
ಬೆಂಗಳೂರು, (ಜೂ.27): ತೈಲ ಬೆಲೆ ಹಾಗೂ ಅಗತ್ಯವಸ್ತುಗಳ ಬೆಲೆ ಏರಿಕೆ ಖಂಡಿಸಿ ಜೆಡಿಎಸ್ ನಾಳೆ (ಸೋಮವಾರ) ನಗರದಲ್ಲಿ ಪ್ರತಿಟನೆ ನಡೆಸಲು ಸಜ್ಜಾಗಿತ್ತು. ಆದ್ರೆ, ಇದಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.
ಇದರಿಂದ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಗರಂ ಆಗಿದ್ದು, ಪೊಲೀಸ್ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಫುಡ್ ಕಿಟ್ ವಿತರಣೆಗೆ ಮಾಜಿ ಸಿಎಂ ಚಾಲನೆ, ಈ ವೇಳ ಸರ್ಕಾರದ ವಿರುದ್ಧ ಗುಡುಗಿದ ಎಚ್ಡಿಕೆ
ಟ್ವಿಟರ್ ನಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ನಿಖಿಲ್ ಕುಮಾರಸ್ವಾಮಿ, ನಾಳೆ (ಜೂನ್.28) ಜೆಡಿ ಎಸ್ ಪಕ್ಷದಿಂದ ಬೆಲೆಏರಿಕೆ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಅದರೆ ಕೋವಿಡ್ ನಿಯಮಾವಳಿ ಗಳನ್ನು ಮುಂದಿಟ್ಟು ರಾಜ್ಯ ಸರ್ಕಾರ ಪ್ರತಿಭಟನೆಗೆ ಅವಕಾಶ ನಿರಾಕರಿಸಿತ್ತು. ಕಾಂಗ್ರೆಸ್ ಹಾಗೂ ಬಿಜೆಪಿಯ ರಾಜಕೀಯ ಸಮಾವೇಶ ಗಳಿಗೆ ಇಲ್ಲದ ನಿರ್ಬಂಧ ನಮಗೆ ಮಾತ್ರಾ ಯಾಕೆ.? ಎಂದು ಪ್ರಶ್ನಿಸಿದ್ದಾರೆ.
ಕೋವಿಡ್ ನಿಯಮಾವಳಿಗಳ ಪ್ರಕಾರವೇ ನಾವು ಪ್ರತಿಭಟನೆ ಮಾಡಲು ಮುಂದಾಗಿದ್ದೆವು. ಇಲ್ಲಿಯವರೆಗೆ ನಮ್ಮ ಪಕ್ಷದಿಂದ ಯಾವುದೇ ಸಮಾವೇಶ, ಹೋರಾಟಗಳನ್ನು ಮಾಡಿರಲಿಲ್ಲ. ಬೆಲೆ ಏರಿಕೆ ವಿರುದ್ದ ಜನರನ್ನು ರಕ್ಷಣೆ ಮಾಡುವುದೇ ನಮ್ಮ ಪ್ರತಿಭಟನೆ ಉದ್ದೇಶ ವಾಗಿತ್ತು. ಪೂರ್ವ ಭಾವಿ ಸಭೆಯಲ್ಲಿ ಕೂಡಾ ಇದನ್ನೇ ಚರ್ಚಿಸಿದ್ದೆವು.
ಕಾಂಗ್ರೆಸ್ ಪ್ರತಿಭಟನೆಗೆ ಇರುವ ಅವಕಾಶ ಜೆಡಿಎಸ್ಗೆ ಏಕಿಲ್ಲ? ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕತೆಯ ವಿರೋಧಿಗಳು ಎಂಬುದನ್ನು ಮತ್ತೆ ಸಾಬೀತುಪಡಿಸಿವೆ ಎಂದು ಟ್ವಟ್ಟರಲ್ಲಿ ಕಿಡಿಕಾರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.