
ಹಾಸನ, (ಏ.21): ಈ ಸಂದರ್ಭದಲ್ಲಿ ರೈತರ ಕುರಿತು ಕೇಂದ್ರ ಸರ್ಕಾರದ ಕೆಲವು ನೀತಿಗಳ ಬಗ್ಗೆ ಹೋರಾಟ ಅವಶ್ಯಕ. ರೈಲಿನ ಸಂಚಾರ ಇದ್ದಿದ್ದರೆ ನಾನೇ ರೈತರನ್ನು ದೆಹಲಿಗೆ ಕರೆದುಕೊಂಡು ಹೋಗಿ ಹೋರಾಟ ಮಾಡುತ್ತಿದ್ದೆ ಎಂದು ಮಾಜಿ ಪ್ರಧಾನಿ ದೇವೇಗೌಡ ಗುಡುಗಿದ್ದಾರೆ.
ಇಂದು (ಸೋಮವಾರ) ಹಾಸನದಲ್ಲಿ ಮಾತನಾಡಿದ ದೇವೇಗೌಡರು, ಈ ಲಾಕ್ಡೌನ್ ಮಧ್ಯೆ ರೈತರು ಬೆಳೆದ ಬೆಳೆ ಕೊಳ್ಳುವವರಿಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ ಮತ್ತೊಮ್ಮೆ ಸರ್ಕಾರದೊಂದಿಗೆ ಚರ್ಚಿಸುತ್ತೇನೆ. ಈಗಾಗಲೇ ಅನೇಕ ಪತ್ರ ಬರೆದು ಮನವಿ ಮಾಡಿದ್ದೇನೆ ಎಂದರು.
ಪ್ರಧಾನಿಗಳಿಗೆ ನಮ್ಮ ಬೆಂಬಲ ಎಂದ ದೇವೇಗೌಡ್ರು, ಆದ್ರೂ ಮೋದಿ ಮೇಲೆ ಮುನಿಸಿಕೊಂಡ್ರು..!
ಈ ಸಂದರ್ಭದಲ್ಲಿ ಬಡವರು ಹಾಗೂ ರೈತರನ್ನ ಉಳಿಸಬೇಕಾದದ್ದು ಸರ್ಕಾರದ ಜವಾಬ್ದಾರಿ. ರೈತರು ಬೆಳೆದ ತರಕಾರಿಗಳನ್ನು ಬೇಡಿಕೆ ಇದ್ದಲ್ಲಿಗೆ ಕಳಿಸುವ ಪ್ರಯತ್ನ ಮಾಡಬೇಕು. ಅನೇಕ ರಾಜಕೀಯ ಮುಖಂಡರು, ಸ್ವಯಂ ಸೇವಾ ಸಂಸ್ಥೆಗಳು ಈ ಕೆಲಸ ಮಾಡುತ್ತಿದ್ದಾರೆ. ಆದ್ರೆ ಈ ಬಗ್ಗೆ ಸರ್ಕಾರವೂ ಗಮನಹರಿಸಬೇಕಿದೆ ಎಂದು ಆಗ್ರಹಿಸಿದರು.
ರೈತರ ಕುರಿತು ಕೇಂದ್ರ ಸರ್ಕಾರದ ಕೆಲವು ನೀತಿಗಳ ಬಗ್ಗೆ ಹೋರಾಟ ಅವಶ್ಯಕ. ರೈಲಿನ ಸಂಚಾರ ಇದ್ದಿದ್ದರೆ ನಾನೇ ರೈತರನ್ನು ದೆಹಲಿಗೆ ಕರೆದುಕೊಂಡು ಹೋಗಿ ಹೋರಾಟ ಮಾಡುತ್ತಿದ್ದೆ. ಈ ಹಿಂದೆಯೂ ಇದೇ ರೀತಿ ಹೋರಾಟ ಮಾಡಿದ್ದೇನೆ. ಈಗಲೂ ಮಾಡಲು ತೊಂದರೆ ಇಲ್ಲ. ರೈಲು ಸಂಚಾರ ಪ್ರಾರಂಭವಾದರೆ ಹೋರಾಟ ಮಾಡುತ್ತೇನೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.