
ಬೆಳಗಾವಿ, (ಡಿ.19): ವಿಧಾನ ಪರಿಷತ್ ಉಪಸಭಾಪತಿಯಾಗಿ ಜೆಡಿಎಸ್ ಸದಸ್ಯ ಎಸ್.ಎಲ್ ಧರ್ಮೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇಂದು (ಬುಧವಾರ) ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರು ಉಪಸಭಾಪತಿ ಹೆಸರು ಘೋಷಣೆ ಮಾಡಿದರು. ಉಪ ಸಭಾಪತಿಯಾಗಿ ಜೆಡಿಎಸ್ ನ ಕೆ.ಟಿ. ಶ್ರೀಕಂಠೇಗೌಡ ಆಯ್ಕೆಯಾಗುವ ನಿರೀಕ್ಷೆ ಇತ್ತು.
ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ನಿಂದ ಅಚ್ಚರಿ ಹೆಸರು, ಹೊರಟ್ಟಿಗೆ ಮಂತ್ರಿಗಿರಿ ನಾ..?
ಮತ್ತೊಂದೆಡೆ ಮಾಜಿ ಉಪ ಸಭಾಪತಿ ಮರಿತಿಬ್ಬೇಗೌಡ ಮತ್ತೊಮ್ಮೆ ಆಯ್ಕೆ ಬಯಸಿ ಪ್ರಯತ್ನ ನಡೆಸಿದ್ದರು. ಆದರೆ, ಅಚ್ಚರಿಯ ಬೆಳವಣಿಗೆಯಲ್ಲಿ ಜೆಡಿಎಸ್ ವರಿಷ್ಠರು ಧರ್ಮೇಗೌಡ ಅವರನ್ನು ಅಭ್ಯರ್ಥಿಯಾಗಿಸಿದರು.
ಇನ್ನು ಮೊನ್ನೇ ಅಷ್ಟೇ ವಿಧಾನ ಪರಿಷತ್ ಸ್ಥಾನದಿಂದ ಜೆಡಿಎಸ್ ಸದಸ್ಯ ಬಸವರಾಜ್ ಹೊರಟ್ಟಿ ಅವರನ್ನು ಕೆಳಗಿಳಿಸಿ ಕಾಂಗ್ರೆಸ್ ನ ಪ್ರತಾಪಚಂದ್ರ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿತ್ತು.
ಇದ್ರಿಂದ ಬಸವರಾಜ್ ಹೊರಟ್ಟಿ ಅವರು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕ ನಡೆಗೆ ಅಸಮಾಧಾನ ವ್ಯಕ್ತಪಡಿಸಿರುವುದನ್ನು ಇಲ್ಲಿ ಸ್ಮರಿಸಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.