ಕನಕಪುರ ಸ್ಪರ್ಧೆ ನನ್ನ ತೀರ್ಮಾನವಲ್ಲ: ಸಚಿವ ಅಶೋಕ್‌

Published : Apr 12, 2023, 09:51 AM ISTUpdated : Apr 12, 2023, 09:58 AM IST
ಕನಕಪುರ ಸ್ಪರ್ಧೆ ನನ್ನ ತೀರ್ಮಾನವಲ್ಲ: ಸಚಿವ ಅಶೋಕ್‌

ಸಾರಾಂಶ

ಮೋದಿ, ಶಾ ಏನು ಹೇಳ್ತಾರೋ ಹಾಗೆ ಮಾಡುವೆ, ಮಾಜಿ ಪ್ರಧಾನಿ, ಮಾಜಿ ಸಿಎಂಗಳೂ ಸೋತಿದ್ದಾರೆ, ಜನರ ಇಚ್ಛೆ ಏನು ಎಂಬುದನ್ನು ಕಾದು ನೋಡೋಣ: ಸಚಿವ ಆರ್‌.ಅಶೋಕ್‌ 

ಬೆಂಗಳೂರು(ಏ.12):  ಕನಕಪುರದಲ್ಲಿ ಸ್ಪರ್ಧಿಸಬೇಕು ಎನ್ನುವುದು ಪಕ್ಷದ ತೀರ್ಮಾನವೇ ಹೊರತು ನನ್ನ ತೀರ್ಮಾನವಲ್ಲ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಹೇಳಿದ್ದಾರೆ.

ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ನಾನು ಮೊದಲನೇಯದಾಗಿ ಬಿಜೆಪಿಯ ಸೈನಿಕ. ನಮ್ಮ ಕಮಾಂಡರ್‌ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್‌ ಶಾ ಅವರು ಏನು ಹೇಳುತ್ತಾರೋ ಹಾಗೆ ಮಾಡಬೇಕು. ನಾನು ತುರ್ತು ಪರಿಸ್ಥಿತಿಯಲ್ಲಿ ಜೈಲಿಗೆ ಹೋಗಿದ್ದೆ. ಬಾಬರಿ ಮಸೀದಿ ಧ್ವಂಸ ಸಮಯದಲ್ಲಿಯೂ ಹೋರಾಟ ಮಾಡಿದ್ದೆ ಎಂದರು ತಿಳಿಸಿದರು.

ಟ್ರಬಲ್‌ ಶೂಟರ್‌ ಡಿಕೆಶಿ ವಿರುದ್ಧ ಸಾಮ್ರಾಟ ಆರ್‌.ಅಶೋಕ್‌ ಕಣಕ್ಕೆ

ನಮ್ಮ ನಾಯಕರು ಎರಡು ಕಡೆ ಸ್ಪರ್ಧೆ ಮಾಡುವಂತೆ ಹೇಳಿದ್ದಾರೆ. ಕನಕಪುರದಲ್ಲಿ ಸ್ಪರ್ಧೆ ಮಾಡಬೇಕು ಎನ್ನುವುದು ಪಕ್ಷದ ತೀರ್ಮಾನವೇ ಹೊರತು ನನ್ನ ತೀರ್ಮಾನವಲ್ಲ. ಇದೊಂದು ತಂತ್ರಗಾರಿಕೆ. ನಮ್ಮ ಗೆಲುವು ಶತಸಿದ್ಧ. ಮಾಜಿ ಪ್ರಧಾನಿ ಇಂದಿರಾಗಾಂಧಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌.ಯಡಿಯೂರಪ್ಪ, ಸಿದ್ದರಾಮಯ್ಯ, ಜೆಡಿಎಸ್‌ ವರಿಷ್ಠ ದೇವೇಗೌಡರೂ ಸೋತಿದ್ದಾರೆ. ಜನರ ಇಚ್ಛೆ ಏನು ಎನ್ನುವುದು ಕಾದು ನೋಡೋಣ ಎಂದರು.

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ
CM-DCM ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ ಪುತ್ರ ಶಾಕಿಂಗ್ ಹೇಳಿಕೆ