ಧಮ್, ತಾಕತ್ ಇದ್ರೆ ಜೆಡಿಎಸ್ ಯಾತ್ರೆ ನಿಲ್ಲಿಸಿ: ಸಿಎಂ ಬೊಮ್ಮಾಯಿಗೆ ಕಂದಕೂರ ಸವಾಲ್‌

Published : Mar 23, 2023, 11:06 PM IST
ಧಮ್, ತಾಕತ್ ಇದ್ರೆ ಜೆಡಿಎಸ್ ಯಾತ್ರೆ ನಿಲ್ಲಿಸಿ: ಸಿಎಂ ಬೊಮ್ಮಾಯಿಗೆ ಕಂದಕೂರ ಸವಾಲ್‌

ಸಾರಾಂಶ

ಬಿಜೆಪಿ ಸರ್ಕಾರಕ್ಕೆ, ಸಿಎಂಗೆ ಅಧಿಕಾರದ ಮದ ಹೀಗೆ ಮಾತನಾಡಿಸುತ್ತಿದೆ, ಬ್ರಹ್ಮಾಂಡ ಭ್ರಷ್ಟಾಚಾರ ಈ ಸರ್ಕಾರದಲ್ಲಿ ತಾಂಡವವಾಡುತ್ತಿದೆ ಎಂದು ಸಿಎಂ ಬೊಮ್ಮಾಯಿ ವಿರುದ್ಧ ಹರಿಹಾಯ್ದ ಶಾಸಕ ನಾಗನಗೌಡ ಕಂದಕೂರ.

ಯಾದಗಿರಿ(ಮಾ.23): ಧಮ್, ತಾಕತ್ತು ಇದ್ದರೆ ಜೆಡಿಎಸ್ ಪಂಚರತ್ನ ಯಾತ್ರೆ ನಿಲ್ಲಿಸಿ ನೋಡೋಣ ಎಂದು ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಸಿಎಂ ಬಸವರಾಜ ಬೊಮ್ಮಾಯಿಗೆ ಸವಾಲ್ ಹಾಕಿದರು. ಯಾದಗಿರಿ ಸಮೀಪದ, ಗುರುಮಠಕಲ್ ಮತಕ್ಷೇತ್ರದ ಯರಗೋಳ ಗ್ರಾಮದಲ್ಲಿ ಇಂದು(ಗುರುವಾರ) ಸಂಜೆ ಆಯೋಜಿಸಲಾಗಿದ್ದ 88ನೇ ಪಂಚರತ್ನ ರಥಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರಕ್ಕೆ, ಸಿಎಂಗೆ ಅಧಿಕಾರದ ಮದ ಹೀಗೆ ಮಾತನಾಡಿಸುತ್ತಿದೆ, ಬ್ರಹ್ಮಾಂಡ ಭ್ರಷ್ಟಾಚಾರ ಈ ಸರ್ಕಾರದಲ್ಲಿ ತಾಂಡವವಾಡುತ್ತಿದೆ ಎಂದು ಹರಿಹಾಯ್ದಿದ್ದಾರೆ.

ಬಿಜೆಪಿ ಸರಕಾರ ಭ್ರಷ್ಟಾಚಾರದಿಂದ ಕೂಡಿದೆ. ಅದರಿಂದ ಮುಕ್ತರಾಗಲು ಜೆಡಿಎಸ್ ಪಕ್ಷ ಬೆಂಬಲಿಸಿ ಕುಮಾರಸ್ವಾಮಿಯವರನ್ನು ರಾಜ್ಯದ ಮುಖ್ಯಮಂತ್ರಿ ಮಾಡಿ ಅಭಿವೃದ್ಧಿಗೆ ನಾಂದಿ ಹಾಡಬೇಕು ಎಂದು ಶಾಸಕ ನಾಗನಗೌಡ ಕಂದಕೂರ ಕರೆ ನೀಡಿದರು. 

ಡಬಲ್‌ ಎಂಜಿನ್‌ ಸರ್ಕಾರದಿಂದ ದಾಹ ಮುಕ್ತ ರಾಜ್ಯ: ಸಚಿವ ಭೈರತಿ ಬಸವರಾಜ್

ರೈತರು, ಮಹಿಳೆಯರು ಮತ್ತು ರಾಜ್ಯದ ಅಭಿವೃದ್ಧಿಗೆ ಆದ್ಯತೆ ನೀಡಲು ಕುಮಾರ ಸ್ವಾಮಿ ಅವರನ್ನು ರಾಜ್ಯದ ಜನರು ಬಲ ಪಡಿಸಲು ಮುಂದಾಗಬೇಕು ಎಂದರು. 

ಗುರುಮಠಕಲ್ ಕ್ಷೇತ್ರಕ್ಕೆ ಕುಮಾರ ಸ್ವಾಮಿ ನೀಡಿದ 200 ಕೋಟಿ ರೂ.ಗಳ ಅನುದಾನ ನೀಡಿದ್ದನ್ನು ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ತಡೆ ಹಿಡಿದು ಅಭಿವೃದ್ಧಿಗೆ ಹಿನ್ನಡೆ ಉಂಟು ಮಾಡಿದರು ಎಂದು ಅಂದಿನ ದಿನಗಳ ನೆನೆದರು.

ನನ್ನ ಅವಧಿಯಲ್ಲಿ ಅನುದಾನ ಕಡಿತ ವಾದರೂ ಅಭಿವೃದ್ಧಿಗೆ ಆದ್ಯತೆ ನೀಡಿದ್ದೇನೆ. ನನ್ನನ್ನು ಕ್ಷೇತ್ರದ ಜನರು ಹೇಗೆ ನನ್ನನ್ನು ಹೇಗೆ ಆಶೀರ್ವಾಡಿಸಿದರೋ ಹಾಗೆ ನನ್ನ ಮಗ ಶರಣಗೌಡ ಕಂದಕೂರ ಅವರನ್ನು ಆಶೀರ್ವದಿಸಿ ಎಂದು ಅವರು ಮನವಿ ಮಾಡಿದರು.

ಯುವಕರು ಮೋದಿ ಹಿಂದೆ ಹೋಗಬೇಡಿ, ಅದು ದೊಡ್ಡ ಕಂದಕವಿದೆ. ಅದರಿಂದ ನೀವು ಹಾಳಾಗುತ್ತೀರಿ ಎಂದ ಕಂದಕೂರ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧಮ್, ತಾಕತ್ತು ಬಗ್ಗೆ ಹೇಳುತ್ತಿದ್ದಾರೆ ಅವರು ಕುರ್ಚಿ  ಬಿಟ್ಟು ರಾಜಕೀಯ ಅಖಾಡಕ್ಕೆ ಇಳಿದು ತೋರಿಸಲಿ ಯಾರ ಧಮ್ ತಾಕತ್ತು ಎಷ್ಟು ಇರುತ್ತದೆ ಎಂದು ಗೊತ್ತು ಆಗುತ್ತದೆ ಎಂದು ಅವರು ಸವಾಲ್ ಎಸೆದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ
ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ