
ಮಂಡ್ಯ, (ಜೂನ್.05): ವಿಧಾನ ಪರಿಷತ್, ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ ಮಾದೇಗೌಡ ಅವರಿಗೆ ಬೆಂಬಲ ನೀಡುವುದಾಗಿ ಜೆಡಿಎಸ್ ವಿಧಾನಪರಿಷತ್ ಸದಸ್ಯ ಅಧಿಕೃತವಾಗಿ ಘೋಷಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಮಧು ಜಿ ಮಾದೇಗೌಡ ಅವರಿಗೆ ಬೆಂಬಲ ನೀಡುವುದಾಗಿ ಜೆಡಿಎಸ್ ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ ಬಹಿರಂಗವಾಗಿಯೇ ಹೇಳಿದ್ದು, ಜೆಡಿಎಸ್ ಅಭ್ಯರ್ಥಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ.
ರಾಜ್ಯಸಭಾ ಚುನಾವಣೆ: ದೇವೇಗೌಡರ ‘ಖರ್ಗೆ ಅಸ್ತ್ರ’ ವಿಫಲಗೊಳಿಸಿದ್ಹೇಗೆ ಸಿದ್ದು-ಡಿಕೆಶಿ.?
ಆಪ್ತ ಕೀಲಾರ ಜಯರಾಮು ಅವರಿಗೆ ಜೆಡಿಎಸ್ ವರಿಷ್ಠರು ಟಿಕೆಟ್ ನಿಕಾಕರಿಸಿದ ಕಾರಣ ಮರಿತಿಬ್ಬೇಗೌಡ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದರು. ಜೆಡಿಎಸ್ ಅಭ್ಯರ್ಥಿ ಎಚ್.ಕೆ.ರಾಮು ಅವರ ಪರ ಪ್ರಚಾರ ಮಾಡುವುದಿಲ್ಲ, ಯಾರಿಗೆ ಬೆಂಬಲ ನೀಡಬೇಕು ಎಂಬುದನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದು ಈಚೆಗೆ ತಿಳಿಸಿದ್ದರು.
ಮರಿತಿಬ್ಬೇಗೌಡ ಸ್ನೇಹ ಬಳಗ'ದ ಸಭೆಯಲ್ಲಿ ಮಾತನಾಡಿದ ಅವರು 'ಜೆಡಿಎಸ್ನ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡಿದ್ದರೂ ನಾನು ಅವರ ಪರವಾಗಿ ಕೆಲಸ ಮಾಡುತ್ತಿದ್ದೆ. ಪಕ್ಷಕ್ಕೆ ಸಂಬಂಧವೇ ಇಲ್ಲದ ವ್ಯಕ್ತಿಗೆ ಟಿಕೆಟ್ ನೀಡಲಾಗಿದೆ. ಆ ಮೂಲಕ ದಕ್ಷಿಣ ಪದವೀಧರರ ಕ್ಷೇತ್ರದಲ್ಲೂ ಹಣ ಉಳ್ಳವರಿಗೆ ಮಣೆ ಹಾಕಲಾಗಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದರು.
'ನಾಲ್ಕೂ ಜಿಲ್ಲೆಗಳಲ್ಲಿರುವ ನನ್ನ ಹಿತೈಷಿಗಳ ಸಲಹೆಯಂತೆ ನಾನು ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡಲು ನಿರ್ಧರಿಸಿದ್ದೇನೆ. ಜಿ.ಮಾದೇಗೌಡರು ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಸಾವಿರಾರು ಜನರಿಗೆ ವಿದ್ಯಾದಾನ ಮಾಡಿದ್ದಾರೆ. ಆ ಸಂಸ್ಥೆಗಳ ಅಧ್ಯಕ್ಷರಾಗಿರುವ ಮಧು ಮಾದೇಗೌಡರಿಗೆ ಬೆಂಬಲಿಸುವಂತೆ ನನ್ನ ಬೆಂಬಲಿಗರು ಸಲಹೆ ನೀಡಿದ್ದು ಅದರಂತೆ ನಡೆದುಕೊಳ್ಳುತ್ತೇನೆ' ಎಂದರು.
2024ರ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ನನಗೆ ಟಿಕೆಟ್ ನೀಡುವುದಿಲ್ಲ ಜೆಡಿಎಸ್ ಮುಖಂಡರು ತಿಳಿಸಿದ್ದಾರೆ. ಕೀಲಾರ ಜಯರಾಮು ಅವರಿಗೆ ಟಿಕೆಟ್ ಕೊಟ್ಟು ನನ್ನ ವಿರುದ್ಧವೇ ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಈ ಎಲ್ಲಾ ಬೆಳವಣಿಗೆಗಳಿಂದ ಬೇಸರವಾಗಿ ಕಾಂಗ್ರೆಸ್ ಬೆಂಬಲಿಸುವ ತೀರ್ಮಾನ ಕೈಗೊಂಡಿದ್ದೇನೆ. ಮುಂದಿನ ವಿಧಾನಸಭೆ, ಲೋಕಸಭೆ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಬೆಂಬಲಿಸುವ ತೀರ್ಮಾನ ಕೈಗೊಂಡಿದ್ದೇನೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.