ಬೆಂಗ್ಳೂರು 5 ಪಾಲಿಕೆಗೆ ಎಲೆಕ್ಷನ್‌ ನಡೆಸುವುದಕ್ಕೆ ಜೂ.30 ಡೆಡ್ಲೈನ್‌

Kannadaprabha News   | Kannada Prabha
Published : Jan 13, 2026, 07:17 AM IST
Greater bengaluru

ಸಾರಾಂಶ

ಗ್ರೇಟರ್​ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಚುನಾವಣೆಯನ್ನು ಜೂನ್​ ಅಂತ್ಯದೊಳಗೆ ಮುಗಿಸುವಂತೆ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್​ ನಿರ್ದೇಶನ ನೀಡಿದೆ.

 ನವದೆಹಲಿ : ಗ್ರೇಟರ್​ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಚುನಾವಣೆಯನ್ನು ಜೂನ್​ ಅಂತ್ಯದೊಳಗೆ ಮುಗಿಸುವಂತೆ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್​ ನಿರ್ದೇಶನ ನೀಡಿದೆ.

ಜೂನ್​ 30 ರೊಳಗೆ ಪೂರ್ಣಗೊಳಿಸುವಂತೆ ನಿರ್ದೇಶನ

ಸೋಮವಾರ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಬರುವ ಐದು ನಗರ ಪಾಲಿಕೆಗಳ ಚುನಾವಣಾ ಪ್ರಕ್ರಿಯೆಯನ್ನು ಜೂನ್​ 30 ರೊಳಗೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿತು.

ಸರ್ಕಾರದ ಪರ ಹಿರಿಯ ವಕೀಲ ಅಭಿಷೇಕ್ ಮನಸಿಂಘ್ವಿ, ಎಜಿ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿ, ಮೀಸಲಾತಿ ಪ್ರಕ್ರಿಯೆ ಬಳಿಕ ಚುನಾವಣೆ ನಡೆಸುವುದು ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ ಎಂದು ತಿಳಿಸಿದರು.

ಚುನಾವಣಾ ಆಯೋಗದ ಪರ ವಾದ ಮಂಡಿಸಿದ ವಕೀಲ ಕೆ.ಎನ್.ಫಣೀಂದ್ರ, ಮೇ ಕೊನೆಯ ವಾರದವರೆಗೂ ಅವಕಾಶ ನೀಡಬೇಕು. ಮೇ 26ರೊಳಗೆ ಜಿಬಿಎ ಚುನಾವಣೆಗೆ ದಿನಾಂಕ ಘೋಷಣೆ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.

6 ವರ್ಷಗಳ ಬಳಿಕ ಚುನಾವಣೆ

ಬಿಬಿಎಂಪಿ, ಈಗ ಜಿಬಿಎ ಸ್ವರೂಪ ಪಡೆದಿದ್ದು, ಕಳೆದ ಆರು ವರ್ಷಗಳಿಂದ ಪಾಲಿಕೆ ಜನಪ್ರತಿನಿಧಿಗಳಿಲ್ಲದೆ ಸೊರಗುತ್ತಿದೆ. ಸುಪ್ರೀಂಕೋರ್ಟ್‌ವೊಂದರಲ್ಲೇ ಈ ಸಂಬಂಧ ಅರ್ಜಿ 21 ಭಾರಿ ವಿಚಾರಣೆಗೆ ಬಂದಿದೆ. ಅಂತಿಮವಾಗಿ 22ನೇ ಬಾರಿಗೆ, ಚುನಾವಣೆಗೆ ಮುಹೂರ್ತ ಕೂಡಿ ಬರುತ್ತಿದೆ.

ಪಾಲಿಕೆಗೆ ಚುನಾವಣೆ ನಡೆಯಬೇಕು ಎಂದು ಆಗ್ರಹಿಸಿ ಮಾಜಿ ಕಾರ್ಪೋರೇಟರ್ ಎಮ್ ಶಿವರಾಜ್, ಭಾಸ್ಕರ್ ಹಾಗೂ ಅಂಬೇಡ್ಕರ್ ಸಮಿತಿಗಳು ಕಾನೂನು ಹೋರಾಟ ನಡೆಸಿದ್ದವು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಾಯಕತ್ವ ಬದಲು: ಬೆಂಗಳೂರು ಚುನಾವಣೆಗೆ ಮುನ್ನವೋ? ನಂತರವೋ?
ದ್ವೇಷ ಭಾಷಣ ಮಾಡಲೆಂದೇ ವಿರೋಧ ಪಕ್ಷದವರು ಮಸೂದೆಗೆ ವಿರೋಧ?: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಪ್ರಶ್ನೆ