ಆ ಒಂದು ಹೇಳಿಕೆಯಿಂದ ಸಿದ್ದರಾಮಯ್ಯ ವಿರುದ್ಧ ಮುಗಿಬಿದ್ದ ಜೆಡಿಎಸ್ ನಾಯಕರು..!

Published : Sep 20, 2020, 05:03 PM ISTUpdated : Sep 20, 2020, 06:37 PM IST
ಆ ಒಂದು ಹೇಳಿಕೆಯಿಂದ ಸಿದ್ದರಾಮಯ್ಯ ವಿರುದ್ಧ ಮುಗಿಬಿದ್ದ ಜೆಡಿಎಸ್ ನಾಯಕರು..!

ಸಾರಾಂಶ

ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ  ಜೆಡಿಎಸ್ ಮುಖಂಡರು ಕೆಂಡಾಮಂಡಲಾಗಿದ್ದು, ಟ್ವಿಟ್ಟರ್‌ನಲ್ಲಿ ಕಿಡಿಕಾರುತ್ತಿದ್ದಾರೆ.

ಬೆಂಗಳೂರು, (ಸೆ.20): ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹುಸಿ ಸ್ವಾಭಿಮಾನದ ಕಾಗೆ ಬಂಗಾರ ಎಂದು ಜೆಡಿಎಸ್‌ ಶಾಸಕ ಸಾರಾ ಮಹೇಶ್ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಕುರಿತಾಗಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಆಕ್ರೋಶದ ಬೆನ್ನಲ್ಲೇ ಸಾರಾ ಮಹೇಶ್ ಕೂಡಾ ಟ್ವೀಟ್‌ ಮಾಡುವ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ.

'ಸಿದ್ಧರಾಮಯ್ಯ ಊಸರವಳ್ಳಿ ರಾಜಕಾರಣದ ನಿಜ ಬಣ್ಣ ಬಯಲು'

ಜೆಡಿಎಸ್‌ ಅವಕಾಶವಾದಿ ಪಕ್ಷ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಇದರಿಂದ ಕೆಂಡಾಮಂಡಲಾಗಿರುವ ಜೆಡಿಎಸ್ ಮುಖಂಡರು ಸಿದ್ದರಾಮಯ್ಯ ಅವರ ವಿರುದ್ಧ ಟ್ವಿಟ್ಟರ್‌ನಲ್ಲಿ ಕಿಡಿಕಾರುತ್ತಿದ್ದಾರೆ.

ಅಧಿಕಾರದ ಆಸೆಗಾಗಿ ಪಕ್ಷಾಂತರ ಮಾಡಿ ಸಮಾಜವಾದದ ಸೋಗನ್ನು ಕಳಚಿಕೊಂಡ ಸಿದ್ದರಾಮಯ್ಯನವರು ಹುಸಿ ಸ್ವಾಭಿಮಾನದ ಕಾಗೆ ಬಂಗಾರ ಎಂದು ಸಾರಾ ಮಹೇಶ್ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಸ್ವಾರ್ಥ ರಾಜಕಾರಣಕ್ಕೆ ಮತ್ತೊಂದು ಹೆಸರೇ ಸಿದ್ದರಾಮಯ್ಯ. ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿ ಸನ್ಯಾಸಿ ಆದವರಂತೆ ಮಾತನಾಡುತ್ತಿರುವ ಸಿದ್ದರಾಮಯ್ಯ ನಮ್ಮ ಪಕ್ಷದ ಬಗ್ಗೆ ಮಾತನಾಡುವ ಕನಿಷ್ಠ ನೈತಿಕತೆಯೂ ಇಲ್ಲ. ತಾವು ಬೆಳೆದು ಬಂದ ಪಕ್ಷಕ್ಕೆ ದ್ರೋಹ ಬಗೆದ, ಹತ್ತಿದ ಏಣಿಯನ್ನು ಒದೆಯುವ ಜಾಯಮಾನದ ಸಿದ್ದರಾಮಯ್ಯ ಮೊದಲು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ನೋಡಿ |  

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?