ನನಗೂ ಸಿಎಂ ಆಗೋ ಆಸೆ ಇದೆ, ಅದು ಸಾಧ್ಯನಾ?: ಶಾಸಕ ರಾಜು ಕಾಗೆ

Published : Sep 15, 2024, 05:30 AM IST
ನನಗೂ ಸಿಎಂ ಆಗೋ ಆಸೆ ಇದೆ, ಅದು ಸಾಧ್ಯನಾ?: ಶಾಸಕ ರಾಜು ಕಾಗೆ

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ಜೀವನದಲ್ಲಿ ಕಪ್ಪುಚುಕ್ಕೆ ಮೈಗಂಟಿಸಿಕೊಂಡಿಲ್ಲ. ಪ್ರಸ್ತುತ ಸಿಎಂ ಬದಲಾವಣೆ ವಿಚಾರವೂ ಇಲ್ಲ. ಆದರೂ ಯಾರ್‍ಯಾರೋ ಸಿಎಂ ಆಗುತ್ತೇನೆ ಎಂದರೆ ಅದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ ಶಾಸಕ ರಾಜು ಕಾಗೆ

ಕಾಗವಾಡ(ಸೆ.15):  ನಾನೂ ಕೂಡ ಹಿರಿಯ ಶಾಸಕ 5 ಬಾರಿ ಆಯ್ಕೆಯಾಗಿದ್ದೇನೆ. ನನಗೂ ಮುಖ್ಯಮಂತ್ರಿ ಆಗುವ ಆಸೆ ಇದೆ. ಹಾಗಂತ ಅದು ಸಾಧ್ಯಾನಾ ಎಂದು ಹೇಳುವ ಮೂಲಕ ಕಾಗವಾಡ ಶಾಸಕ ರಾಜು ಕಾಗೆ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳ ಕಾಲೆಳೆದಿದ್ದಾರೆ.

ಗುಂಡೇವಾಡಿ ಗ್ರಾಮದಲ್ಲಿ ಶನಿವಾರ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲು ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ಜೀವನದಲ್ಲಿ ಕಪ್ಪುಚುಕ್ಕೆ ಮೈಗಂಟಿಸಿಕೊಂಡಿಲ್ಲ. ಪ್ರಸ್ತುತ ಸಿಎಂ ಬದಲಾವಣೆ ವಿಚಾರವೂ ಇಲ್ಲ. ಆದರೂ ಯಾರ್‍ಯಾರೋ ಸಿಎಂ ಆಗುತ್ತೇನೆ ಎಂದರೆ ಅದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಪಂಚಮಸಾಲಿ ಮೀಸಲಾತಿಗಾಗಿ ರಾಜೀನಾಮೆಗೂ ಸಿದ್ಧ: ಕಾಂಗ್ರೆಸ್‌ ಶಾಸಕ ರಾಜು ಕಾಗೆ

ಮುಡಾ ಪ್ರಕರಣ ನ್ಯಾಯಾಲಯಲ್ಲಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ. ಮುಖ್ಯಮಂತ್ರಿ ವಿರುದ್ಧ ಯಾವುದೇ ತೀರ್ಪು ಬಂದಿಲ್ಲ. ಈ ಪ್ರಕರಣದಲ್ಲಿ ಅವರ ಪಾತ್ರವಿಲ್ಲ. ಕೋರ್ಟ್‌ನಲ್ಲಿ ನ್ಯಾಯ ಸಿಗುವ ಭರವಸೆ ಇದೆ. ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಲಾಗುತ್ತದೆ ಎನ್ನುವುದರಲ್ಲಿ ಹುರುಳಿಲ್ಲ. ಆ ಬಗ್ಗೆ ಚರ್ಚೆಯೂ ಆಗಿಲ್ಲ. ಅದು ಈ ಸಂದರ್ಭದಲ್ಲಿ ಅಪ್ರಸ್ತುತ ಎಂದು ಸ್ಪಷ್ಟಪಡಿಸಿದರು.

ಈ ವೇಳೆ ಮುಖಂಡರಾದ ಕೃಷ್ಣಾ ಸಕ್ಕರೆ ಕಾರ್ಖಾನೆ ನಿರ್ದೇಶಕ ಗೂಳಪ್ಪ ಜತ್ತಿ, ಮುಖಂಡರಾದ ಡಾ.ಅರವಿಂದರಾವ್ ಕಾರ್ಚಿ, ಶಿವಾನಂದ ಗೊಲಬಾವಿ, ಶಿದರಾಯ ತೇಲಿ, ಪಂಡಿತ ವಡ್ಡರ, ರಾಜು ಕಾಂಬಳೆ, ರವಿ ಕಾಂಬಳೆ, ಮಲ್ಲಿಕಾರ್ಜುನ ದಳವಾಯಿ, ಪೂರ್ಣಿಮಾ ಕಾಂಬಳೆ ಇತರರು ಇದ್ದರು.

ಕಾಂಗ್ರೆಸ್ ಪಕ್ಷದಲ್ಲಿ ಹೈ ಕಮಾಂಡಿದೆ, ಶಾಸಕರಿದ್ದಾರೆ, ಅವರು ನಿರ್ಧಾರ ಮಾಡಬೇಕು. ಸುಮ್ಮನೆ ಎಲ್ಲಿ ಬೇಕೋ ಅಲ್ಲಿ ಮಾತನಾಡುವುದಲ್ಲ. ಅಲ್ಲದೆ, ಸಿಎಂ ಬದಲಾವಣೆ ವಿಚಾರ ಬಂದೇ ಇಲ್ಲ ಎಂದು ಶಾಸಕ ರಾಜು ಕಾಗೆ ಹೇಳಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನ್ಯಾಷನಲ್ ಹೆರಾಲ್ಡ್ ಪ್ರಕರಣ ರೀತಿ RSS ವಿರುದ್ಧ ಯಾಕೆ ಕೇಸ್ ಇಲ್ಲ? ಕೇಂದ್ರದ ವಿರುದ್ಧ ಪ್ರಿಯಾಂಕ್ ಪ್ರಶ್ನೆಗಳ ಸುರಿಮಳೆ!
ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್