ಶಿವಮೊಗ್ಗ, [ನ.20]: ಜೆಡಿಎಸ್ ಮುಖಂಡರಾದ ಮಧುಬಂಗಾರಪ್ಪ ಮತ್ತು ಶಾರದಾ ಪೂರ್ಯನಾಯ್ಕ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳುತ್ತಾರೆಂಬುದ ಬಗ್ಗೆ ಯಾವುದೇ ಮಾಹಿತಿ ತಮಗೆ ಲಭ್ಯವಿಲ್ಲ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸ್ಪಷ್ಟಪಡಿಸಿದರು.
ನಗರದಲ್ಲಿ ಮಂಗಳವಾರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ವಿಚಾರ ಇದುವರೆಗು ನನ್ನ ಗಮನಕ್ಕೂ ಬಂದಿಲ್ಲ. ಇಬ್ಬರು ಮುಖಂಡರು ಪಕ್ಷಕ್ಕೆ ಬರುವುದಾದರೆ ಸ್ವಾಗತವಿದೆ. ಪಕ್ಷ ಸೇರ್ಪಡೆಗೊಂಡರೆ ಸಂಘಟನೆಗೆ ಇನ್ನಷ್ಟು ಅನುಕೂಲವಾಗುತ್ತಿದೆ ಎಂದರು.
ಶಿವಮೊಗ್ಗ ಲೋಕಸಭಾ ಚುನಾವಣೆಗೆ ನಿಂತು ಸೋಲುಕಂಡಿರುವ ಮಧುಬಂಗಾರಪ್ಪ ಇತ್ತೀಚೆಗೆ ಜೆಡಿಎಸ್ ಕಾರ್ಯಚಟುವಟಿಕೆಗಳಿಂದ ದೂರ ಉಳಿದಿದ್ದು, ಅವರು ಕಾಂಗ್ರೆಸ್ ಸೇರ್ತಾರೆ ಎನ್ನುವ ಸುದ್ದಿ ರಾಜ್ಯ ರಾಜಕಾರಣದಲ್ಲಿ ಹರಿದಾಡುತ್ತಿದೆ.
ಇನ್ನು ಇದೇ ವೇಳೆ ಬೈ ಎಲೆಕ್ಷನ್ ವಿಚಾರಕ್ಕೆ ಪ್ರತಿಕ್ರಿಯಿಸಿದ್ದು, ಅನಾರೋಗ್ಯದ ಹಿನ್ನೆಲೆಯಲ್ಲಿ ತಾವು ಬಾರಿ ಉಪಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.
ಚುನಾವಣೆ ಕಾವು ಹೆಚ್ಚಾಗುತ್ತಿದೆ. ಉಪಚುನಾವಣೆ ನಡೆಯುವ ಎಲ್ಲಾ ಕ್ಷೇತ್ರದಲ್ಲೂ ಕಾಂಗ್ರೆಸ್ ಪರವಾದ ಅಲೆ ಕಂಡುಬರುತ್ತಿದೆ. ನಮ್ಮ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅನಾರೋಗ್ಯದ ಕಾರಣ ತಾವು ನೇರವಾಗಿ ಚುನಾವಣಾ ಪ್ರಚಾರಕ್ಕೆ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಚುನಾವಣಾ ಪ್ರಚಾರ ಕಾರ್ಯದಿಂದ ದೂರ ಉಳಿಯಬೇಕಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.