
ಕೋಲಾರ(ಸೆ.22): ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರಿಂದಲೇ ನಾನು ಎರಡು ಬಾರಿ ವಿಧಾನಸಭೆಗೆ ಬಂದಿದ್ದೇನೆ..!’ ಅನುದಾನ ಹಂಚಿಕೆ ವಿಚಾರದಲ್ಲಿ ಜೆಡಿಎಸ್ ಸದಸ್ಯ ಎಚ್.ಡಿ. ರೇವಣ್ಣ ಮಾತಿಗೆ ಅವರದೇ ಪಕ್ಷದ ಸದಸ್ಯ ಶಿವಲಿಂಗೇಗೌಡ ನೀಡಿದ ತಿರುಗೇಟು ಇದು.
ಮಂಗಳವಾರ ಅನುದಾನ ತಾರತಮ್ಯ ಕುರಿತು ನಡೆದ ಚರ್ಚೆಯಲ್ಲಿ ರೇವಣ್ಣ, ಆಡಳಿತ ಪಕ್ಷದ ಸದಸ್ಯರಿಗೆ 20 ಕೋಟಿ ರು. ನೀಡಿದರೆ ನಮಗೆ ಐದಾರು ಕೋಟಿ ರು. ಆದರೂ ಕೊಡಿ ಎಂದರು. ಈ ವೇಳೆ ಮಧ್ಯಪ್ರವೇಶಿಸಿದ ಶಿವಲಿಂಗೇಗೌಡ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನನಗೆ ಅನುದಾನ ಕೊಟ್ಟಿದ್ದಾರೆ. ಪದೇ ಪದೇ ಕೊಟ್ಟಿಲ್ಲ ಎಂದು ಹೇಳಿ ಅವರ ಮನಸ್ಸು ನೋಯಿಸಬೇಡಿ. ನಾವು ವಿರೋಧ ಪಕ್ಷದಲ್ಲಿ ದ್ದೇವೆ. ಆಡಳಿತ ಪಕ್ಷದವರ ಕೈ ಮುಗಿಯಲೇಬೇಕು. ಸಿದ್ದರಾಮಯ್ಯ ಮುಖ್ಯ ಮಂತ್ರಿ ಆಗಿದ್ದರಿಂದಲೇ ನಾನು 2 ಬಾರಿ ವಿಧಾನಸಭೆಗೆ ಬಂದಿದ್ದೇನೆ. 300 ಕೋಟಿ ರು. ಅನ್ನು 530 ಹಳ್ಳಿಗಳಿಗೆ ನೀಡಿದ್ದಾರೆ.
ಕಲಬುರಗಿ ಪಾಲಿಕೆ: ಮುಳುಗುವ ಹಡಗಿನ ಜತೆ ಏಕೆ ಬರುತ್ತೀರಿ? ಬಿಜೆಪಿಗೆ ರೇವಣ್ಣ ಟಾಂಗ್
ಎತ್ತಿನ ಹೊಳೆ ಯೋಜನೆಯನ್ನು ಮಂಜೂರು ಮಾಡಿದ್ದಾರೆ ಎಂದರು. ಆಗ ರೇವಣ್ಣ , ಶಿವಲಿಂಗೇಗೌಡರಿಗೆ ಚಾಣಾಕ್ಷತನ ಇದೆ. ಶಿವಮೊಗ್ಗ ರಸ್ತೆಯಲ್ಲಿ ಓಡಾಡುತ್ತಾರೆ. ಸಿದ್ದು, ಯಡಿಯೂರಪ್ಪ ಹತ್ತಿರ ಕೆಲಸ ಮಾಡಿಸಿಕೊಳ್ಳುವುದು ಹೇಗೆಂದು ಗೊತ್ತಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.