
ನವದೆಹಲಿ[ಮಾ.11]: ಕೊನೆಗೂ ಜ್ಯೋತಿರಾದಿತ್ಯ ಸಿಂಧಿಯಾ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಉಪಸ್ಥಿತಿಯಲ್ಲಿ ಸಿಂಧಿಯಾ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಗ್ವಾಲಿಯರ್ ರಾಜವಂಶದ 'ಮಹಾರಾಜ' ಸಿಂಧಿಯಾರನ್ನು ಕೇಸರಿ ಶಾಲು ಹೊದಿಸುವ ಮೂಲಕ ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಬಿಜೆಪಿ ಪಾಳಯಕ್ಕೆ ಸೇರ್ಪಡೆಗೊಂಡ ಸಿಂಧಿಯಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ ನಾಡ್ಡಾ ಜೊತೆ ಪಿಎಂ ಮೋದಿ, ಗೃಹ ಸಚಿವ ಅಮಿತ್ ಶಾಗೆ ಧನ್ಯವಾದ ಸಲ್ಲಿಸಿದ್ದಾರೆ.
ಇನ್ನು ಬಿಜೆಪಿ ಸದಸ್ಯತ್ವ ಪಡೆದ ಕೇವಲ ಒಂದು ಗಂಟೆಯೊಳಗೆ ಸಿಮಧಿಯಾಗೆ ರಾಜ್ಯಸಭೆ ಟಿಕೆಟ್ ನಿಡುವುದಾಗಿಯೂ ಬಿಜೆಪಿ ಘೋಷಿಸಿದೆ. ಇವನ್ನು ಹೊರತುಪಡಿಸಿ ಮಧ್ಯಪ್ರದೇಶದಿಂದ ಹರ್ಷ ಚೌಹಾಣ್ರಿಗೂ ರಾಜ್ಯಸಭೆ ಟಿಕೆಟ್ ನೀಡುವುದಾಗಿ ಘೋಷಿಸಿದೆ.
ಸದ್ಯ ಬಿಜೆಪಿಗೆ ಸೇರ್ಪಡೆಗೊಂಡಿರುವ ಸಿಂಧಿಯಾರನ್ನು ರಾಜ್ಯಸಭೆಗೆ ಆಯ್ಕೆ ಮಾಡಿ ಬಳಿಕ ಮೋದಿ ಕ್ಯಾಬಿನೆಟ್ನಲ್ಲಿ ಪ್ರಮುಖ ಖಾತೆ ನೀಡುವ ಮಾತುಗಗಳೂ ಜೋರಾಗಿವೆ.
ಮಾರ್ಚ್ 11ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.