Karnataka election 2023: ಬೂತ್‌ ಏಜೆಂಟ್‌ ಆಗಿದ್ದ ಬಿಜೆಪಿ ಕಾರ್ಯಕರ್ತ ಮೃತ್ಯು! ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

Published : May 11, 2023, 03:27 PM IST
Karnataka election 2023: ಬೂತ್‌ ಏಜೆಂಟ್‌ ಆಗಿದ್ದ ಬಿಜೆಪಿ ಕಾರ್ಯಕರ್ತ ಮೃತ್ಯು! ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಸಾರಾಂಶ

ಚಿಂಚೋಳಿಯಲ್ಲಿ ನಿನ್ನೆ ನಡೆದ ಮತದಾನದ ವೇಳೆ ಮತಗಟ್ಟೆಯಲ್ಲಿ ಬೂತ್‌ ಏಜೆಂಟ್‌ ಆಗಿ ಕಾರ್ಯ ನಿರ್ವಹಿಸಿದ್ದ ಬಿಜೆಪಿ ಕಾರ್ಯಕರ್ತನೊಬ್ಬ ಇಂದು (ಗುರುವಾರ) ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. 

ಕಲಬುರಗಿ (ಮೇ 11): ಚಿಂಚೋಳಿಯಲ್ಲಿ ನಿನ್ನೆ ನಡೆದ ಮತದಾನದ ವೇಳೆ ಮತಗಟ್ಟೆಯಲ್ಲಿ ಬೂತ್‌ ಏಜೆಂಟ್‌ ಆಗಿ ಕಾರ್ಯ ನಿರ್ವಹಿಸಿದ್ದ ಬಿಜೆಪಿ ಕಾರ್ಯಕರ್ತನೊಬ್ಬ ಇಂದು (ಗುರುವಾರ) ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ರಾಜ್ಯಾದ್ಯಂತ ನಿನ್ನೆ ಬುಧವಾರ ಶಾಂತಿಯುತವಾಗಿ ಮತದಾನ ನಡೆದಿದ್ದು, ಶೇ.72 ಪ್ರಮಾಣ ಮತದಾನವಾಗಿದೆ. ಆದರೆ, ವಿಜಯಪುರ, ಯಾದಗಿರಿ, ಬೆಂಗಳೂರು, ಮೈಸೂರು ಸೇರಿ ಕೆಲವು ಭಾಗಗಳಲ್ಲಿ ಮಾತ್ರ ಗಲಾಟೆ ನಡೆದಿತ್ತು. ಆದರೆ, ಕಲಬುರಗಿ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ನಡೆದಿತ್ತು. ಈ ವೇಳೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಸಲಗರ ಬಸಂತಪುರ ತಾಂಡಾ ನಿವಾಸಿ ರಾಮು ರಾಠೋಡ್‌ (45) ಭಾರಿ ಉತ್ಸಾಹದಿಂದಲೇ ಬೂತ್‌ ಏಜೆಂಟ್‌ ಆಗಿ ಕಾರ್ಯ ನಿರ್ವಹಿಸಿದ್ದನು. ಆದರೆ, ರಾತ್ರಿ ವೇಳೆ ಕಾಣೆಯಾಗಿದ್ದ ರಾಮು ಅವರು ಬೆಳಗ್ಗೆ ಗ್ರಾಮದ ಹೊರಹೊಲಯದ ಜಮೀನೊಂದರಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

Karnataka Election 2023: ಯಾದಗಿರಿಯ ಕೆಂಭಾವಿ, ಸುರಪುರದಲ್ಲಿ ಸೆಕ್ಷನ್‌ 144 ಜಾರಿ: 2 ದಿನ ಹೊರಬರುವಂತಿಲ್ಲ

ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆಯಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಲಗರ ಬಸಂತಪುರದಲ್ಲಿ ಘಟನೆ ನಡೆದಿದೆ. ರಾಮು ರಾಠೋಡ್ (45) ಶವವಾಗಿ ಪತ್ತೆಯಾದ ಬಿಜೆಪಿ ಕಾರ್ಯಕರ್ತನಾಗಿದ್ದಾನೆ. ರಾಮು ಕುಟುಂಬದವರು ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಆರೋಪ ಮಾಡಿದ್ದಾರೆ. ರಾಮು, ಸಲಗರ ಬಸಂತಪುರ ತಾಂಡಾ ನಿವಾಸಿ ಆಗಿದ್ದಾನೆ. ನಿನ್ನೆ  ನಡೆದ ಚುನಾವಣೆಯಲ್ಲಿ  ಬಿಜೆಪಿ ಪೋಲಿಂಗ್ ಬೂತ್ ಏಜೆಂಟ್ ಆಗಿ ಕಾರ್ಯ ನಿರ್ವಹಿಸಿದ್ದನು. ಆದರೆ, ಕಳೆದ ರಾತ್ರಿ ಮನೆಗೆ ಬಂದಿರಲಿಲ್ಲ. ಇಂದು ಮುಂಜಾನೆ ತಾಂಡಾದ ಹೊರವಲಯದಲ್ಲಿ ಶವವಾಗಿ ಪತ್ತೆಯಾಗಿದೆ. ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಾಡುಹಗಲೇ ಝಳಪಿಸಿದ ಮಚ್ಚು: ಬಸ್‌ ಚಾಲಕನ ಕೊಚ್ಚಿ ಕೊಲೆ: 
ಕಲಬುರಗಿ ನಗರದ ಸಿಟಿ ಬಸ್‌ ನಿಲ್ದಾಣದಲ್ಲಿ ಹಾಡು ಹಗಲೇ ಮಾರಕಾಸ್ತ್ರಗಳಿಂದ ದಿಂದ ಕೊಚ್ಚಿ ಬಸ್ ಚಾಲಕನ ಬರ್ಬರ ಹತ್ಯೆ ಮಾಡಲಾಗಿದೆ. ಡಿಪೋ ನಂಬರ 3ರ ಚಾಲಕ ನಾಗಯ್ಯ ಸ್ವಾಮಿ (45) ಹತ್ಯೆಯಾದ ವ್ಯಕ್ತಿಯಾಗಿದ್ದಾರೆ. ಸಿಟಿ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸಿದ್ದ ವೇಳೆ ಘಟನೆ ನಡೆದಿದೆ. ಬಸ್‌ನಲ್ಲಿ ಇದ್ದಾಗಲೇ 3 ಜನ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಬಸ್‌ ನಿಂದ ಇಳಿದು ತಪ್ಪಿಸಿಕೊಂಡು ಓಡಿ ಹೋದರೂ ಬಿಡದೇ ಅಟ್ಟಾಡಿಸಿಕೊಮಡು ಹೋಗಿ ಕೊಚ್ಚಿ ಕೊಲೆ ಮಾಡಿದ್ದಾರೆ. 

BENGALURU ACCIDENT: ಬೈಕ್‌ಗೆ ಡಿಕ್ಕಿ ಹೊಡೆದ ಟಿಪ್ಪರ್‌: ಚಕ್ರದಡಿ ಸಿಲುಕಿ ಸಾವನ್ನಪ್ಪಿದ ಮಹಿಳೆ

ಹಳೆಯ ವೈಷಮ್ಯದ ಹಿನ್ನೆಲೆ ದಾಳಿ:
ಇನ್ನು ಕಲಬುರಗಿ ನಗರ ಬಸ್‌ ನಿಲ್ದಾಣದಲ್ಲಿ ಹಾಡಹಗಲೇ ಬಸ್‌ ಚಾಲಕನನ್ನು ಕೊಲೆ ಮಾಡುವುದಕ್ಕೆ ಕಾರಣ ಹಳೆಯ ವೈಷಮ್ಯ ಎಮದು ಹೇಳಲಾಗುತ್ತಿದೆ. ಆದರೆ, ಪೊಲೀಸರ ತನಿಖೆಯಿಂದಲೇ ಸತ್ಯ ಹೊರಬರಬೇಕಿದೆ. ಆದರೆ, ಮಾರಕಾಸ್ತ್ರಗಳಿಂದ ಬಸ್‌ ನಿಲ್ದಾಣದಲ್ಲಿ ಕರ್ತವ್ಯನಿರತ ಬಸ್‌ ಚಾಲಕನನ್ನು ಅಟ್ಟಾಡಿಸಿಕೊಂಡು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡುವುದನ್ನು ಸಾವಿರಾರು ಜನರು ಕಣ್ಣಾರೆ ನೋಡಿದ್ದು, ಭಯಭೀತರಾಗಿದ್ದಾರೆ. ಬಸ್‌ ಚಾಲಕ ಕೈ, ಕಾಲು ತುಂಡಾಗಿ ಬಿದ್ದಿದ್ದು, ರಕ್ತದೋಕುಳಿಯೇ ಹರಿದಿದೆ. ಘಟನಾ ಸ್ಥಳಕ್ಕೆ ಬ್ರಹ್ಮಪುರ ಠಾಣೆ ಪೊಲೀಸರ ಭೇಟಿ ಪರಿಶೀಲನೆ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪ್ರಧಾನಿಗೆ ಪತ್ರ ಬರೆಯುವುದರಲ್ಲಿ ಸಿದ್ದರಾಮಯ್ಯ, ಡಿಕೆಶಿ ನಿಸ್ಸೀಮರು: ಬಿ.ವೈ.ವಿಜಯೇಂದ್ರ
ಕುಡುಕರ ಲಿವರ್‌ ಚಿಕಿತ್ಸೆಗೆ ಹಣ ಕೇಳಿದ ಶಾಸಕರು: ಪರಿಷತ್‌ನಲ್ಲಿ ಸ್ವಾರಸ್ಯಕರ ಚರ್ಚೆ