ನನ್ನನ್ನು ಸಭಾಪತಿ ಮಾಡಲು 3 ಪಕ್ಷಗಳ ನಾಯಕರ ಒಲವು: ಜೆಡಿಎಸ್ ನಾಯಕ ಅಚ್ಚರಿ ಹೇಳಿಕೆ

Published : Jan 07, 2021, 05:14 PM IST
ನನ್ನನ್ನು ಸಭಾಪತಿ ಮಾಡಲು 3 ಪಕ್ಷಗಳ ನಾಯಕರ ಒಲವು: ಜೆಡಿಎಸ್ ನಾಯಕ ಅಚ್ಚರಿ ಹೇಳಿಕೆ

ಸಾರಾಂಶ

ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಜೆಡಿಎಸ್ ಹಿರಿಯ ನಾಯಕ ಪ್ರಬಲ ಆಕಾಂಕ್ಷಿಯಾಗಿದ್ದು, ಈ ಬಗ್ಗೆ ಅವರು ಪ್ರತಿಕ್ರಿಯೆ ಕೊಟ್ಟಿದ್ದು ಹೀಗೆ.

ಹುಬ್ಬಳ್ಳಿ, (ಜ.07): ವಿಧಾನಪರಿಷತ್‌ ಸಭಾಪತಿ ಸ್ಥಾನಕ್ಕೆ ನನ್ನನ್ನು ಆಯ್ಕೆ ಮಾಡಲು ಮೂರೂ ಪಕ್ಷಗಳ ನಾಯಕರು ಒಲವು ಹೊಂದಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಅಚ್ಚರಿ ಹೇಳಿಕೆ ನೀಡಿದ್ದಾರೆ.

ಗುರುವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಭಾಪತಿ ಸ್ಥಾನಕ್ಕೆ ಹಿಂದೆ ನನ್ನ ಹೆಸರು ಪ್ರಸ್ತಾಪವಾದಾಗ ಎಲ್ಲ ಪಕ್ಷಗಳ ನಾಯಕರು ಸಹಮತ ವ್ಯಕ್ತಪಡಿಸಿದ್ದರು. ಎಚ್‌.ಡಿ. ದೇವೇಗೌಡ ಅವರೂ ನನ್ನ ಬಗ್ಗೆ ಒಲವು ಹೊಂದಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಜೆಡಿಎಸ್‌ಗೆ ಸಭಾಪತಿ ಸ್ಥಾನ ಕೊಡಬೇಕು ಎಂದು ನಿಯಮವೇನೂ ಇಲ್ಲ. ಆದರೆ, ನಮ್ಮನ್ನು ಬಿಟ್ಟು ಸಭಾಪತಿಯನ್ನು ಆಯ್ಕೆ ಮಾಡಲು ಸಾಧ್ಯವಿಲ್ಲ ಎಂದರು.

ಜೆಡಿಎಸ್‌ ಸೇರಲು ಕಾಂಗ್ರೆಸ್ ಹಿರಿಯ ನಾಯಕ ಉತ್ಸುಕ: ದೇವೇಗೌಡ್ರನ್ನ ಭೇಟಿಯಾಗಿ ಮಾತುಕತೆ

ಪರಿಷತ್‌ನಲ್ಲಿ ಈಚೆಗೆ ನಡೆದ ಗಲಾಟೆ ಸಾರ್ವಜನಿಕ ವಲಯದಲ್ಲಿ ಬಹಳಷ್ಟು ಚರ್ಚೆಗೆ ಕಾರಣವಾಗಿದೆ. ಆ ರೀತಿಯ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಲು ಅವಿರೋಧ ಆಯ್ಕೆ ಮಾಡಬೇಕು ಎನ್ನುವ ಚರ್ಚೆಯೂ ನಡೆದಿದೆ ಎಂದು ಹೇಳಿದರು.

ಕೊನೆಯ ಅವಕಾಶವೆಂಬಂತೆ ನಿಮ್ಮನ್ನು ಸಭಾಪತಿ ಮಾಡಲು ಚಿಂತನೆ ನಡೆದಿದೆಯೇ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಕೊನೆಯ ಅವಕಾಶವೇನಲ್ಲ, ಮುಂದಿನ ಚುನಾವಣೆಯಲ್ಲಿಯೂ ಸ್ಪರ್ಧಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಿತ್ತೂರು ಕರ್ನಾಟಕ ಹೆಸರಲ್ಲಿ ಪ್ರತ್ಯೇಕ ರಾಜ್ಯವಾಗಲಿ: ಶಾಸಕ ರಾಜು ಕಾಗೆ ಆಗ್ರಹ
ಸಿಎಂ ಸಿದ್ದರಾಮಯ್ಯ ಹೇಳಿಕೆಯೇ ನಮಗೆ ಅಂತಿಮ ಮಾರ್ಗದರ್ಶನ: ಸಚಿವ ದಿನೇಶ್ ಗುಂಡೂರಾವ್