ಕುಮಾರಸ್ವಾಮಿ ವಿರುದ್ಧ ಹೋರಾಡಿದವರೇ ನಮ್ಮ ಬಳಿ ಬಂದ್ರು: HDD ಹೇಳಿದ್ಯಾರಿಗೆ?

Published : Jan 17, 2019, 05:51 PM ISTUpdated : Jan 17, 2019, 05:52 PM IST
ಕುಮಾರಸ್ವಾಮಿ ವಿರುದ್ಧ ಹೋರಾಡಿದವರೇ ನಮ್ಮ ಬಳಿ ಬಂದ್ರು: HDD ಹೇಳಿದ್ಯಾರಿಗೆ?

ಸಾರಾಂಶ

2018ರ ವಿಧಾನಸಭಾ ಚುನಾವಣೆ ವೇಳೆ ‘ಎ’ ಟೀಂ, ‘ಬಿ’ ಟೀಂ ಎನ್ನುವುದು ರಾಜ್ಯ ರಾಜಕಾರಣದಲ್ಲಿ ಬಾರೀ ಸಂಚಲನವನ್ನು ಮೂಡಿಸಿತ್ತು. ಇದೀಗ ಅದಕ್ಕೆ ವಿಷಯಕ್ಕೆ ಸಂಬಂಧಿಸಿದಂತೆ ಜೆಡಿಎಸ್​ ವರಿಷ್ಠ ಎಚ್.ಡಿ.ದೇವೇಗೌಡ ಅವರು ಪರೋಕ್ಷವಾಗಿ ಕಾಂಗ್ರೆಸ್ ಗೆ ಟಾಂಗ್ ಕೊಟ್ಟಿದ್ದಾರೆ.

ಬೆಂಗಳೂರು, (ಜ.17): ನಾವು ಯಾವುದೇ ‘ಎ’ ಟೀಂ, ‘ಬಿ’ ಟೀಂ ಅಲ್ಲ. ನಾನು ನಿಮ್ಮ ಟೀಂ ಅನ್ನೋದನ್ನ ತಿಳಿದುಕೊಳ್ಳಿ. ಕುಮಾರಸ್ವಾಮಿ ವಿರುದ್ಧ ಹೋರಾಡಿದವರೇ ನಮ್ಮ ಬಳಿ ಬಂದ್ರು ಎಂದು ಜೆಡಿಎಸ್​ ವರಿಷ್ಠ ಹೆಚ್.ಡಿ ದೇವೇಗೌಡ ಕಾಂಗ್ರೆಸ್​ಗೆ ಪರೋಕ್ಷವಾಗಿ ಟಾಂಗ್​ ಕೊಟ್ಟಿದ್ದಾರೆ.

ಬೆಂಗಳೂರಿನಲ್ಲಿ ಇಂದು [ಶುಕ್ರವಾರ] ನಡೆದ ಜೆಡಿಎಸ್‌ ಅಲ್ಪಸಂಖ್ಯಾತರ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ದೇಶದ ಮುಸ್ಲಿಮರು ತಾಜ್ ಹೋಟೆಲ್ ಮೇಲೆ ಬಾಂಬ್ ದಾಳಿ ನಡೆಸಿಲ್ಲ. ಆದರೆ ಇನ್ನೂ ನಮ್ಮ ದೇಶದ ಮುಸ್ಲಿಮರನ್ನ ದೂಷಣೆ ಮಾಡಲಾಗುತ್ತಿದೆ. ನಾನು ಹಿಂದೂ ಧರ್ಮೀಯನಾದ್ರೂ ಚರ್ಚ್, ದರ್ಗಾ ಎಲ್ಲಾ ಕಡೆ ಹೋಗ್ತೀನಿ ಎಂದು ಹೇಳಿದರು.

ಗೌಡರ ಆಟ ಬಲ್ಲವರಾರು?: ಮಗನೊಂದಿಗೆ ಮಾತುಕತೆ ಜೋರು!

ನಾನು ಹತ್ತು ತಿಂಗಳು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದೆ. ಅಧಿಕಾರ ಕಳೆದುಕೊಳ್ಳುವಾಗ ವಾಜಪೇಯಿ ಅವರು ಸರ್ಕಾರ ಉಳಿಸುತ್ತೇನೆ ಅಂದಿದ್ರು. ಆದರೆ, ಎಂದೂ ನಾನು ಅಧಿಕಾರಕ್ಕಾಗಿ ಆಸೆ ಪಡುವ ರಾಜಕಾರಣಿಯಲ್ಲ. ಅದನ್ನ ಎದೆ ಬಗೆದು ತೋರಿಸಬೇಕಾ ಎಂದರು.

ನನಗೆ ಈಗ 86 ವರ್ಷ ವಯಸ್ಸಾಗಿದೆ. ಮನೆಯಲ್ಲಿ ಕುಳಿತಕೊಳ್ಳಬಹುದು. ಯಾವುದೋ ಒಂದು ಶಕ್ತಿ ನನ್ನನ್ನ ಪ್ರೇರೆಪಿಸುತ್ತಿದೆ. ಹೋಗು ಕೆಲಸ ಮಾಡೋದಿದೆ ಎಂದು ಹೇಳುತ್ತಿದೆ. ಹಾಗಾಗಿ ನಾನು ಪಕ್ಷ ಸಂಘಟನೆ ಮಾಡೋಕೆ ಬಂದಿದ್ದೇನೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ
ಹೈಕಮಾಂಡ್‌ ನಿರ್ಧಾರ ಫೈನಲ್, ಪದೇ ಪದೆ ಯಾಕೆ ಕೇಳ್ತೀರಿ?: ಸಿಎಂ ಸಿದ್ದರಾಮಯ್ಯ