
ಬೆಂಗಳೂರು, (ಫೆ.6): ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ, ಹೋರಾಟಕ್ಕೆ ಸಂಬಂಧಿಸಿದಂತೆ ಜೆಡಿಎಸ್ ತನ್ನ ನಿಲುವು ಪ್ರಕಟಿಸಿದೆ.
ಈ ಬಗ್ಗೆ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್.ವಿ.ದತ್ತ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಹೋರಾಟಕ್ಕೆ ಜೆಡಿಎಸ್ ಸಂಪೂರ್ಣ ಬೆಂಬಲವನ್ನು ನೀಡಲಿದ್ದು, ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸುತ್ತೇವೆ ಸ್ಪಷ್ಟಪಡಿಸಿದರು.
ದಿಲ್ಲಿ ಗಡಿಯಲ್ಲಿ ಹೈ ಅಲರ್ಟ್ : ಸಾಮಾಜಿಕ ಜಾಲತಾಣಗಳ ಮೇಲೂ ಹದ್ದಿನ ಕಣ್ಣು
ಸರ್ಕಾರದ ನಡವಳಿಕೆಯನ್ನು ಟೀಕಿಸಿದ ಮಾತ್ರಕ್ಕೆ ರಾಷ್ಟ್ರದ್ರೋಹಿ ಎನ್ನುವುದಾದರೆ ಸಾವಿರ ಸಲ ರಾಷ್ಟ್ರದ್ರೋಹಿ ಪಟ್ಟ ಕಟ್ಟಿಕೊಳ್ಳಲು ಸಿದ್ದರಿರುವುದಾಗಿ ಹೇಳಿದರು.
ನಮ್ಮದು ರೈತಪರವಾದ ಪಕ್ಷ, ರೈತರಿಗೆ ಅನ್ಯಾಯವಾದಾಗ ತಾವು ಸುಮ್ಮನೆ ಕೂರುವುದಿಲ್ಲ. ಸರ್ಕಾರದ ವಿರುದ್ಧ ಮಾತನಾಡಿದರೆ ರೈತರನ್ನು ಅಪರಾಧಪಟ್ಟಿಗೆ ಸೇರಿಸುತ್ತಾರೆ. ದೇಶದ್ರೋಹಿಗಳ ಪಟ್ಟಿಗೆ ಸೇರಿಸಿ ಕೇಸು ಹಾಕುತ್ತಾರೆ. ಕೇಸು ಹಾಕುವ ಮೂಲಕ ರೈತರ ಹೋರಾಟವನ್ನು ದುರ್ಬಲಗೊಳಿಸುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.