Karnataka cabinet: ಕಲಘಟಗಿ ಕ್ಷೇತ್ರಕ್ಕೆ ಸಂತೋಷ್ ತಂದ ಲಾಡ್ ಸಚಿವ ಸ್ಥಾನ!

Published : May 28, 2023, 11:55 AM IST
Karnataka cabinet: ಕಲಘಟಗಿ ಕ್ಷೇತ್ರಕ್ಕೆ ಸಂತೋಷ್ ತಂದ ಲಾಡ್ ಸಚಿವ ಸ್ಥಾನ!

ಸಾರಾಂಶ

ಸಂತೋಷ ಲಾಡ್‌ ಅವರಿಗೆ ಪ್ರಸ್ತುತ ಕಾಂಗ್ರೆಸ್‌ ಸರ್ಕಾರದಲ್ಲಿ ಮತ್ತೊಮ್ಮೆ ಸಚಿವರಾಗುವ ಭಾಗ್ಯ ದೊರೆತಿದೆ. ಇದು ಕಲಘಟಗಿ ವಿಧಾನಸಭಾ ಕ್ಷೇತ್ರ ಮಾತ್ರವಲ್ಲದೇ ಇಡೀ ಧಾರವಾಡ ಜಿಲ್ಲೆಗೆ ಶುಭ ಸುದ್ದಿಯು ಹೌದು.

ಬಸವರಾಜ ಹಿರೇಮಠ

ಧಾರವಾಡ (ಮೇ.28) : ಸಂತೋಷ ಲಾಡ್‌ ಅವರಿಗೆ ಪ್ರಸ್ತುತ ಕಾಂಗ್ರೆಸ್‌ ಸರ್ಕಾರದಲ್ಲಿ ಮತ್ತೊಮ್ಮೆ ಸಚಿವರಾಗುವ ಭಾಗ್ಯ ದೊರೆತಿದೆ. ಇದು ಕಲಘಟಗಿ ವಿಧಾನಸಭಾ ಕ್ಷೇತ್ರ ಮಾತ್ರವಲ್ಲದೇ ಇಡೀ ಧಾರವಾಡ ಜಿಲ್ಲೆಗೆ ಶುಭ ಸುದ್ದಿಯು ಹೌದು.

2002ರಲ್ಲಿ ಸಂಡೂರಿನ ಪಟ್ಟಣ ಪಂಚಾಯ್ತಿ ಸದಸ್ಯ ಸ್ಥಾನದಿಂದ ತಮ್ಮ ರಾಜಕೀಯ ಶುರು ಮಾಡಿದ ಸಂತೋಷ ಲಾಡ್‌ಗೆ ಇದೀಗ ಸಿದ್ದರಾಮಯ್ಯನವರ ಸರ್ಕಾರದಲ್ಲಿ 2ನೇ ಬಾರಿಗೆ ಮಂತ್ರಿಭಾಗ್ಯ. ಕೈ ಪಕ್ಷದ ಶಿಸ್ತಿನ ಸಿಪಾಯಿ ಆಗಿರುವ ಸಂತೋಷ ಮೂಲತಃ ಬಳ್ಳಾರಿ ಜಿಲ್ಲೆಯ ಸಂಡೂರಿನವರು. ಸಂಡೂರಿನ ಪಟ್ಟಣ ಪಂಚಾಯ್ತಿ ಸದಸ್ಯರಾಗಿ ಆಯ್ಕೆಯಾಗಿ 2004ರಲ್ಲಿ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾದವರು.

 

ಕಲಘಟಗಿಗೆ ಸಕ್ಕರೆ ಕಾರ್ಖಾನೆ ತರುವರೇ ಸಂತೋಷ ಲಾಡ್‌!

ಉಚಿತ ಬೋರವೆಲ್‌:

2008ರಲ್ಲಿ ಏಕಾಏಕಿ ಅಲ್ಲಿಂದ ಧಾರವಾಡ ಜಿಲ್ಲೆಯ ಕಲಘಟಗಿ ಕ್ಷೇತ್ರಕ್ಕೆ ತಮ್ಮ ರಾಜಕೀಯವನ್ನು ವರ್ಗಾಯಿಸಿದ ಲಾಡ್‌ ಕಡಿಮೆ ದಿನಗಳಲ್ಲಿ ಕ್ಷೇತ್ರದ ಜನರ ಪ್ರೀತಿಗೆ ಪಾತ್ರರಾದವರು. ಜನರ ಸಮಸ್ಯೆಗಳಿಗೆ ಸರ್ಕಾರದಿಂದ ಸೌಲಭ್ಯಗಳ ಜೊತೆಗೆ ವೈಯಕ್ತಿಕವಾಗಿ ಆರ್ಥಿಕ ಸಹಾಯ, ದಾನ ಮಾಡಿದ್ದೇ ಜಾಸ್ತಿ. ಸ್ವಂತ ಬೋರವೆಲ್‌ ವಾಹನ ಇಟ್ಟು ಕ್ಷೇತ್ರದ ರೈತರಿಗೆ ಉಚಿತ ಬೋರ್‌ವೆಲ್‌ ಕೊರೆಸಿದ ಹಿರಿಮೆ ಇವರದು. ಹೀಗಾಗಿ ಒಂದಿಷ್ಟುವರ್ಷಗಳ ಕಾಲ ಕ್ಷೇತ್ರದಲ್ಲಿ ಲಾಡ್‌ ತುಂಬ ಪ್ರಸಿದ್ಧಿ ಪಡೆದಿದ್ದರು.

ಇದೇ ಪ್ರಸಿದ್ಧಿಯಲ್ಲಿ ಲಾಡ್‌ ಸರಳವಾಗಿ 2013ರಲ್ಲಿ ಆಯ್ಕೆಯಾದರು. ಜೊತೆಗೆ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಖಾತೆ ಹಾಗೂ ತದನಂತರ ಕಾರ್ಮಿಕ ಇಲಾಖೆಯನ್ನು ಸಮರ್ಥವಾಗಿ ನಿಭಾಯಿಸಿದರು. ಶಾಸಕರಾಗಿ, ಸಚಿವರಾದರೂ ಕ್ಷೇತ್ರವನ್ನು ನಿರ್ಲಕ್ಷ್ಯ ಮಾಡಿದ್ದರಿಂದ 2018ರಲ್ಲಿ ಲಾಡ್‌ ಅವರನ್ನು ಮತದಾರರು ಕೈ ಬಿಟ್ಟರು.

Karnataka Election Results: 11 ಸಾವಿರ ಮತಗಳಿಂದ ಸಂತೋಷ್‌ ಲಾಡ್‌ ಜಯಭೇರಿ

 

ವಿದ್ಯಾರ್ಥಿಗಳಿಗೆ ನೆರವು:

ಸಂತೋಷ ಲಾಡ್‌ ನೂರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ಸಹಕಾರ ನೀಡಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ಸಾವಿರಾರು ವಿದ್ಯಾರ್ಥಿಗಳಿಗೆ ಆನಲೈನ್‌ ಮೂಲಕ ಉಚಿತ ತರಬೇತಿ ಸಹ ತಮ್ಮ ¶ೌಂಡೇಶನ್‌ ವತಿಯಿಂದ ನಡೆಸುತ್ತಿದ್ದಾರೆ. 2018ರ ಅಧಿಕಾರಾವಧಿಯಲ್ಲಿ ಕ್ಷೇತ್ರ ನಿರ್ಲಕ್ಷ್ಯ ಮಾಡಿದ ತಪ್ಪು ತಿದ್ದಿಕೊಂಡ ಲಾಡ್‌ ಕೋವಿಡ್‌ ಹಾಗೂ ಅತಿವೃಷ್ಟಿಕಾಲದಲ್ಲಿ ಮತ್ತೇ ಕ್ಷೇತ್ರದತ್ತ ಗಮನ ಹರಿಸಿದರು. ಕೋವಿಡ್‌ನಲ್ಲಿ ತೊಂದರೆಗೆ ಒಳಗಾದ ನರ್ಸ್‌ಗಳು, ವೈದ್ಯರು, ಅಂಗನವಾಡಿ ಕಾರ್ಯಕರ್ತರು ಹಾಗೂ ಕೋವಿಡ್‌ ವಾರಿಯರ್ಸ್‌ಗಳಿಗೆ ಗೌರವ ಸಲ್ಲಿಸಿದರು. ಸ್ವಾತಂತ್ರೋತ್ಸವದ 75ನೇ ವರ್ಷಾಚರಣೆ ನಿಮಿತ್ತ ಕಲಘಟಗಿ ಕ್ಷೇತ್ರದಲ್ಲಿ ಸುಮಾರು 9 ಕಿ.ಮೀ. ಅಂತರದ ರಾಷ್ಟ್ರಧ್ವಜ ಮೆರವಣಿಗೆ ಮಾಡಿದರು. ಇದರೊಂದಿಗೆ ಮತ್ತೇ ಕ್ಷೇತ್ರದಲ್ಲಿ ಸಂಚರಿಸಿ ಮೊದಲಿನ ಪ್ರಸಿದ್ಧಿಯನ್ನು ಪಡೆದುಕೊಳ್ಳುವ ಮೂಲಕ 2023ರಲ್ಲಿ ಮತ್ತೇ ಶಾಸಕರಾಗಿ ಆಯ್ಕೆಯಾಗಿದ್ದು ಇದೀಗ ಸಚಿವ ಸ್ಥಾನ ಸಹ ಪಡೆದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ
CM-DCM ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ ಪುತ್ರ ಶಾಕಿಂಗ್ ಹೇಳಿಕೆ