ಲೋಕಸಭೆಯ 28 ಸ್ಥಾನಗಳಲ್ಲೂ ಕಾಂಗ್ರೆಸ್‌ ಗೆಲುವಿಗೆ ಶ್ರಮಿಸಿ: ಶಾಸಕ ರಾಜು ಕಾಗೆ

Published : Nov 20, 2023, 08:06 PM IST
ಲೋಕಸಭೆಯ 28 ಸ್ಥಾನಗಳಲ್ಲೂ ಕಾಂಗ್ರೆಸ್‌ ಗೆಲುವಿಗೆ ಶ್ರಮಿಸಿ: ಶಾಸಕ ರಾಜು ಕಾಗೆ

ಸಾರಾಂಶ

ದೇಶದಲ್ಲೆಡೆ ಕಾಂಗ್ರೆಸ್‌ಗೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ನಮ್ಮ ರಾಜ್ಯದ ಯೋಜನೆಗಳು ಬೇರೆ ರಾಜ್ಯಗಳ ಚುನಾವಣೆಯಲ್ಲಿ ದೊಡ್ಡ ಚರ್ಚೆಯಾಗುತ್ತಿದೆ. ಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿ, ದೇಶದ ಚುಕ್ಕಾಣಿಯನ್ನು ಹಿಡಿಯಲು ರಾಜ್ಯದ 28 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದ ಕಾಗವಾಡ ಶಾಸಕ ರಾಜು ಕಾಗೆ 

ಕಾಗವಾಡ(ನ.20):  ಮುಂಬರುವ ಲೋಕಸಭಾ ಚುನಾವಣೆ ಎಂಬ ದೊಡ್ಡ ಯುದ್ಧ ಗೆಲ್ಲುವುದು ನಮ್ಮ ಗುರಿಯಾಗಿದ್ದು, ಕಾರ್ಯಕರ್ತರು ಹಾಗೂ ಮುಖಂಡರು ಇದಕ್ಕೆ ಪೂರ್ವ ತಯಾರಿ ಮಾಡಿಕೊಂಡು ಸಜ್ಜಾಗಬೇಕು ಎಂದು ಕಾಗವಾಡ ಶಾಸಕ ರಾಜು ಕಾಗೆ ತಿಳಿಸಿದರು.

ಭಾನುವಾರ ಐನಾಪುರ ಪಟ್ಟಣದಲ್ಲಿ ನಗರೋತ್ಥಾನ ಯೋಜನೆಯಡಿ ₹ 3 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರು ಬದಲಾವಣೆ ಬಯಸಿ 136 ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಿಸಿ ಅಧಿಕಾರಕ್ಕೆ ತಂದಿದ್ದಾರೆ. ಐದು ಗ್ಯಾರಂಟಿಗಳನ್ನು ಎರಡೇ ತಿಂಗಳಲ್ಲಿ ಅನುಷ್ಠಾನ ಮಾಡುವ ಮೂಲಕ ಜನಪರ ಆಡಳಿತ ನೀಡುತ್ತಿದ್ದೇವೆ. ನಮ್ಮದು ನುಡಿದಂತೆ ನಡೆಯುವ ಸರ್ಕಾರ ಎಂದರು.

'ಮೋದಿ ಗೆಲ್ಲಿಸಿ ಭಾರತ ಉಳಿಸಿ' ; ಶ್ರೀರಾಮ ಸೇನೆಯಿಂದ ಅಭಿಯಾನ ಶುರು: ಪ್ರಮೋದ್ ಮುತಾಲಿಕ್

ದೇಶದಲ್ಲೆಡೆ ಕಾಂಗ್ರೆಸ್‌ಗೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ನಮ್ಮ ರಾಜ್ಯದ ಯೋಜನೆಗಳು ಬೇರೆ ರಾಜ್ಯಗಳ ಚುನಾವಣೆಯಲ್ಲಿ ದೊಡ್ಡ ಚರ್ಚೆಯಾಗುತ್ತಿದೆ. ಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿ, ದೇಶದ ಚುಕ್ಕಾಣಿಯನ್ನು ಹಿಡಿಯಲು ರಾಜ್ಯದ 28 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದರು.

ಪಕ್ಷ ಅಧಿಕಾರಕ್ಕೆ ಬರಲು ಕಾರ್ಯಕರ್ತರ ಶ್ರಮ ಬಹಳ ಇದೆ. ಕಾರ್ಯಕರ್ತರ ಸಂಕಷ್ಟಗಳಿಗೂ ನಾವು ಸ್ಪಂದಿಸಬೇಕು. ಜನಸಾಮಾನ್ಯರಲ್ಲಿ ಸರ್ಕಾರದ ಬಗ್ಗೆ ಒಳ್ಳೆಯ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಈ ನಿಟ್ಟಿನಲ್ಲಿ ಎಲ್ಲರೂ ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳನ್ನು ಮತದಾರರಿಗೆ ತಲುಪಿಸುವಂತೆ ಸಲಹೆ ನೀಡಿದರು.

ಪಿಕೆಪಿಎಸ್ ಅಧ್ಯಕ್ಷ ಪ್ರವೀಣ ಗಾಣಿಗೇರ, ಜನಶಕ್ತಿ ಬ್ಯಾಂಕಿನ ಅಧ್ಯಕ್ಷ ಪ್ರಶಾಂತರಾವ್ ಅಪರಾಜ, ಪಪಂ ಸದಸ್ಯರಾದ ಅರುಣ ಗಾಣಿಗೇರ, ಸಂಜಯ ಕುಚನೂರೆ, ಸಂಜಯ ಭಿರಡಿ, ಸುರೇಶ ಗಾಣಿಗೇರ, ಗುರುರಾಜ ಮಡಿವಾಳರ, ಕುಮಾರ, ಎಸ್ಸಿ,ಎಸ್ಟಿ ತಾಲೂಕಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ಸಿದರಾಯ ಗಾಡಿವಡ್ಡರ, ಮುಖಂಡರಾದ ಡಾ.ಅರವಿಂದರಾವ್ ಕಾರ್ಚಿ, ಪ್ರಕಾಶ ಕೋರ್ಬು, ವಿಶ್ವನಾಥ ನಾಮದಾರ, ಅನೀಲ ಸತ್ತಿ, ಶೀತಲ ಬಾಲೋಜಿ, ಮಲ್ಲು ಕೋಲಾರ, ಸಂಜಯ ಕುಸನಾಳೆ, ಪ್ರಕಾಶ ಚಿನಗಿ, ವಿಕಾಸ ಪಂಡರೆ, ವಸಂತ ಗಾಡಿವಡ್ಡರ, ಕುಮಾರ ಗಾಡಿವಡ್ಡರ ಸೇರಿದಂತೆ ನೂರಾರು ಮಹಿಳೆಯರು ಉಪಸ್ಥಿತರಿದ್ದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ