ಕಾಂಗ್ರೆಸ್‌ ಸೇರಿದ ಜೆಡಿಎಸ್‌ನ ದತ್ತ, ಪಕ್ಷೇತರ ಶಾಸಕ ನಾಗೇಶ್‌

Published : Jan 15, 2023, 10:42 AM ISTUpdated : Jan 15, 2023, 11:03 AM IST
ಕಾಂಗ್ರೆಸ್‌ ಸೇರಿದ ಜೆಡಿಎಸ್‌ನ ದತ್ತ, ಪಕ್ಷೇತರ ಶಾಸಕ ನಾಗೇಶ್‌

ಸಾರಾಂಶ

ಸಿದ್ದು, ಡಿಕೆಶಿ ಸಮ್ಮುಖದಲ್ಲಿ ಹಲವು ನಾಯಕರು ಕಾಂಗ್ರೆಸ್‌ ಸೇರ್ಪಡೆ, 50 ವರ್ಷದ ನಂತರ ಅನಿವಾರ್ಯವಾಗಿ ಪಕ್ಷ ಬದಲಿಸುತ್ತಿರುವೆ: ವೈಎಸ್‌ವಿ ದತ್ತ

ಬೆಂಗಳೂರು(ಜ.15):  ಜೆಡಿಎಸ್‌ ಹಿರಿಯ ನಾಯಕ ಯಗಟಿ ಸೂರ್ಯನಾರಾಯಣ ವೆಂಕಟೇಶ ದತ್ತ (ವೈಎಸ್‌ವಿ ದತ್ತ) ಹಾಗೂ ಮುಳಬಾಗಿಲು ಪಕ್ಷೇತರ ಶಾಸಕ, ಮಾಜಿ ಸಚಿವ ಎಚ್‌.ನಾಗೇಶ್‌ ಅವರು ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ವೈಎಸ್‌ವಿ ದತ್ತ, ಎಚ್‌.ನಾಗೇಶ್‌, ಮೈಸೂರಿನ ಬಿಜೆಪಿ ಮುಖಂಡ ಹಾಗೂ ಮೂಡಾ ಮಾಜಿ ಅಧ್ಯಕ್ಷ ಮೋಹನ್‌ ಕುಮಾರ್‌, ಕೋಲಾರ ಜೆಡಿಎಸ್‌ ನಾಯಕ ದಯಾನಂದ್‌ ಅವರಿಗೆ ಪಕ್ಷದ ಬಾವುಟ ನೀಡಿ ಸ್ವಾಗತಿಸಿದರು.

ಈ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್‌, ಜೆಡಿಎಸ್‌ನ ಹಿರಿಯ ನಾಯಕ ದತ್ತ, ಮುಳಬಾಗಿಲು ಹಾಲಿ ಶಾಸಕ ಎಚ್‌.ನಾಗೇಶ್‌ ಅವರು ಯಾವುದೇ ಷರತ್ತು ಇಲ್ಲದೆ ಪಕ್ಷ ಸೇರ್ಪಡೆಯಾಗಿದ್ದಾರೆ. ರಾಜ್ಯ ಅತಂತ್ರವಾದ ಸ್ಥಿತಿಯಲ್ಲಿ ಇದೆ. ಜನರಿಗೆ ಆಡಳಿತ ಪಕ್ಷದ ಮೇಲೆ ವಿಶ್ವಾಸ ಕಡಿಮೆಯಾಗುತ್ತಿದೆ. ಹೀಗಾಗಿ ಜನ ವಿರೋಧಿ ಸರ್ಕಾರವನ್ನು ಕಿತ್ತೊಗೆಯಲು ಪ್ರಜಾಪ್ರಭುತ್ವವಾದಿ ನಾಯಕರು ಕೈಜೋಡಿಸುತ್ತಿದ್ದಾರೆ ಎಂದು ಹೇಳಿದರು.

ಸಿದ್ದರಾಮಯ್ಯ 25 ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಗೆಲ್ಲಲ್ಲ: ಕೆ.ಎಸ್‌.ಈಶ್ವರಪ್ಪ

ಸಿದ್ದರಾಮಯ್ಯ ಮಾತನಾಡಿ, ಕಾಂಗ್ರೆಸ್‌ ಪಕ್ಷ ಮಾತ್ರ ಹಿಂದುಳಿದ ಹಾಗೂ ಅಲ್ಪ ಸಂಖ್ಯಾತರಿಗೆ ರಕ್ಷಣೆ ನೀಡಲು ಸಾಧ್ಯ. ಇದನ್ನು ಅರ್ಥ ಮಾಡಿಕೊಂಡು ಯಾವುದೇ ಷರತ್ತು ಇಲ್ಲದೆ ಜೆಡಿಎಸ್‌, ಬಿಜೆಪಿಯಿಂದ ನಾಯಕರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ನಾವೆಲ್ಲರೂ ಸೇರಿ ಕೋಮುವಾದ ಪಕ್ಷವನ್ನು ಸೋಲಿಸಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಹೇಳಿದರು.

ಐತಿಹಾಸಿಕ ತುರ್ತಿನಿಂದ ವಿದಾಯ-ದತ್ತ:

ವೈಎಸ್‌ವಿ ದತ್ತ ಮಾತನಾಡಿ, ಇದು ಮಾತನಾಡುವ ಸಮಯವಲ್ಲ. ಕೆಲಸ ಮಾಡುವ ಸಮಯ. ನಾನು ಐವತ್ತು ವರ್ಷದಿಂದ ಒಂದೇ ಪರಿವಾರದಲ್ಲಿ ಕೆಲಸ ಮಾಡಿದ್ದೇನೆ. ಅಷ್ಟುವರ್ಷ ಒಂದೇ ಪರಿವಾರದಲ್ಲಿದ್ದವನು ಈಗ ಪಕ್ಷ ಬದಲಿಸುತ್ತಿದ್ದೇನೆ ಎಂದರೆ ಅಂದರೆ ಅಂತಹ ಐತಿಹಾಸಿಕ ತುರ್ತು, ಅನಿವಾರ್ಯತೆ ಇಂದು ಉಂಟಾಗಿದೆ. ಸಂವಿಧಾನ, ಜಾತ್ಯತೀತತೆಯನ್ನು ಬುಡಮೇಲು ಮಾಡಲು ಹೊರಟಿರುವ ಶಕ್ತಿ ಹಾಗೂ ಪಕ್ಷವನ್ನು ನಾವು ಸಂಘಟಿತರಾಗಿ ಹೋರಾಡಿ ಸೋಲಿಸಬೇಕಿದೆ ಎಂದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌, ಹೆಬ್ಬಾಳ ಶಾಸಕ ಬೈರತಿ ಸುರೇಶ್‌ ಸೇರಿ ಹಲವರು ಹಾಜರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಖಾಲಿ ಇರುವ ವೈದ್ಯ, ಸಿಬ್ಬಂದಿ ಹುದ್ದೆ ತಿಂಗಳಲ್ಲಿ ಭರ್ತಿ: ಸಚಿವ ದಿನೇಶ್ ಗುಂಡೂರಾವ್ ಘೋಷಣೆ
3,600 ಪೊಲೀಸ್‌ ಕಾನ್‌ಸ್ಟೇಬಲ್‌ ನೇಮಕಾತಿಗೆ ಶೀಘ್ರ ಕ್ರಮ: ಗೃಹ ಸಚಿವ ಪರಮೇಶ್ವರ್‌