ಸದ್ದಿಲ್ಲದೆ ನಿಖಿಲ್ ಕುಮಾರಸ್ವಾಮಿ ಪಕ್ಷ ಸಂಘಟನೆ; ಜೆಡಿಎಸ್ ಕಾರ್ಯಕರ್ತರನ್ನ ಹುರಿದುಂಬಿಸಲು ಉತ್ತರ ಕರ್ನಾಟಕ ಪ್ರವಾಸ!

Published : Jan 05, 2025, 10:27 PM IST
ಸದ್ದಿಲ್ಲದೆ ನಿಖಿಲ್ ಕುಮಾರಸ್ವಾಮಿ ಪಕ್ಷ ಸಂಘಟನೆ; ಜೆಡಿಎಸ್ ಕಾರ್ಯಕರ್ತರನ್ನ ಹುರಿದುಂಬಿಸಲು ಉತ್ತರ ಕರ್ನಾಟಕ ಪ್ರವಾಸ!

ಸಾರಾಂಶ

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ರಾಯಚೂರು ಜಿಲ್ಲೆಯ ಸಿಂಧನೂರಿಗೆ ಭೇಟಿ ನೀಡಿ, ಕಾರ್ಯಕರ್ತರನ್ನು ಹುರಿದುಂಬಿಸಲು ರಾಜ್ಯದ 7 ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದಾಗಿ ತಿಳಿಸಿದರು. ಮುಂಬರುವ ತಾಪಂ, ಜಿಪಂ ಚುನಾವಣೆಗಳಿಗೆ ಸಂಬಂಧಿಸಿದಂತೆ ಸಭೆ ನಡೆಸಿದ್ದು, ರಾಜ್ಯಾದ್ಯಂತ ಕಾರ್ಯಕರ್ತರನ್ನು ಸಂಘಟಿಸುತ್ತಿರುವುದಾಗಿಯೂ ಹೇಳಿದರು.

ರಾಯಚೂರು (ಜ.5): ನಾನು ಜೆಡಿಎಸ್ ಕಾರ್ಯಕರ್ತರಲ್ಲೊಬ್ಬ ಎಂದು ಭಾವಿಸಿದ್ದೇನೆ. ನಮ್ಮ ಕಾರ್ಯಕರ್ತರನ್ನು ಹುರಿದುಂಬಿಸಲು ಈಗಾಗಲೇ ರಾಜ್ಯದ 7 ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದೇನೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಇಂದು ರಾಯಚೂರು ಜಿಲ್ಲೆ ಸಿಂಧನೂರಿಗೆ ಭೇಟಿ ನೀಡಿದ್ದ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೆಲವೇ ದಿನಗಳಲ್ಲಿ ತಾಪಂ, ಜಿಪಂ ಚುನಾವಣೆ ಬರಲಿವೆ. ಚುನಾವಣೆಯಲ್ಲಿ ಸ್ಪರ್ಧೆಗೆ ಸಂಬಂಧಿಸಿದಂತೆ ಸಭೆ ನಡೆಸಿದ್ದೇವೆ. ರಾಜ್ಯಾದ್ಯಂತ ಕಾರ್ಯಕರ್ತರನ್ನು ಸಂಘಟಿಸುವ ಕಾರ್ಯ ಮಾಡುತ್ತಿದ್ದೇವೆ ಎಂದರು.

ಇದನ್ನೂ ಓದಿ: 'ಏಯ್ ಯಶ್ಪಾಲ್ ಸುವರ್ಣ ಕೇಳುಸ್ಕೋತಿದ್ದೀಯಾ? ನಾಳೆ ನೀನೂ ಸಿಎಂ ಆಗಬಹುದು ಎಂದ ಸಿದ್ದರಾಮಯ್ಯ!

ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ನಿಖಿಲ್ ಕುಮಾರಸ್ವಾಮಿ, ನಾನು ಯಾವತ್ತೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಆಗಬೇಕು, ಆಗುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ಅಲ್ಲದೆ ನಾನು ಅಧ್ಯಕ್ಷ ಸ್ಥಾನಕ್ಕಾಗಿ, ಇನ್ಯಾವುದೋ ಹುದ್ದೆಗಾಗಿ ಹಪಾಹಪಿ ಪಡುವವನಲ್ಲ. ನನಗೆ ನಮ್ಮ ಪಕ್ಷದ ಕಾರ್ಯಕರ್ತರು ನನಗೆ ಹೃದಯದಲ್ಲಿ ಸ್ಥಾನ ಕೊಟ್ಟಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರಾಗಲು ಅನುಭವಸ್ಥರು ಇದ್ದಾರೆ, ನಮ್ಮ ಪಕ್ಷದಲ್ಲಿ ಬಹಳಷ್ಟು ಜನ ಹಿರಿಯರಿದ್ದಾರೆ. ಪಕ್ಷದಲ್ಲಿ ನಾನೊಬ್ಬ ಕಾರ್ಯಕರ್ತ ಮಾತ್ರ. ಪಕ್ಷ ಸಂಘಟಿಸುವುದು ನನ್ನ ಕೆಲಸವಾಗಿದೆ. ಹೀಗಾಗಿ ಈ ಸಮಯದಲ್ಲಿ ರಾಜ್ಯಾಧ್ಯಕ್ಷ ಸ್ಥಾನ ವಿಚಾರ ಅಪ್ರಸ್ತುತ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್
ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ