
ಬೆಂಗಳೂರು (ಜ.19): 2023ರ ಸಾರ್ವತ್ರಿಕ ಚುನಾವಣೆಯಲ್ಲಿ ಸ್ವತಂತ್ರವಾಗಿ ಜೆಡಿಎಸ್ ಅಧಿಕಾರದ ಗದ್ದುಗೆ ಹಿಡಿದರೆ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈಗಲೇ ಹಲವು ಯೋಜನೆಗಳ ಜಾರಿಗೆ ರೂಪರೇಷೆಗಳನ್ನು ರೂಪಿಸಿಕೊಂಡಿದ್ದು, ‘ಪಂಚರತ್ನ’ ಕಾರ್ಯಕ್ರಮಗಳ ಅನುಷ್ಠಾನ ಮಾಡುವ ಚಿಂತನೆ ನಡೆಸಿದ್ದಾರೆ. ಒಂದು ವೇಳೆ ಪಂಚರತ್ನ ಕಾರ್ಯಕ್ರಮಗಳನ್ನು ಜಾರಿಗೊಳಿಸುವಲ್ಲಿ ವಿಫಲವಾದರೆ ಪಕ್ಷವನ್ನೇ ವಿಸರ್ಜಿಸುವ ಶಪಥ ಮಾಡಿದ್ದಾರೆ.
ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಮಾತನಾಡಿದ ಅವರು, ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗಾಗಿ ನನ್ನದೇ ಆಲೋಚನೆಗಳನ್ನು ಮಾಡಲಾಗಿದ್ದು, ‘ಪಂಚರತ್ನ’ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುವುದು. ಸೂರು, ವಿದ್ಯೆ, ಉದ್ಯೋಗ, ಆರೋಗ್ಯ ಮತ್ತು ರೈತರಿಗೆ ಸಾಲಮುಕ್ತ ಬದುಕು ಎಂಬ ಪಂಚರತ್ನ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಹೇಳಿದರು.
ಸುಪ್ರೀಂ ಬಿಗ್ ಶಾಕ್: ಕುಮಾರಸ್ವಾಮಿಗೆ ಎದುರಾಯ್ತು ಸಂಕಷ್ಟ..!
ಈ ಪಂಚರತ್ನ ಕಾರ್ಯಕ್ರಮಗಳನ್ನು ಜಾರಿಗೊಳಿಸಲು ಜನರ ಮುಂದೆ ಹೋಗಲಾಗುವುದು. ಜಾತಿ, ಹಣದ ವ್ಯಾಮೋಹ ಬಿಟ್ಟು ಮತ ಹಾಕುವಂತೆ ಕೇಳುತ್ತೇವೆ. ಒಂದು ವೇಳೆ ಐದು ವರ್ಷದ ಅವಧಿಯಲ್ಲಿ ಪಂಚರತ್ನ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸದಿದ್ದರೆ ಪಕ್ಷವನ್ನೇ ವಿಸರ್ಜನೆಗೊಳಿಸುತ್ತೇನೆ ಎಂದರು.
1. ಸೂರು
2. ವಿದ್ಯೆ
3. ಉದ್ಯೋಗ
4. ಆರೋಗ್ಯ
5. ರೈತರಿಗೆ ಸಾಲಮುಕ್ತ ಬದುಕು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.