ಪ್ರತಾಪ್ ಸಿಂಹಗೆ ಕೃತಜ್ಞತೆ ಹೇಳಿದ ಎಚ್‌ಡಿ ದೇವೇಗೌಡ!

Published : Apr 19, 2021, 02:37 PM IST
ಪ್ರತಾಪ್ ಸಿಂಹಗೆ ಕೃತಜ್ಞತೆ ಹೇಳಿದ ಎಚ್‌ಡಿ ದೇವೇಗೌಡ!

ಸಾರಾಂಶ

ರಾಜಕೀಯ ಬದ್ಧವೈರಿ ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರಿಗೆ ಎಚ್‌ಡಿ ದೇವೇಗೌಡ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ. ಕಾರಣ?

ಬೆಂಗಳೂರು, (ಏ.19): ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಎಚ್‌ಡಿ ದೇವೇಗೌಡ ಅವರು ಕೊರೋನಾದಿಂದ ಗುಣಮುಖರಾಗಿದ್ದು, ಇದೀಗ ಮನೆಯಲ್ಲಿ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ. ಇದರ ಮಧ್ಯೆ ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರಿಗೆ ಕೃತಜ್ಞತೆ ಪತ್ರ ಬರೆದಿದ್ದಾರೆ.

ಹೌದು...ಕೊರೋನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದ ವೇಳೆ ದೇವಗೌಡ್ರ ಆರೋಗ್ಯ ಸುಧಾರಿಸಲಿ ಎಂದು ಪ್ರತಾಪ್ ಸಿಂಹ ಪ್ರಾರ್ಥಿಸಿದ್ದರು. ಇದಕ್ಕೆ ಪ್ರತಿಯಾಗಿ ರಾಜಕೀಯ ಬದ್ಧವೈರಿ ಪ್ರತಾಪ್ ಸಿಂಹ ಅವರಿಗೆ ದೇವೇಗೌಡ ಅವರು ಪತ್ರದ ಮೂಲಕ ಕೃತಜ್ಞತೆ ಹೇಳಿದ್ದಾರೆ. ದೊಡ್ಡಗೌಡ್ರ ಬರೆದ ಪತ್ರ ಈ ಕೆಳಗಿನಂತಿದೆ.

 

ನಾನು ಮತ್ತು ನನ್ನ ಪತ್ನಿ ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದಾಗ ಯತಾವು ವ್ಯಕ್ತಪಡಿಸಿದ ಆತಂಕ ತೋರಿದ ಕಾಳಜಿಗೆ ನಾನು ಕೃತಜ್ಞ, ತಾವು ಸಾರ್ವಜನಿಕ ಕ್ಷೇತ್ರದಲ್ಲಿ ಇದ್ದು, ಹಲವು ಕಾರ್ಯ, ಒತ್ತಡದ ಮಧ್ಯೆ ನನ್ನ ಆರೋಗ್ಯದ ಬಗ್ಗೆ ತಾವು ಯೋಗಕ್ಷೇಮ ವಿಚಾರಿಸಿದ್ದು, ನಿಮ್ಮ ದೊಡ್ಡತನಕ್ಕೆ ಸಾಕ್ಷಿ, ನಿಮ್ಮ ಹಾರೈಕೆ ಹರಕೆಯೊಂದಿಗೆ ನಾವಿಬ್ಬರು ಗುಣಮುಖರಾಗಿದ್ದೇವೆ. ಈ ನಿಮ್ಮ ಸೌಜನ್ಯ ನಡಾವಳಿಗೆ ನಾನು ನನ್ನ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ.

ಇದಕ್ಕೆ ಪ್ರತಿಯಾಗಿ ಪ್ರತಾಪ್ ಸಿಂಹ, ಸರ್, ನೀವು ಹೆಸರಿಗಷ್ಟೇ ಅಲ್ಲ, ಗುಣ, ಸೌಜನ್ಯದಲ್ಲೂ ದೊಡ್ಡ ಗೌಡರೇ. ತಾಯಿ ಚಾಮುಂಡೇಶ್ವರಿ ಮತ್ತು ಹಾಸನಾಂಬ ಕೃಪೆ ನಿಮಗಿದೆ. ಧನ್ಯವಾದಗಳು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಧಿವೇಶನ ವೇಳೆ ಹಳೆಯ ಬೇಡಿಕೆಗಳ ಹೊಸ ಕೂಗು!
ಸದನದಲ್ಲಿ ಆಡಳಿತ, ವಿಪಕ್ಷ ಭಾರೀ ಕದನ ಸಂಭವ!