
ಹಾಸನ, (ಸೆ.08): ಕಲಬುರಗಿ ಮಹಾನಗರ ಪಾಲಿಕೆ ಫಲಿತಾಂಶ ಅತಂತ್ರವಾಗಿದೆ. ಜೆಡಿಎಸ್ ಜೊತೆ ಮೈತ್ರಿಯೊಂದಿಗೆ ಮೇಯರ್ ಆಗಲು ಕಾಂಗ್ರೆಸ್ ಹಾಗೂ ಬಿಜೆಪಿ ಕಸರತ್ತು ನಡೆಸಿವೆ.
ಅದರಲ್ಲೂ ಬೊಮ್ಮಾಯಿ, ಕುಮಾರಸ್ವಾಮಿ ಜೊತೆ ಚರ್ಚಿಸಿದ್ದು, ಬಹುತೇಕ ಜೆಡಿಎಸ್, ಬಿಜೆಪಿಗೆ ಬೆಂಬಲಿಸುವ ಎಲ್ಲಾ ಸಾಧ್ಯತೆಗಳಿವೆ. ಇದರ ಮಧ್ಯೆ ಜೆಡಿಎಸ್ ನಾಯಕ ಎಚ್ಡಿ ರೇವಣ್ಣ ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ.
ಜೆಡಿಎಸ್ ಬಗ್ಗೆ ಅರುಣ್ಗೇನು ಗೊತ್ತು?: ಎಚ್ಡಿಕೆ ಆಕ್ರೋಶ
ಕಲಬುರಗಿ ಪಾಲಿಕೆಯಲ್ಲಿ ಜೆಡಿಎಸ್, ಬಿಜೆಪಿ ಮೈತ್ರಿ ವಿಚಾರವಾಗಿ ಹಾಸನದಲ್ಲಿ ಇಂದು (ಸೆ.08) ಪ್ರತಿಕ್ರಿಯಿಸಿರು ರೇವಣ್ಣ, ಜೆಡಿಎಸ್ ಪಕ್ಷ ಮುಳುಗುತ್ತಿರುವ ಹಡಗು ಎಂದು ಹೇಳ್ತೀರಿ. ಅಂಥ ಪಕ್ಷದ ಜತೆ ಮೈತ್ರಿಗೆ ಬಂದು ಕುತ್ತು ತಂದುಕೊಳ್ಳಬೇಡಿ. ನಮ್ಮ ಜತೆ ಸೇರಿ ನಿಮ್ಮ ಸ್ಥಾನಕ್ಕೆ ಕುತ್ತು ತಂದುಕೊಳ್ಳಬೇಡಿ ಎಂದು ವ್ಯಂಗ್ಯವಾಡಿದ್ದಾರೆ.
ರಾಜ್ಯ ಬಿಜೆಪಿ ಉಸ್ತುವಾರಿ (ಅರುಣ್ ಸಿಂಗ್) ಜೆಡಿಎಸ್ ಮುಳುಗುವ ಹಡಗು ಅಂತಾರೆ. ಸಿಎಂ ಜೆಡಿಎಸ್ ಜತೆ ಹೊಂದಾಣಿಕೆ ಮಾಡಿಕೊಳ್ತೀವಿ ಅಂತಾರೆ. ಏಕೆ ಮುಳುಗುವ ಹಡಗಿನ ಜತೆ ಬರುತ್ತೀರಿ ಎಂದು ಪರೋಕ್ಷವಾಗಿ ಅರುಣ್ ಸಿಂಗ್ ಟಾಂಗ್ ಕೊಟ್ಟರು.
ಮುಳುಗುವ ಹಡಗನ್ನು ತೇಲಿಸುವುದು ಹೇಗೆಂದು ಗೊತ್ತಿದೆ. ಹಡಗು ಮುಳುಗದಂತೆ ನೋಡಿಕೊಳ್ಳಲು ಮಷೀನ್ಗಳು ಇವೆ. ಮುಂದಿನ ಚುನಾವಣೆಗೆ ನೀವು ಮುಳುಗದಂತೆ ನೋಡಿಕೊಳ್ಳಿ. ನಾವು ಮುಳುಗುತೀವೋ, ತೇಲುತ್ತೇವೋ ನೀವು ಜೋಪಾನ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.