್ಗ,(ಮಾ.02): ಜೆಡಿಎಸ್‌ನಿಂದ ಒಂದು ಕಾಲು ಆಚೆ ಇಟ್ಟಿರುವ ಮಾಜಿ ಶಾಸಕ ಮಧುಬಂಗಾರಪ್ಪ ಅವರು ಒಂದು ದೃಢ ನಿರ್ಧಾರಕ್ಕೆ ಬಂದಿದ್ದಾರೆ.

ಹೌದು...ಜಿಲ್ಲಾ ಪಂಚಾಯತ್ ಚುನಾವಣೆ ಒಳಗೆ ಒಂದು ದೃಢ ನಿರ್ಧಾರ ಮಾಡುವುದಾಗಿ ಜೆಡಿಎಸ್ ಯುವ ಮುಖಂಡ ಹಾಗೂ ಮಾಜಿ ಶಾಸಕ ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು.

ಫಿನಿಕ್ಸ್‌ನಂತೆ ಅಖಾಡಕ್ಕಿಳಿದ ಮಧು ಬಂಗಾರಪ್ಪ: ಕುತೂಹಲ ಮೂಡಿಸಿದ ನಡೆ..!
 
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಒಂದೂವರೆ ವರ್ಷದಿಂದ ರಾಜಕೀಯ ಚಟುವಟಿಕೆಯಿಂದ ದೂರ ಉಳಿದಿದ್ದೆ. ಇವತ್ತು ನನ್ನ ಜನ್ಮದಿನ. ಇಂದಿನಿಂದ ಕೆಲ ಬದಲಾವಣೆಗಳನ್ನು ಮಾಡುವ ನಿರ್ಧಾರ ಮಾಡಿದ್ದೇನೆ. ಬದಲಾವಣೆ ಅನಿವಾರ್ಯವಾಗಿದ್ದು, ಜಿಲ್ಲಾ ಪಂಚಾಯತ್ ಚುನಾವಣೆ ಒಳಗೆ ಒಂದು ದೃಢ ನಿರ್ಧಾರ ಮಾಡುತ್ತೇನೆ ಎಂದು ಹೇಳಿದರು.

 ಕುಮಾರಣ್ಣನ ಜೊತೆ ನಾನು ತುಂಬಾ ಚೆನ್ನಾಗಿದ್ದೇನೆ.‌ ಬೇಗ ನಿರ್ಧಾರ ಮಾಡೋದು ಕಷ್ಟ. ಆದರೆ, ಪಕ್ಷದ ಕೆಲವು ವಿಚಾರಗಳನ್ನು ಗಮನಿಸಿದಾಗ ಬದಲಾವಣೆ ಅನಿವಾರ್ಯ ಎನ್ನಿಸುತ್ತಿದೆ ಎಂದರು.

JDSಗೆ ಬಿಗ್‌ ಶಾಕ್.. ಕಾಂಗ್ರೆಸ್‌ ಸೇರ್ಪಡೆಗೆ ಮುಂದಾದ ಯುವ ನಾಯಕ.. ಡಿಕೆಶಿ ಭೇಟಿ

ನನಗೆ ಆಂತರಿಕ ಗೊಂದಲ, ವೈಯಕ್ತಿಕ ವಿಚಾರ ಯಾವುದೂ ಇಲ್ಲ. ಆದರೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ನಡೆಸಿಕೊಂಡ ಬಗ್ಗೆ ನೋವಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಜೆಡಿಎಸ್‌ ಕಾರ್ಯಚಟುವಟಿಕೆಗಳಿಂದ ದೂರ ಉಳಿದಿರುವ ಮಧುಬಂಗಾರಪ್ಪ ಅವರು ಕಾಂಗ್ರೆಸ್ ಸೇರುತ್ತಾರೆ ಎನ್ನಲಾಗುತ್ತಿದೆ.ಇದಕ್ಕೆ ಪೂರಕವೆಂಬಂತೆ ಮಧು ಬಂಗಾರಪ್ಪ ಅವರು ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರ ಜೊತೆ ಮಾತುಕತೆಗಳನ್ನ ಸಹ ಮಾಡಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಸತಿ ಯೋಜನೆಗಳಿಗೆ ಸಹಾಯಧನ ಹೆಚ್ಚಳಕ್ಕೆ ಚಿಂತನೆ: ಸಚಿವ ಜಮೀರ್‌ ಅಹಮದ್‌
ವಿದೇಶದಲ್ಲಿ ಇರುವವರಿಗೂ ಗ್ಯಾರಂಟಿ ಲಾಭ ಬಗ್ಗೆ ಸಿಎಲ್ಪೀಲಿ ಪ್ರಸ್ತಾಪ: ಸಚಿವ ಮಧು ಬಂಗಾರಪ್ಪ