
ಬೆಂಗಳೂರು(ಫೆ.22) ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಟಿಕೆಟ್ ಹಂಚಿಕೆ ಬಗ್ಗೆ ಚರ್ಚೆ ಆಗಿಲ್ಲ ಎನ್ನುವುದನ್ನು ನಾಯಕರು ಮೇಲ್ನೋಟಕ್ಕೆ ಹೇಳುತ್ತಿದ್ದರೂ ಒಂದೆಲ್ಲಾ ಒಂದು ಕಾರಣಕ್ಕೆ ಎರಡು ಪಕ್ಷಗಳ ನಾಯಕರ ನಡುವೆ ಭಿನ್ನ ಅಭಿಪ್ರಾಯಗಳು ಹೊರಹೊಮ್ಮುತ್ತಲೆ ಇವೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ದೇವೇಗೌಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ನಿಗದಿಯಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ದೇವೇಗೌಡರನ್ನು ಭೇಟಿ ಮಾಡಬೇಕಿತ್ತು. ಆದರೆ ವೇಣುಗೋಪಾಲ್ ತುರ್ತು ಕಾರ್ಯಕ್ರಮದ ನೆಪವೊಡ್ಡಿ ಕಾಂಗ್ರೆಸ್ ಕಚೇರಿಯಿಂದ ಕೊಚ್ಚಿಗೆ ತೆರಳಿದ್ದಾರೆ.
ಗೌಡರ ಮುನಿಸು: ಗುಂಡೂರಾವ್ಗೆ ಮನವೊಲಿಸುವ ಕನಸು!
ಹಾಲಿ ಕಾಂಗ್ರೆಸ್ ಸಂಸದರಿಗೆ ಟಿಕೆಟ್ ಸಿಗಲಿದೆ ಎಂಬ ವಿಚಾರ ಸಹಜವಾಗಿಯೇ ದೇವೇಗೌಡರ ಮುನಿಸಿಗೆ ಕಾರಣ. ಚಿಕ್ಕಬಳ್ಳಾಪುರ, ಮಂಡ್ಯ, ಕೋಲಾರದಂತಹ ಕ್ಷೇತ್ರಗಳ ಮೇಲೆ ಜೆಡಿಎಸ್ ಕಣ್ಣಿಟ್ಟಿತ್ತು. ಆದರೆ ಮಂಡ್ಯದಿಂದ ಸುಮಲತಾ ಅಂಬರೀಶ್ ಕಣಕ್ಕೆ ಇಳಿಯುವುದು ಪಕ್ಕಾ ಆಗಿದೆ. ಕಾಂಗ್ರೆಸ್ ಸುಮಲತಾ ಅವರಿಗೆ ಬಾಹ್ಯ ಬೆಂಬಲ ನೀಡುವ ಸಾಧ್ಯತೆಯೂ ಹೆಚ್ಚಾಗಿದೆ.
ಇನ್ನೊಂದು ಕಡೆ ಮಂಡ್ಯ ಜೆಡಿಎಸ್ ಭದ್ರಕೋಟೆ ಎಂಬ ಮಾತನ್ನು ಜೆಡಿಎಸ್ ನಾಯಕರು ಹೇಳಿಕೊಂಡೇ ಬಂದಿದ್ದಾರೆ. ಇದೆಲ್ಲದರ ಪರಿಣಾಮವೇ ದೇವೇಗೌಡರ ಮುನಿಸು. ದೇವೇಗೌಡರಿಗೆ ಯಾವ ಆಧಾರಗಳನ್ನು ನೀಡಿ ಮನವೊಲಿಸಬೇಕು ಎಂಬ ಸವಾಲು ಸದ್ಯ ಕಾಂಗ್ರೆಸ್ ನಾಯಕರನ್ನು ಕಾಡುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.