
ಬೆಂಗಳೂರು (ಅ.11): ‘ರಾಜರಾಜೇಶ್ವರಿ ನಗರ ವಿಧಾನಸಭಾ ಉಪಚುನವಣೆ ಜೆಡಿಎಸ್ ಅಭ್ಯರ್ಥಿಯನ್ನು ಭಾನುವಾರ ಅಂತಿಮಗೊಳಿಸಲಾಗುವುದು. ಇಂದು ಅಭ್ಯರ್ಥಿಯು ನಾಮಪತ್ರ ಸಲ್ಲಿಸಲಿದ್ದಾರೆ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಶನಿವಾರ ಅವರು ಮಾತನಾಡಿ, ‘ಶಿರಾ ಮತ್ತು ಆರ್.ಆರ್.ನಗರ ವಿಧಾನಸಭಾ ಉಪ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಎರಡು ಕ್ಷೇತ್ರದಲ್ಲಿ ಪಕ್ಷವು ತನ್ನದೇ ಭದ್ರತೆಯನ್ನು ಹೊಂದಿದ್ದು, ಅದನ್ನು ಕಳೆದುಕೊಳ್ಳುವುದಿಲ್ಲ’ ಎಂದರು.
ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್: ಇಲ್ಲಿವೆ 30 ನಾಯಕರ ಹೆಸ್ರು..!
‘ಕಾಂಗ್ರೆಸ್ ಪಕ್ಷವು ಹಲವು ಮಂದಿಯನ್ನು ಉಸ್ತುವಾರಿ ಹಾಕಿದೆ. ಆ ರೀತಿ ನಾವು ಮಾಡುವುದಿಲ್ಲ. ಕಾರ್ಯಕರ್ತರನ್ನಿಟ್ಟುಕೊಂಡು ಪಕ್ಷದ ಗೌರವ ಉಳಿಸಲು ಹೋರಾಟ ಮಾಡುತ್ತೇವೆ. ಆರ್.ಆರ್.ನಗರದಲ್ಲಿ ಮೂವರ ಹೆಸರನ್ನು ಅಂತಿಮಗೊಳಿಸಲಾಗಿದೆ.
ಮೂವರಲ್ಲಿ ಒಬ್ಬರನ್ನು ಆಯ್ಕೆ ಮಾಡುವ ಬಗ್ಗೆ ಅವರಿಗೆ ತೀರ್ಮಾನ ಬರಲು ತಿಳಿಸಿದ್ದೇವೆ. ಭಾನುವಾರ ಅಭ್ಯರ್ಥಿಯನ್ನು ಅಂತಿಮಗೊಳಿಸಿದ ಬಳಿಕ ಸೋಮವಾರ ಓರ್ವ ಅಭ್ಯರ್ಥಿಯು ನಾಮಪತ್ರ ಸಲ್ಲಿಸುವರು’ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.