
ಕಲಬುರಗಿ (ಅ.09): ’ಅಯ್ಯೋ ಆ ಮಾತನ್ನೂ ಕೇಳಿದ್ದೀನ್ರಿ, ಜೆಡಿಎಸ್ ರಾಷ್ಟ್ರೀಯ ಪಕ್ಷ. 90ರ ದಶಕದಲ್ಲಿ ಹೀಗೆ ಮಾತನಾಡಿದವರೆಲ್ಲ ಎಲ್ಲಿದ್ರು? ಇವ್ರು ಆಗ ಯಾರ ಹೆಗಲ ಮೇಲೆ ಕುತಿದ್ರು?’
ಜೆಡಿಎಸ್ ಪಕ್ಷ ಸದಾ ಅನ್ಯರ ಹೆಗಲನ್ನೇರಿ ಸವಾರಿ ಮಾಡೋ ಪಕ್ಷವೆಂಬ ಸಿದ್ದರಾಮಯ್ಯ ಹೇಳಿಕೆಯನ್ನು ಸುದ್ದಿಗಾರರು ಪ್ರಸ್ತಾಪಿಸಿದಾಗ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಈ ರೀತಿ ಟಾಂಗ್ ನೀಡಿದ್ದಾರೆ. ಜೆಡಿಎಸ್ ಪಕ್ಷದ ಬಗ್ಗೆ, ತಮ್ಮ ಹಾಗೂ ತಮ್ಮ ಕುಟುಂಬದವರ ಬಗ್ಗೆ ರಾಜಕೀಯವಾಗಿ ಯಾರೇ ಲಘುವಾಗಿ ಮಾತನಾಡಿದರೂ ಸಹ ಅದನ್ನೆಲ್ಲ ವಿಶ್ಲೇಷಣೆ ಮಾಡುತ್ತಾ ಕೂರುವುದಿಲ್ಲ ಎಂದು ತಿಳಿಸಿದರು.
ಕಾಂಗ್ರೆಸ್ನವರು ಬಿಜೆಪಿ ಹೋಗಲು ಕಾರಣ ಯಾರೆಂದು ಗೊತ್ತು : HDK ಬಾಂಬ್ ..
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರಿವರ ಲೇವಡಿ ಮಾತನ್ನಿಲ್ಲಿ ಪ್ರಸ್ತಾಪಿಸಿ ನೀವು (ಮಾಧ್ಯಮದವರು) ನನ್ನಿಂದ ಏನೆಲ್ಲಾ ಉತ್ತರ ಬಯಸಿದ್ದೀರಿ ಅಂತ ಗೊತ್ತು. ಆದರೆ, ಅಂತಹ ಮಾತುಗಳಿಗೆ ವಿಶ್ಲೇಷಣೆ ಮಾಡುವ ಕಾಲವಿದಲ್ಲ. ನಾವೀಗ ಚುನಾವಣೆ ಕಾಲದಲ್ಲಿದ್ದೇವೆ ಎಂದರು.
ಮುಂಚೆ ದೇವೇಗೌಡರು ಅಳುತ್ತಿದ್ದರು, ಈಗ ಕುಮಾರಸ್ವಾಮಿ ತಂದೆಯನ್ನು ಅನುಕರಿಸಿ ಅಳುತ್ತಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾನು ಯಾರ ಹೇಳಿಕೆ ಬಗ್ಗೆಯೂ ಮಾತಾಡೋಕೆ ಹೋಗುವುದಿಲ್ಲ. ಅದರ ಅವಶ್ಯಕತೆಯೂ ಇಲ್ಲ ಎಂದರು. ಇದೇ ಸಂದರ್ಭದಲ್ಲಿ ಉಪಚುನಾವಣೆ ಮತ್ತು ಶಿಕ್ಷಕರ ಕ್ಷೇತ್ರ, ಪದವೀಧರರ ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.