
ನವದೆಹಲಿ(ಮಾ.27): ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ನಟಿ ಕಂಗನಾ ರಣಾವತ್ ಅವರು, ತಮ್ಮ ಕುರಿತು ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನೇತ್ ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳುವ ಕುರಿತು ಚಿಂತಿಸುತ್ತಿರುವುದಾಗಿ ತಿಳಿಸಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ‘ಸುಪ್ರಿಯಾ ತಮ್ಮ ಆಕ್ಷೇಪಾರ್ಹ ಪೋಸ್ಟ್ ಮೂಲಕ ಛೋಟಾ ಕಾಶಿ ಎಂದೇ ಕರೆಯಲಾಗುವ ಮಂಡಿ ಕ್ಷೇತ್ರದ ಜನತೆಯನ್ನು ಅವಮಾನಿಸಿದ್ದಾರೆ. ಆಕೆಯ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಚಿಂತಿಸುತ್ತಿದ್ದೇನೆ’ ಎಂದು ತಿಳಿಸಿದರು. ಇದೇ ವೇಳೆ ಮಂಗಳವಾರ ರಾತ್ರಿ ಈ ಕುರಿತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೂ ಮುಂದಿನ ಕ್ರಮ ಕೈಗೊಳ್ಳುವ ಕುರಿತು ಚರ್ಚಿಸಿದರು.
ಪ್ರತಿ ಹೆಣ್ಣು ತನ್ನ ಘನತೆಗೆ ಅರ್ಹ, ಕಾಂಗ್ರೆಸ್ ನಾಯಕಿಯ ವಿವಾದಾತ್ಮಕ ಪೋಸ್ಟ್ಗೆ ಕಂಗನಾ ತಿರುಗೇಟು!
ಸುಪ್ರಿಯಾ ತಮ್ಮ ಇನ್ಸ್ಟಾ ಖಾತೆಯಲ್ಲಿ ಕಂಗನಾಗೆ, ‘ಮಂಡಿಯಲ್ಲಿ ನಿನ್ನ ರೇಟ್ ಎಷ್ಟು?’ ಎಂದು ಪ್ರಶ್ನಿಸಿದ್ದರು.
ಕಾಂಗ್ರೆಸ್ ಕಿಡಿ:
ಈ ನಡುವೆ ಕಾಂಗ್ರೆಸ್ ಪಕ್ಷ ಈ ಬಗ್ಗೆ ಪ್ರತಿಕ್ರಿಯಿಸಿ, ‘ರಾಜಕೀಯದಲ್ಲಿ ಕೀಳು ಮಾತುಗಳನ್ನು ಕಾಂಗ್ರೆಸ್ ಅನುಮೋದಿಸುವುದಿಲ್ಲ. ಸುಪ್ರಿಯಾ ಅವರು ಯಾರಿಂದ ಈ ಸಂದೇಶ ರವಾನೆ ಆಗಿದೆ ಎಂದು ಪರಿಶೀಲಿಸುವ ಭರವಸೆ ನೀಡಿದ್ದಾರೆ’ ಎಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.