ಹಾಸನಾಂಬೆ ಎದುರು ಶಾಸಕರು ಆಣೆ-ಪ್ರಮಾಣ ಮಾಡಿಲ್ಲ: ಜಿ.ಟಿ.ದೇವೇಗೌಡ

Published : Nov 12, 2023, 11:40 AM IST
ಹಾಸನಾಂಬೆ ಎದುರು ಶಾಸಕರು ಆಣೆ-ಪ್ರಮಾಣ ಮಾಡಿಲ್ಲ: ಜಿ.ಟಿ.ದೇವೇಗೌಡ

ಸಾರಾಂಶ

ಜೆಡಿಎಸ್‌ ಶಾಸಕರು ಪಕ್ಷ ಬಿಡುವುದಿಲ್ಲ ಎಂದು ಆಣೆ-ಪ್ರಮಾಣ ಮಾಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು, ಲಕ್ಷಾಂತರ ಜನರು ಬರುವ ತಾಯಿ ಹಾಸನಾಂಬೆ ಎದುರು ಆಣೆ-ಪ್ರಮಾಣ ಸಾಧ್ಯವಾ? ನಾವೆಲ್ಲರೂ ನಮ್ಮ ಮನಸಿನಲ್ಲಿರುವುದನ್ನಷ್ಟೆ ಕೇಳಿಕೊಂಡಿದ್ದೇವೆ ಎಂದ ಶಾಸಕ ಜಿ.ಟಿ.ದೇವೇಗೌಡ 

ಮೈಸೂರು(ನ.11): ಹಾಸನಾಂಬೆ ಎದುರು ನಾವ್ಯಾರೂ ಆಣೆ ಮಾಡಿಲ್ಲ. ಬದಲಿಗೆ ಪಕ್ಷ ಕಟ್ಟುವ ಕುರಿತು ಪ್ರತಿಜ್ಞೆ ಮಾಡಿದ್ದೇವೆ ಎಂದು ರಾಜ್ಯ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಶಾಸಕ ಜಿ.ಟಿ.ದೇವೇಗೌಡ ಸ್ಪಷ್ಟಪಡಿಸಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌ ಶಾಸಕರು ಪಕ್ಷ ಬಿಡುವುದಿಲ್ಲ ಎಂದು ಆಣೆ-ಪ್ರಮಾಣ ಮಾಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು, ಲಕ್ಷಾಂತರ ಜನರು ಬರುವ ತಾಯಿ ಹಾಸನಾಂಬೆ ಎದುರು ಆಣೆ-ಪ್ರಮಾಣ ಸಾಧ್ಯವಾ? ನಾವೆಲ್ಲರೂ ನಮ್ಮ ಮನಸಿನಲ್ಲಿರುವುದನ್ನಷ್ಟೆ ಕೇಳಿಕೊಂಡಿದ್ದೇವೆ ಎಂದರು.

ಪ್ರಧಾನಿಯೊಂದಿಗೆ ಮಾತನಾಡುವ ಶಕ್ತಿ ಕುಮಾರಸ್ವಾಮಿಗೆ ಮಾತ್ರ ಇರೋದು: ಜಿ.ಟಿ.ದೇವೆಗೌಡ

ಜೆಡಿಎಸ್ ನಾಯಕರು ಯಾರೂ ಪಕ್ಷ ಬಿಡುವುದಿಲ್ಲ ಎಂದ ಅವರು, ರಾಜ್ಯದಲ್ಲಿ ಪಕ್ಷ ಬಲವರ್ಧನೆ, ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಸಿಎಂ ಮಾಡುವುದು ನಮ್ಮ ಮುಂದಿರುವ ಗುರಿ. ಆ ಕುರಿತು ನಾವು ಸಂಘಟನಾತ್ಮಕವಾಗಿ ಕೆಲಸ ಮಾಡ್ತೀವಿ ಎಂದವರು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!
ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್