‘ಕೆಲವರು ಟಿಕೆಟ್ ಸಿಗದಿದ್ರೆ ಪಕ್ಷ ಬಿಡ್ತಾರೆ.. ಆದ್ರೆ ಅವರು ಮನೆ ಬಾಗಿಲಿಗೆ ಬಂದ PM ಹುದ್ದೆ ನಿರಾಕರಿಸಿದ್ರು’

Published : Oct 11, 2020, 04:55 PM IST
‘ಕೆಲವರು ಟಿಕೆಟ್ ಸಿಗದಿದ್ರೆ ಪಕ್ಷ ಬಿಡ್ತಾರೆ.. ಆದ್ರೆ ಅವರು ಮನೆ ಬಾಗಿಲಿಗೆ ಬಂದ PM ಹುದ್ದೆ ನಿರಾಕರಿಸಿದ್ರು’

ಸಾರಾಂಶ

ಜಯಪ್ರಕಾಶ್ ನಾರಾಯಣರವರ 118ನೇ ಜಯಂತಿ ಹಿನ್ನೆಲೆಯಲ್ಲಿ ಇಂದು (ಭಾನುವಾರ) ನಗರದ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿದ ಮಾಜಿ ಶಾಸಕ ವೈ.ಎಸ್‌.ವಿ ದತ್ತಾ ಮಾತನಾಡಿದರು.

ಬೆಂಗಳೂರು, (ಅ.11): JP ಅವರಿಗೆ ಪ್ರಧಾನಿ ಹುದ್ದೆ ಮನೆಯ ಬಾಗಿಲಿಗೆ ಬಂದಿತ್ತು. ಅದೃಷ್ಟ ಅವರ ಮನೆ ಬಾಗಿಲಿಗೆ ಹುಡುಕಿಕೊಂಡು ಬಂದಿದ್ರೂ ಜಯಪ್ರಕಾಶ್ ನಾರಾಯಣ್​ ಪ್ರಧಾನಿ ಹುದ್ದೆ ನಿರಾಕರಿಸಿದ್ದರು. ಆದರೆ ಇಂದಿನ ದಿನಗಳಲ್ಲಿ ಟಿಕೆಟ್ ಸಿಗದಿದ್ದರೆ ಜನ ಪಕ್ಷ ಬಿಡ್ತಾರೆ. MLA, ಜಿ.ಪಂ. ಟಿಕೆಟ್ ಸಿಗದಿದ್ದರೂ ಪಕ್ಷ ಬಿಡುತ್ತಾರೆ ಎಂದು ಮಾಜಿ ಶಾಸಕ ವೈ.ಎಸ್‌.ವಿ. ದತ್ತಾ ಹೇಳಿದ್ದಾರೆ.

ಜಯಪ್ರಕಾಶ್ ನಾರಾಯಣರವರ 118ನೇ ಜಯಂತಿ ಹಿನ್ನೆಲೆಯಲ್ಲಿ ಇಂದು (ಭಾನುವಾರ) ನಗರದ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿದ ದತ್ತಾ, ಇಂದಿರಾ ಅಂದರೆ ಇಂಡಿಯಾ, ಇಂಡಿಯಾ ಅಂದ್ರೆ ಇಂದಿರಾ ಎಂದು ಹೇಳುತ್ತಿದ್ದ ಕಾಲವಿತ್ತು. ಹೀಗೆ ಹೇಳುತ್ತಿದ್ದ ಕಾಲದಲ್ಲೂ ಜೆಪಿಯವರು ಹೋರಾಡಿದ್ದರು. ತುರ್ತು ಪರಿಸ್ಥಿತಿಯ ಸಂದರ್ಭದಲ್ಲೂ ಹೋರಾಟ ನಡೆಸಿದ್ದರು. ಅಂದಿನ ಇಂದಿರಾ ಗಾಂಧಿಯ ದಿನಗಳು ಈಗ ಮತ್ತೆ ಕಾಣ್ತಿದೆ. ದೇಶಕ್ಕೆ ಒಬ್ಬನೇ ನಾಯಕ, ಒಂದೇ ಕಾನೂನು ಅಂತಿದ್ದಾರೆ. ಅಂದು ಇದ್ದ ಎಮರ್ಜೆನ್ಸಿ ಮತ್ತೆ ಈಗ ಬರುತ್ತಿದೆ ಅನ್ನಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೆಸರು ಹೇಳದೆ ದತ್ತಾ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

'ಒಂದು ಜಾತಿಯಿಂದ ಯಾರೂ ಕರ್ನಾಟಕದಲ್ಲಿ ಗೆಲ್ಲೋದಕ್ಕೆ ಆಗೋದಿಲ್ಲ'

ಒಂದು ದೇಶ, ಒಂದು ಕಾನೂನು, ಒಂದು ದೇಶ ಒಂದು ಬಣ್ಣ. ಒಂದು ದೇಶ ಒಂದು ರೇಷನ್ ಕಾರ್ಡ್ ಎಂದು ಪ್ರಧಾನಿ ಹೇಳ್ತಿದ್ದಾರೆ. ಈ ರೀತಿಯಾಗಿ ಹೇಳುವುದರ ಹಿಂದೆ ಬೇರೆ ಅಜೆಂಡಾ ಇದೆ. ಇಂದಿರಾಗಾಂಧಿ ಕಾಲದಲ್ಲಿ ಎಲ್ಲ ವಿಚಾರ ಬಹಿರಂಗವಾಗುತ್ತಿತ್ತು. ಆದರೆ, ಈಗಿರುವವರು ಅಂತರಂಗದಲ್ಲಿಯೇ ಎಲ್ಲವನ್ನು ಮಾಡುತ್ತಿದ್ದಾರೆ. ಒಂದೇ ಒಂದೇ ಅನ್ನೋದು ಈ ದೇಶಕ್ಕೆ ಬಹಳ ಅಪಾಯಕಾರಿ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಗ್ರೆಸ್ ಸರ್ಕಾರ ಬದುಕಿದೆಯೋ ಸತ್ತಿದೆಯೋ ಗೊತ್ತಿಲ್ಲ: ಬಿ.ವೈ.ವಿಜಯೇಂದ್ರ ವಾಗ್ದಾಳಿ
ದುಡಿಯುವ ಮಹಿಳೆಗೆ ಪತಿ ಜೀವನಾಂಶ ಕೊಡಬೇಕಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು